ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ: ಕ್ರಿಕೆಟ್‌, ಹಗ್ಗಜಗ್ಗಾಟ 


Team Udayavani, Oct 31, 2018, 5:19 PM IST

554552.jpg

ನವಿಮುಂಬಯಿ: ಕ್ರೀಡೆಯಿಂದ ನಮ್ಮ ಶಾರೀರಿಕ ಕ್ಷಮತೆ ಹೆಚ್ಚುವುದರಿಂದ ಕ್ರೀಡಾಮನೋಭಾವ ಬೆಳೆಯುತ್ತದೆ. ಹಿಂದಿನ ಕಾಲದಲ್ಲಿ ದೈನಂದಿನ ಕೆಲಸ ಕಾರ್ಯಗಳಿಗೆ ನಮ್ಮ ಆರೋಗ್ಯಕ್ಕೆ ವ್ಯಾಯಾಮ ನೀಡುತ್ತಿದ್ದವು. ಆದರೆ ಇಂದಿನ ಆಧುನಿಕ ಯುಗದಲ್ಲಿ ನಮಗೆ ಶಾರೀರಿಕ ವ್ಯಾಯಾಮವು ದೊರೆಯಲು ನಾವು ಕ್ರೀಡೆ ಹಾಗೂ ಇತರ ವಿಧಾನಗಳನ್ನು ಅನುಸರಿಸಬೇಕಾಗುತ್ತದೆ. ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಇಂತಹ ಕ್ರೀಡೆಗಳನ್ನು ಆಯೋಜಿಸುವುದರಿಂದ ಯುವ ಜನರನ್ನು ಒಂದುಗೂಡಿಸುವ ಕೆಲಸ ಅಭಿನಂದ ನೀಯವಾಗಿದೆ ಎಂದು ಸ್ಥಳೀಯ ನೆರೂಲ್‌ ಶ್ರೀ ಶನೀಶ್ವರ  ಮಂದಿರದ ಅಧ್ಯಕ್ಷ, ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರು  ನುಡಿದರು.

ಅ.28 ರಂದು ಘನ್ಸೋಲಿ ಮೂಕಾಂಬಿಕಾ ಮಂದಿರದಲ್ಲಿ ಮೂಕಾಂಬಿಕಾ ದೇವಾಲಯದ ಉಪಸಮಿತಿ ಆಯೋಜಿಸಿದ್ದ ಮೂಕಾಂಬಿಕಾ ಟ್ರೋಫಿ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿ ತರಿದ್ದು ಮಾತನಾಡಿದ ಅವರು, ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಬಹಳ ಮುಖ್ಯ ವಾಗುತ್ತದೆ ಎಂದು ನುಡಿದು ವಿಜೇತ ತಂಡಗಳನ್ನು ಅಭಿನಂದಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಮಾತನಾಡಿ, ಶ್ರೀ ಕ್ಷೇತ್ರದ ಉಪಸಮಿತಿಯ ಯುವಕರು ಕಠಿಣ ಪರಿಶ್ರಮದಿಂದ ಇಂದಿನ ಕ್ರೀಡಾಕೂಟವನ್ನು ಆಯೋಜಿಸಿ ಯಶಸ್ವಿಯಾಗಿದ್ದಾರೆ. ಅವರ ಕಾರ್ಯ ನಿಜವಾಗಿಯೂ ಅಭಿನಂದನೀಯವಾಗಿದೆ. ಶ್ರೀ ಕ್ಷೇತ್ರದಲ್ಲಿ ನಡೆರುವ ಕಾರ್ಯಗಳಿಗೆ ಇದು ಪ್ರೇರಣೆ ಯಾಗಿದೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಯುವ ಜನರು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಇಂತಹ ಕ್ರೀಡೋತ್ಸವಗಳು ನಮ್ಮನ್ನು ಜಾತಿ, ಮತ, ಧರ್ಮವನ್ನು ಮರೆತು ಒಂದುಗೂಡಿಸುವ ಕಾರ್ಯವನ್ನು ಮಾಡುತ್ತದೆ. ಇಂತಹ ಕಾರ್ಯಕ್ರಮಗಳಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಅತಿಥಿಯಾಗಿ ಆಗಮಿಸಿದ ಭಾಂಡೂಪ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ದಕ್ಷಿಣ ಭಾರತೀಯ ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಇವರು ಮಾತನಾಡಿ, ಕ್ಷೇತ್ರದ ತುಳು-ಕನ್ನಡಿಗರು ಸಂಘಟಿತರಾಗಿ ಇಂತಹ ಕಾರ್ಯಕ್ರಮವನ್ನು ನೋಡುವಾಗ ಸಂತೋಷವಾಗುತ್ತಿದೆ. ನಾವು ಸಂಘಟಿತರಾದಾಗ ನಮ್ಮ ಶಕ್ತಿ ಹೆಚ್ಚುತ್ತದೆ. ಕ್ರೀಡೆಯಿಂದಾಗಿ ಇಲ್ಲಿ ಯುವ ಜನತೆ ಒಟ್ಟು ಸೇರುತ್ತಾರೆ. ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ನುಡಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಶ್ರೀ ಮೂಕಾಂಬಿಕಾ ಮಂದಿರದ ಉಪಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು, ಉದ್ಯಮಿ ಸತೀಶ್‌ ಆರ್‌. ಶೆಟ್ಟಿ, ಶ್ರೀ ಗಣೇಶೋತ್ಸವ ಸಮಿತಿ ಅಲೆವೂರು ಅಧ್ಯಕ್ಷ ಉಮೇಶ್‌ ಜಿ. ಶೆಟ್ಟಿ, ಉದ್ಯಮಿಗಳಾದ  ಮೋಹನ್‌ ಮಜ್ಜಾರ್‌, ಪ್ರಮೋದ್‌ ಕರ್ಕೇರ, ಉದ್ಯಮಿ, ರಾಜಕೀಯ ನೇತಾರ ಜಯಪ್ರಕಾಶ್‌ ಶೆಟ್ಟಿ, ಉದ್ಯಮಿ ಗಿರೀಶ್‌ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ.  ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕ್ಷೇತ್ರದ ಕಾರ್ಯದರ್ಶಿ ಸುರೇಶ್‌ ಕೋಟ್ಯಾನ್‌ ಕಾರ್ಯಕ್ರಮ ನಿರ್ವಹಿಸಿದರು. ಶ್ರೀ ಮೂಕಾಂಬಿಕಾ ಚಾರಿಟೇಬಲ್‌ ಟ್ರಸ್ಟ್‌ನ ಕಾರ್ಯದರ್ಶಿ ಹರೀಶ್‌ ಶೆಟ್ಟಿ ಪಡುಬಿದ್ರೆ ವಿಜೇತ ತಂಡಗಳ ಹೆಸರು ಘೋಷಿಸಿದರು. ಉತ್ತಮ ಎಸೆತಗಾರರಾಗಿ ಸಂಜಯ್‌, ಉತ್ತಮ ದಾಂಡಿಗರಾಗಿ ವಿನೀತ್‌, ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ನಿಕಿಲ್‌ ಹಾಗೂ ಸರಣಿ ಶ್ರೇಷ್ಟ ಪುರಸ್ಕಾರವನ್ನು ಸಂಕೇತ್‌ ಅವರು ಪಡೆದುಕೊಂಡರು. ಸಮಾರಂಭದಲ್ಲಿ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಉದ್ಯಮಿ ಸತೀಶ್‌ ಶೆಟ್ಟಿ ದಂಪತಿ, ಉಪಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್‌ ಕೆ. ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. 

ಬಾಕ್ಸ್‌ ಕ್ರಿಕೆಟ್‌ನಲ್ಲಿ ಸಾನ್ವಿ ಸ್ಟಾರ್‌ ಪ್ರಥಮ, ಶ್ರೀ ಗಣೇಶ್‌ ಎ. ತಂಡ ದ್ವಿತೀಯ ಬಹುಮಾನ ಪಡೆಯಿತು. ಮಹಿಳೆಯರ ಹಗ್ಗಜಗ್ಗಾಟ ವಿಭಾಗದಲ್ಲಿ ಟೀಮ್‌ ರುದ್ರ ಭಾಂಡೂಪ್‌ ತಂಡ ಪ್ರಥಮ, ಬಂಟ್ಸ್‌ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ ದ್ವಿತೀಯ, ಪುರುಷರ ವಿಭಾಗದ ಹಗ್ಗಜಗ್ಗಾಟದಲ್ಲಿ ಬಂಟರ ಸಂಘ ಮುಂಬಯಿ ಯುವ ವಿಭಾಗ ಪ್ರಥಮ, ದೇವಾಡಿಗ ಜವನೆರ್‌ ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.