ಬಾಲ್ಯವಿವಾಹ: ಎಲ್ಲರಲ್ಲಿ ಜಾಗೃತಿ ಮೂಡಿಸಬೇಕಿದೆ


Team Udayavani, Nov 1, 2018, 3:49 PM IST

1-november-15.gif

ಪುತ್ತೂರು: ವಯಸ್ಸಿಗೆ ಮೊದಲೇ ವಿವಾಹ ಮಾಡಿ ಕೊಟ್ಟರೆ, ಹೆಣ್ಣು ಮಕ್ಕಳು ಆರೋಗ್ಯದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಾರೆ. ಆದ್ದರಿಂದ ಬಾಲ್ಯ ವಿವಾಹ ನಿಷೇಧದ ಬಗ್ಗೆ ಗ್ರಾಮದ ಜನರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಿದೆ ಎಂದು ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ಅ. 31ರಂದು ನಡೆದ ‘ಬಾಲ್ಯ ವಿವಾಹ ನಿಷೇಧ ಕಾನೂನಿನ ಅರಿವು’ ಉದ್ಘಾಟಿಸಿ ಮಾತನಾಡಿದರು.

ವಯಸ್ಸಿಗೆ ಬರುವ ಮೊದಲೇ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ತಪ್ಪು ಕೆಲಸ ನಡೆಯುತ್ತಿದೆ. ವಯಸ್ಸಿಗೆ ಬರುವ ಮೊದಲೇ ವಿವಾಹವಾದರೆ ಹೆಣ್ಣು ಮಕ್ಕಳು ಮಾನಸಿಕ, ದೈಹಿಕ ಆರೋಗ್ಯದಲ್ಲಿ ಬಹಳಷ್ಟು ಸಮಸ್ಯೆ ಎದುರಿಸುತ್ತಾರೆ. ಮಾನಸಿಕ ಖನ್ನತೆಗೂ ಒಳಗಾಗುತ್ತಾರೆ. ಹೆಣ್ಣುಮಕ್ಕಳಿಗೆ 18 ವರ್ಷ ಹಾಗೂ ಹುಡುಗರಿಗೆ 21 ವರ್ಷ ಆದ ಬಳಿಕವೇ ಮದುವೆ ಮಾಡಬೇಕು. ಮಕ್ಕಳಿಗೆ ಮದುವೆ ಮಾಡಿದ ಮಾತ್ರಕ್ಕೆ ಹೆತ್ತ ವರ ಹೊರೆ ಕಡಿಮೆ ಆಗುವುದಿಲ್ಲ. ಅವರ ಬೇಕು- ಬೇಡಗಳಿಗೆ ಸ್ಪಂದಿಸಬೇಕು ಎಂದರು.

ಬಾಲ್ಯ ವಿವಾಹ ನಿಷೇಧದ ಕಾನೂನಿನ ಅರಿವು ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಅಲ್ಲಿ ಸಿಗುವ ಕಾನೂನಿನ ಮಾಹಿತಿ ಪಡೆದುಕೊಂಡು, ಅದನ್ನು ತಮ್ಮ ಗ್ರಾಮದ ಜನರಿಗೆ ತಿಳಿಸುವ ಕಾರ್ಯ ಆಗಬೇಕು. ದಾಂಪತ್ಯ ಜೀವನ ಆರೋಗ್ಯದಿಂದ ಸಾಗಲು ಸಹಕರಿಸಬೇಕು ಎಂದರು. ಮುಖ್ಯ ಅತಿಥಿಯಾಗಿದ್ದ ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್‌ ಬಿಜತ್ರೆ ಮಾತನಾಡಿ, ದ.ಕ. ಬುದ್ಧಿವಂತರ ಜಿಲ್ಲೆ. ಶಿಕ್ಷಣದಲ್ಲಿ ಬಹಳಷ್ಟು ಮುಂದುವರಿದಿದ್ದೇವೆ. ಡಿಜಿಟಲ್‌ ಯುಗದಲ್ಲಿ ನಾವಿದ್ದು, ಕಾನೂನಿಗೆ ಗೌರವ ಕೊಡಬೇಕು. ಇಲಾಖೆಯಿಂದ ಎಲ್ಲ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾನೂನಿನ ಮಾಹಿತಿ ನೀಡುವ ಮೂಲಕ ಅವರು ಜಾಗೃತರಾಗಲು ಸಾಧ್ಯ ಎಂದರು.

ಕ್ರೀಡಾಂಗಣ)ದಲ್ಲಿ ಲಗೋರಿ, ಜುಬಿಲಿ, ಕಣ್ಣಾಮುಚ್ಚಾಲೆ, ಪಾಲೆಡ್‌ ಒಯ್ಪುನೆ, ಟೈರ್‌ ತಿರುಗಿಸುವುದು, ಗೋಲಿ ಆಟ, ಕಲ್ಲಾಟ ಸ್ಪರ್ಧೆಗಳು ನಡೆಯಲಿದೆ. ತುಳು ಸಮ್ಮೇಳನದ ಅಂಗವಾಗಿ ಕಿರಿಯ ಪ್ರಾಥಮಿಕ ಶಾಲಾ ಹೆಣ್ಣು ಮಕ್ಕಳಿಗೆ ಕಲ್ಲಾಟ, ಕುಪ್ಪಿಗ್‌ ನೀರ್‌ ದಿಂಜಾವುನೆ, ಹುಡುಗರಿಗೆ ಸೈಕಲ್‌ ಚಕ್ರ, ಪಾಲೆಡ್‌ ಒಯ್ಪುನ, ಪ್ರೌಢಶಾಲಾ ವಿಭಾಗದ ಹುಡುಗಿಯರಿಗೆ ಸೂಜಿ ನೂಲು, ಜುಬಿಲಿ, ಗಂಡು ಮಕ್ಕಳಿಗೆ ಗೋಣಿ ಚೀಲ ಓಟ, ನಾಯಿ ಎಲು, ಮಹಿಳೆಯರಿಗೆ ಚೆನ್ನೆಮಣೆ, ಲಗೋರಿ, ಹಗ್ಗಜಗ್ಗಾಟ, ಪುರುಷರಿಗೆ ಲಗೋರಿ, ಕೊತ್ತಲಿಂಗೆ ಕ್ರಿಕೆಟ್‌, ಹಗ್ಗಜಗ್ಗಾಟ, ವೇಗದ ನಡಿಗೆ ಸ್ಪರ್ಧೆಗಳು ನಡೆದಿವೆ. 

ಬೂಕು, ಪಿರಾವುದ ಸೊತ್ತುಲೆ ತೂಪರಿಕೆ
ಸಮ್ಮೇಳನದ ಅಂಗವಾಗಿ ಕೆದಂಬಾಡಿ ಜತ್ತಪ್ಪ ರೈ ಮಂಟಮೆಯಲ್ಲಿ ನೂಕು ತೂಪರಿಕೆ (ಪುಸ್ತಕ ಪ್ರದರ್ಶನ-ಮಾರಾಟ ನಡೆಯಲಿದೆ. ಪಿರಾವುದ ಸೊತ್ತುಲ ತೂಪರಿಕೆ (ಪ್ರಾಚ್ಯ ವಸ್ತುಗಳ ಪ್ರದರ್ಶನ) ಮೊಳಹಳ್ಳಿ ಶಿವರಾಯ ಮಂಟಮೆಯಲ್ಲಿ ನಡೆಯಲಿದೆ. ಇದರಲ್ಲಿ ತುಳುನಾಡಿನ ಬದುಕು ಮತ್ತು ಸಂಸ್ಕೃತಿ ಬಿಂಬಿಸುವ ಹಳೇ ವಸ್ತುಗಳ ಪ್ರದರ್ಶನ ಇದೆ. ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಸಮ್ಮಾನಿಸಲಾಗುತ್ತದೆ. ಜತೆಗೆ ಕವಿಗೋಷ್ಠಿ, ಚಾವಡಿ ಪಟ್ಟಾಂಗ, ತುಳು ತಾಳಮದ್ದಳೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.

ತುಳುವೆರೆ ದಿಬ್ಬಣ
ತುಳು ಸಮ್ಮೇಳನದ ಅಂಗವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ನೆಹರೂನಗರ ಸುದಾನ ವಿದ್ಯಾಸಂಸ್ಥೆಯ ವರೆಗೆ ತುಳುವೆರೆ ದಿಬ್ಬಣ ಶಿರೋನಾಮೆಯಲ್ಲಿ ಆಕರ್ಷಕ ಮೆರವಣಿಗೆ ನಡೆಯಲಿದೆ. ಕೋಟಿ ಚೆನ್ನಯ ಮಹಾದ್ವಾರದ ಉದ್ಘಾಟನೆಯ ಬಳಿಕ ಸಹಕಾರ ರತ್ನ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ವೇದಿಕೆಯಲ್ಲಿ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಜತೆಗೆ ಬಿ.ಎಂ. ಇದಿನಬ್ಬ ಮಂಟಮೆಯಲ್ಲಿ ತುಳವರ ಕುಲ ಕಸುಬು, ಸ್ವಾತಂತ್ರ್ಯ ಹೋರಾಟಗಾರ ಶೀಂಟೂರು ನಾರಾಯಣ ರೈ ಅಂಗಣದಲ್ಲಿ ಧ್ವಜಾರೋಹಣ, ಬಿ.ಎಸ್‌. ರಾಮಣ್ಣ ರೈ ವೇದಿಕೆಯಲ್ಲಿ ತುಳು ಸಿನೆಮಾ ಪ್ರದರ್ಶನ, ದೇಶಭಕ್ತ ಎನ್‌. ಎಸ್‌. ಕಿಲ್ಲೆ ನಡೆ ಉದ್ಘಾಟನೆಯ ಬಳಿಕ ಕಬಿದುನಿಪು-ನಲಿಪು, ತುಳು ಸಾಹಿತ್ಯದ ಮಗ್ಗಿಲು, ಚಾವಡಿ ಚರ್ಚೆ-ದೈವ ನಿಲೆ (ಪಾರಿ, ಪಾಡ್ಡನ, ಉರಲ್‌, ಬೀರ ಸಂಧಿ), ‘ತುಳು-ತುಲಿಪು’ವಿನಲ್ಲಿ ಮಣ್ಣು, ನೀರು,ಬದುಕು -ಬೇಸಾಯ ಕುರಿತು ಮಾತುಕತೆ ವಿಚಾರ ಸಂಕಿರಣ ನಡೆಯಲಿದೆ.

ಕಬಿ ದುನಿಪು-ನಲಿಪು
ಕಬಿ ದುನಿಪು-ನಲಿಪು ಕಾರ್ಯಕ್ರಮದಲ್ಲಿ ಪುತ್ತೂರು ರಾಮಕೃಷ್ಣ ಪ್ರೌಢಶಾಲೆ, ಸುದಾನ ವಿದ್ಯಾಸಂಸ್ಥೆ, ಹಾರಾಡಿ ಹಿ.ಪ್ರಾ. ಶಾಲೆ, ಪ್ರಗತಿ ವಿದ್ಯಾ ಸಂಸ್ಥೆ ಕಾಣಿಯೂರು, ಸಾಂದೀಪನಿ ವಿದ್ಯಾಸಂಸ್ಥೆ ನರಿಮೊಗರು, ಸ.ಪ.ಪೂ. ಕಾಲೇಜು ಜಿಡೆಕಲ್ಲು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಸಂತ ಫಿಲೋಮಿನಾ ಕಾಲೇಜು, ವಿದ್ಯಾರಶ್ಮಿ ವಿದ್ಯಾಲಯ ಸವಣೂರು, ರಾಮಕುಂಜೇಶ್ವರ ವಿದ್ಯಾಸಂಸ್ಥೆ ರಾಮಕುಂಜ, ಡಿಂಡಿಮ ಕಲಾವಿದರು ಇಲ್ಲಿನ ವಿದ್ಯಾರ್ಥಿಗಳಿಂದ ತುಳು ಕುಣಿತಗಳು ನಡೆಯಲಿವೆ.

ನಲಿಕೆ
ಪಾಲ್ತಾಡಿ ಮಂಜುನಾಥನಗರ ಶ್ರೀ ಗೌರಿ ಯುವತಿ ಮಂಡಲದಿಂದ ಚೆನ್ನು ನಲಿಕೆ, ಸರ್ವೆ ಷಣ್ಮುಖ ಯುವಕ ಮಂಡಲದಿಂದ ದುಡಿ ನಲಿಕೆ, ಕರ್ನಾಟಕ ಇಸ್ಲಾಮಿಕ್‌ ಅಕಾಡೆಮಿ ಕುಂಬ್ರ ಇಲ್ಲಿನ ವಿದ್ಯಾರ್ಥಿಗಳಿಂದ ತುಳು ದಪ್ಪು, ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದಿಂದ ಕನ್ಯಾಪು ನಲಿಕೆ, ಸವಣೂರು ಯುವಕ ಮಂಡಲದಿಂದ ಕರಂಗೋಲು ನಲಿಕೆ ಪ್ರದರ್ಶನ ನಡೆಯಲಿದೆ.

ಅಟಿಲ್‌ದ ಅರಗಣೆ
ವಿಶಿಷ್ಟವಾಗಿ ಅನಾವರಣಗೊಳ್ಳಲಿರುವ ತುಳು ಸಮ್ಮೇಳನದಲ್ಲಿ ಊಟೋಪಹಾರವೂ ತುಳುನಾಡ ಶೈಲಿಯಲ್ಲಿ ನಡೆಯಲಿದೆ. ಸಮ್ಮೇಳನದ ದಿನ 2,000 ಜನರಿಗೆ ಉಪಾಹಾರ, ಅಪರಾಹ್ನ 5,000 ಜನರಿಗೆ ಭೋಜನ, ಸಂಜೆಯೂ ಉಪಾಹಾರದ ವ್ಯವಸ್ಥೆ ಇರಲಿದೆ. ತುಳುನಾಡಿನ ಹತ್ತಾರು ಬಗೆಯ ತಿನಿಸುಗಳ ಕೌಂಟರ್‌ಗಳು ಇರಲಿದ್ದು, ಕನಿಷ್ಠ ಬೆಲೆಗೆ ಮಾರಾಟದ ವ್ಯವಸ್ಥೆ ಮಾಡಲಾಗುತ್ತದೆ. ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ತುಳುನಾಡ ಶೈಲಿಯ ಊಟೋಹಾಚಾರ ಭಾರೀ ಆಕರ್ಷಣೆ ಹಾಗೂ ಜನಮನ್ನಣೆ ಗಳಿಸಿತ್ತು. ಅದನ್ನೇ ಮಾದರಿಯಾಗಿಟ್ಟುಕೊಂಡು ಇಲ್ಲೂ ಮಾಡಲಾಗುತ್ತದೆ. ಒಟ್ಟಿನಲ್ಲಿ ತುಳುನಾಡಿನ ಜನರೆಲ್ಲರೂ ತುಳು ಸಾಹಿತ್ಯ ಸಮ್ಮೇಳನದ ಅಪೂರ್ವ ಸನ್ನಿವೇಶವನ್ನು ಎದುರುನೋಡುತ್ತಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.