ಯುವ ನ್ಯೂರಾನ್‌


Team Udayavani, Nov 2, 2018, 6:00 AM IST

s-29.jpg

ವೈದ್ಯಕೀಯ ವಿಜ್ಞಾನದಲ್ಲಿ ಬರುವ “ನ್ಯೂರಾನ್‌’ ಎಂಬ ಹೆಸರನ್ನು ಇಟ್ಟುಕೊಂಡು ಈಗ ಕನ್ನಡದಲ್ಲಿ ಚಿತ್ರವೊಂದು ಸೆಟ್ಟೇರಿದೆ. “ನ್ಯೂರಾನ್‌’ ಎಂದ ಕೂಡಲೇ ಇದೇನಾದ್ರೂ ವೈಜ್ಞಾನಿಕ ಕಥಾಹಂದರ ಸಿನಿಮಾ ಇರಬಹುದಾ ಅಂತ ನೀವು ಭಾವಿಸಿದ್ದರೆ, ನಿಮ್ಮ ಊಹೆ ತಪ್ಪು. ಅಂದಹಾಗೆ ಈ “ನ್ಯೂರಾನ್‌’ ವೈಜ್ಞಾನಿಕ ಕಥಾಹಂದರದ ಸಿನಿಮಾವಲ್ಲದಿದ್ದರೂ, ಸಿನಿಮಾದಲ್ಲಿ ಒಂದಷ್ಟು ವೈಜ್ಞಾನಿಕ ಅಂಶಗಳು ಇರಲಿದೆಯಂತೆ. ಮೆದುಳಿನಿಂದ ದೇಹದ ಇತರ ಭಾಗಗಳಿಗೆ ಸಂವಹನ ಕಲ್ಪಿಸುವ “ನ್ಯೂರಾನ್‌’ ಬಗ್ಗೆ ನೀವೆಲ್ಲ ಕೇಳಿರುತ್ತೀರಿ. ಅದೇ ಪರಿಕಲ್ಪನೆಯನ್ನು ಇಟ್ಟುಕೊಂಡು ಚಿತ್ರತಂಡ ಈ ಸಿನಿಮಾವನ್ನು ಸಸ್ಪೆನ್ಸ್‌, ಥ್ರಿಲ್ಲರ್‌ ಶೈಲಿಯಲ್ಲಿ ತೆರೆಮೇಲೆ ಹೇಳಲು ಹೊರಟಿದೆ.

ಇತ್ತೀಚೆಗೆ “ನ್ಯೂರಾನ್‌’ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ದೃಶ್ಯಕ್ಕೆ ನಟ ಕಂ ನಿರ್ದೇಶಕ ಕ್ರೇಜಿಸ್ಟಾರ್‌ ವಿ.ರವಿಚಂದ್ರನ್‌ ಕ್ಲಾಪ್‌ ಮಾಡಿ ಶುಭ ಕೋರಿದರು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್‌, ಸಾ.ರಾ ಗೋವಿಂದು, ಕೆ. ಮಂಜು, ಭಾ.ಮಾ ಹರೀಶ್‌, ನಿರ್ದೇಶಕರಾದ ಎ.ಪಿ ಅರ್ಜುನ್‌, ಪ್ರೀತಂ ಗುಬ್ಬಿ, ಜಗದೀಶ್‌ ಕಾರಂತ್‌ ಮೊದಲಾದವರು ಸಮಾರಂಭದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು. 

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ  ವಿಕಾಸ್‌ ಪುಷ್ಪಗಿರಿ,”ನ್ಯೂರಾನ್‌ ಸಿನಿಮಾದಲ್ಲಿ ಹೀರೋ, ಹೀರೋಯಿನ್‌ ಅಂತ ಯಾವ ಪಾತ್ರಗಳು ಇರುವುದಿಲ್ಲ. ಚಿತ್ರದಲ್ಲಿ ಒಟ್ಟು ಎಂಟು ಪಾತ್ರಗಳಿದ್ದು, ಎಲ್ಲಾ ಪಾತ್ರಗಳಿಗೂ ತನ್ನದೇ ಆದ ಪ್ರಾಮುಖ್ಯತೆ ಇರುತ್ತದೆ. ಸಿನಿಮಾದ ಕೊನೆಯಲ್ಲಿ ಈ ಶೀರ್ಷಿಕೆ ಏಕೆ ಇಟ್ಟಿದ್ದೇವೆ ಎಂಬುದು ಗೊತ್ತಾಗುತ್ತದೆ. ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥೆಯೊಂದನ್ನು ದೊಡ್ಡ ಬಜೆಟ್‌ನಲ್ಲಿ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎನ್ನುತ್ತಾರೆ. 

ಈ ಚಿತ್ರವನ್ನು ವಿನಯ್‌ ಕುಮಾರ್‌ ವಿ.ಆರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಛಾಯಾಗ್ರಹಕ ಶೋಯೆಬ್‌ ಅಹಮದ್‌ ಕೆ.ಎಂ “ನ್ಯೂರಾನ್‌’ ಚಿತ್ರದ ದೃಶ್ಯಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದರೆ, ಶ್ರೀಧರ್‌ ವೈ.ಎಸ್‌ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಗುರುಕಿರಣ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್‌ ಚಿತ್ರದ ಹಾಡುಗಳಿಗೆ ಸಾಹಿತ್ಯವನ್ನು, ಶ್ರೀಹರ್ಷ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರಕ್ಕೆ ವಿಕಾಸ್‌ ಪುಷ್ಪಗಿರಿ, ರವಿ ಜೈ ಚಿತ್ರಕ್ಕೆ ಕಥೆಯನ್ನು ಬರೆದಿದ್ದಾರೆ. ಶಿವಕುಮಾರ್‌ ಕಲಾ ನಿರ್ದೇಶನ ಚಿತ್ರದಲ್ಲಿದೆ. “ನ್ಯೂರಾನ್‌’ ಚಿತ್ರದಲ್ಲಿ ನವನಟ ಯುವ, ಕಬೀರ್‌ ಸಿಂಗ್‌, ನೇಹಾ ಪಾಟೀಲ್‌, ಜೈ ಜಗದೀಶ್‌, ವೈಷ್ಣವಿ ಚಂದ್ರ ಮೆನನ್‌, ವರ್ಷಾ, ಶಿಲ್ಪಾ ಶೆಟ್ಟಿ, ಅರವಿಂದ್‌ ರಾವ್‌ ಮೊದಲಾದ ಕಲಾವಿದರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ಮುಹೂರ್ತವನ್ನು ಆಚರಿಸಿಕೊಂಡಿರುವ “ನ್ಯೂರಾನ್‌’ ಚಿತ್ರದ ಚಿತ್ರೀಕರಣ ಇದೇ ವಾರದಿಂದ ಸಕಲೇಶಪುರ, ಬೆಂಗಳೂರು ಹಾಗು ಸಿಂಗಾಪುರದಲ್ಲಿ ಸುಮಾರು 45 ದಿನಗಳ ಕಾಲ ನಡೆಯಲಿದೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

ಇಂದಿನಿಂದ ತೆರೆಯಲ್ಲಿ ಅನ್ನ ಪ್ರಸಾದ

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Sandalwood; 8 ತಿಂಗಳು 150 ಸಿನಿಮಾ.. ಗೆದಿದ್ದು ಕೆಲವು, ಸೋತಿದ್ದು ಹಲವು

Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.