ದೇವರ ಹೆಸರಿನಲ್ಲಿ ಕೇರಳ ಉದ್ವಿಗ್ನ: ಪಂದಳ ರಾಜರ ಕಳವಳ


Team Udayavani, Nov 2, 2018, 9:45 AM IST

shabri.jpg

ಉಡುಪಿ: ಕೇರಳದಲ್ಲಿಇದೇ ಪ್ರಥಮ ಬಾರಿಗೆ ದೇವರ ಹೆಸರಿನಲ್ಲಿ ಉದ್ವಿಗ್ನತೆ ಕಂಡುಬಂದಿದೆ ಎಂದು ಶಬರಿಮಲೆ ಕ್ಷೇತ್ರದ ಆಡಳಿತದಾರರಾದ ಪಂದಳ ರಾಜ ಶಶಿಕುಮಾರ ವರ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜ ಉಡುಪಿ ಜಿಲ್ಲೆ, ಧರ್ಮ ಫೌಂಡೇಶನ್‌ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಗುರುವಾರ ನಡೆದ “ಧರ್ಮ’ ಮಹಾಸಹಸ್ರಾರ್ಚನ ಪೂಜೆ ಮತ್ತು ಧರ್ಮ ಜಾಗೃತಿ ಅಭಿಯಾನದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇವಾಲಯದ ಪದ್ಧತಿ ಆಡಳಿತಗಾರರಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದರ ಅರ್ಥ ಎಂದು ಪ್ರಶ್ನಿಸಿದರು.

ಭಕ್ತರ ತೀರ್ಮಾನವೇ ಅಂತಿಮ
ಧಾರ್ಮಿಕ ಕ್ಷೇತ್ರದಲ್ಲಿ ಬದಲಾವಣೆ ಭಕ್ತರು ಮಾಡಬೇಕೇ ವಿನಾ ನ್ಯಾಯಾಲಯವಲ್ಲ. ಧರ್ಮದ ವಿಷಯದಲ್ಲಿ ಅದು ಹಸ್ತಕ್ಷೇಪ ಮಾಡಬಾರದು ಎಂದು ಆಶೀರ್ವಚನ ನೀಡಿದ ಶ್ರೀ ಪೇಜಾವರ ಶ್ರೀಪಾದರು ಹೇಳಿದರು. ಶಬರಿಮಲೆ ವಿಷಯದಲ್ಲಿ ಸರಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಯುತ್ತಿದೆ. ಪ್ರಜೆಗಳ ಮೇಲೆ ಧರ್ಮದ ಹೆಸರಿನಲ್ಲಿ ಸರಕಾರ ಹಸ್ತಕ್ಷೇಪ ಮಾಡ ಬಾರದು. ಆದ್ದರಿಂದ ತೀರ್ಪನ್ನು ಮರು ಪರಿಶೀಲಿಸಬೇಕಾಗಿದೆ ಎಂದರು.
ಉತ್ತರಕಾಶಿ ಕಪಿಲಾಶ್ರಮದ ಶ್ರೀ ರಾಮಚಂದ್ರ ಸ್ವಾಮೀಜಿ ಭವ್ಯ ಸಂಸ್ಕೃತಿ ಹೊಂದಿದ ಧರ್ಮದ ವಿಷಯದಲ್ಲಿ ಮೂಗು ತೂರಿಸುವ ಹಕ್ಕು ನ್ಯಾಯಾಲಯಗಳಿಗೆ ಇಲ್ಲ ಎಂದರು.

ಅಯ್ಯಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಮ್ಯುನಿಸ್ಟರು ಈಗ ಅಯ್ಯಪ್ಪ ಭಕ್ತರಿಗೆ ವಿರುದ್ಧವಾಗಿದ್ದಾರೆ ಎಂದು ಕಾಸರಗೋಡಿನ ಕುಂಟಾರು ರವೀಶ ತಂತ್ರಿ ಹೇಳಿದರು. ಅಯ್ಯಪ್ಪ ಸೇವಾ ಸಮಾಜದ ರಾಜ್ಯಾಧ್ಯಕ್ಷ, ನಟ ಶಿವರಾಮ್‌ ಮಾತ ನಾಡಿ, ಭಕ್ತರ ಭಾವನೆಗೆ  ವಿರುದ್ಧವಾಗಿ ರುವ ತೀರ್ಪನ್ನು ಮರುಪರಿಶೀಲಿಸ ಬೇಕು ಎಂದರು.  ಹರಿಯಪ್ಪ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಗಿರೀಶ್‌ ಜಿ.ಎನ್‌. ಸ್ವಾಗತಿಸಿ, ಬೈಕಾಡಿ ಸುಪ್ರಸಾದ ಶೆಟ್ಟಿ ಪ್ರಸ್ತಾವನೆಗೈದರು. ಪಂದಳ ರಾಜರ ಪತ್ನಿ ಮೀರಾ ವರ್ಮ, ಬಾಲಕೃಷ್ಣ ಹೆಗ್ಡೆ, ರಂಜಿತ್‌ ಶೆಟ್ಟಿ, ಪ್ರಕಾಶ ಶೆಟ್ಟಿ, ವಿಜಯ ಕೊಡವೂರು, ರಾಧಾಕೃಷ್ಣ ಮೆಂಡನ್‌, ಕಿಶೋರ್‌ ಡಿ. ಸುವರ್ಣ, ಭೋಜರಾಜ ಕಿದಿಯೂರು, ಬಾಲಕೃಷ್ಣ ಅಮೀನ್‌ ಮಲ್ಪೆ, ಮಹಾಬಲ ಗುರುಸ್ವಾಮಿ, ಉದಯ ಶೆಟ್ಟಿ, ಗೋಪಾಲ ಪೂಜಾರಿ, ರಘುಚಂದ್ರ, ಬಾಬು ಶೆಟ್ಟಿ, ರಾಜು ಗುರುಸ್ವಾಮಿ ಉಪಸ್ಥಿತರಿದ್ದರು. ದಾಮೋದರ ಶರ್ಮ ನಿರ್ವಹಿಸಿದರು.

ಶಬರಿಮಲೆ ಜಗತ್ತಿನಾದ್ಯಂತ ಭಕ್ತರನ್ನು ಹೊಂದಿರುವ ಕ್ಷೇತ್ರ. ಕೇರಳದ ಮಹಿಳೆಯರೂ ಸೇರಿದಂತೆ ಅಸಂಖ್ಯಾಕ ಭಕ್ತರು ಪ್ರತಿಭಟನೆ, ಕಳವಳ ವ್ಯಕ್ತಪಡಿಸುತ್ತಿದ್ದಾರೆ. ದೇವಸ್ವಂ ಮಂಡಳಿ, ಸರಕಾರ ಏನು ಮಾಡುತ್ತದೋ ಗೊತ್ತಿಲ್ಲ. ಮಣಿಕಂಠ ನಮ್ಮ ಮನೆ ಮಗು. ಅನ್ಯಾಯವಾಗಲು ನಾವು ಬಿಡುವುದಿಲ್ಲ.
ಪಂದಳ ರಾಜ ಶಶಿಕುಮಾರ ವರ್ಮ

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.