ಕನ್ನಡ ಸಾಹಿತ್ಯದಲ್ಲಿ ಕನಸುಗಳ ಕೊರತೆ


Team Udayavani, Nov 2, 2018, 11:26 AM IST

sahitya.jpg

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಹಲ್ಮಿಡಿ ಶಾಸನದಿಂದ ಇಲ್ಲಿಯವರೆಗೂ ಅತ್ಯದ್ಭುತವಾದ ನೆನಪುಗಳಿವೆ. ಆದರೆ ಈಗ ಅಷ್ಟೇ ತೂಕದ ದೊಡ್ಡ ಕನಸುಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಕಳವಳ ವ್ಯಕ್ತಪಡಿಸಿದರು.

ಸಪ್ನ ಬುಕ್‌ ಹೌಸ್‌ ಗಾಂಧಿ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ “ಕನ್ನಡ -ಅಂದು -ಇಂದು -ಮುಂದು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ನೆನಪಿನ ಭಾರ ಹೆಚ್ಚಾಗಿದ್ದು, ಕನಸುಗಳ ಕೊರತೆ ಎದ್ದು ಕಾಣುತ್ತಿದೆ ಎಂದರು.

ಪಾಶ್ಚಿಮಾತ್ಯ ಸಾಹಿತ್ಯದ ಪ್ರಭಾವ ಕನ್ನಡ ಸಾಹಿತ್ಯದ ಮೇಲೂ ಬೀರಿದ್ದು, ನವ್ಯಕಾಲಘಟ್ಟದ ಸಾಹಿತ್ಯಗಳನ್ನು ಇಂಗ್ಲಿಷ್‌ ಸಾಹಿತ್ಯ ಹೆಚ್ಚು ಆಕರ್ಷಿಸಿದೆ. ಹೀಗಾಗಿಯೇ ಅವರು ಬ್ರಿಟಿಷ್‌ ಕಾವ್ಯ ಮೀಮಾಂಸೆಯನ್ನು ಕನ್ನಡಕ್ಕೆ ಪರಿಚಯಿಸಿದರು. ಸಾಲದಕ್ಕೆ ಸಾಹಿತ್ಯದಲ್ಲಿ ಪಾಶ್ಚಿಮಾತ್ಯ ಮಾದರಿಗಳನ್ನು ಅನುಸರಿಸಿದರು.

ಆದರೆ, ಪಾಶ್ಚಿಮಾತ್ಯ ಸಾಹಿತ್ಯದಲ್ಲೀಗ ಅನುಸರಿಬೇಕಾದಂತಹ ಯಾವ ಮಾದರಿಗಳು ಕೂಡ ಅವರಿಗೆ ಸಿಗುತ್ತಿಲ್ಲ. ಆ ಹಿನ್ನೆಲೆಯಲ್ಲಿಯೇ ಗಂಡಸರು ಹೆಂಗಸರ ಮೇಲೆ, ಹೆಂಗಸರು ಗಂಡಸರ ಮೇಲೆ “ಮಿ ಟೂ’ ಜತೆ “ಯೂ ಟು’ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ನಮ್ಮ ಸಾಹಿತ್ಯದ ಬೇರುಗಳನ್ನು ನಾವೇ ಹುಡುಕಿಕೊಳ್ಳಬೇಕಾಗಿದ್ದು, ಇದರ ಬಹುದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಯುವಕರು ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ಮುಳುಗಿದ್ದು, ಇವರಿಗೆ ಮಾರ್ಗದರ್ಶನ ನೀಡಬೇಕಾಗಿದೆ. ಯುವಕರಿಂದಲೂ ಸಾಹಿತ್ಯದಲ್ಲಿ ಪ್ರಯೋಗಗಳು ನಡೆಯಲಿ ಎಂದು ಆಶಿಸಿದರು.

ಮರಾಠಿಗರಿಂದ ಅಪಪ್ರಚಾರ: ಕವಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಮಾತನಾಡಿ, ನಾಡಿನ ಸೊಗಡು ಉಳಿಸಿಕೊಳ್ಳಲು ನಾವು ಸಂಪೂರ್ಣ ವಿಫ‌ಲವಾಗಿದ್ದೇವೆ. ಗದಗ ಜಿÇÉೆಯಲ್ಲಿ ತಯಾರಿಸುವ ಪಾದರಕ್ಷೆಯನ್ನು ಕೊಲ್ಹಾಪುರ ಚಪ್ಪಲಿ ಎಂದು, ಇಳಕಲ್‌ ಸೀರೆಯನ್ನು ಮಹಾರಾಷ್ಟ್ರದ ಸೀರೆ ಎಂದು ಹೇಳಿಕೊಂಡು ಮರಾಠಿಗರು ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಬೇಕಾದ ಅಗತ್ಯವಿದೆ.

ಪ್ರತಿಯೊಬ್ಬ ಜನಸಾಮಾನ್ಯರಲ್ಲಿ ಕನ್ನಡ ಅಸ್ಮಿತೆ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು. ಕೇಂದ್ರ ಸರ್ಕಾರ ನಿರ್ಮಿಸಿರುವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಪ್ರತಿಮೆ ಮೇಲೆ ದಕ್ಷಿಣ ಭಾರತದ ಭಾಷೆಗಳಿಗೆ ಸ್ಥಳವೇ ಇಲ್ಲ. ದಕ್ಷಿಣ ಭಾರತದ ಭಾಷೆಯಗಳನ್ನು ಕೇಂದ್ರ ಸರ್ಕಾರ ಅವಗಣನೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಇದೇ ವೇಳೆ ನಡೆದ “ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಕನ್ನಡ -ಕರ್ನಾಟಕ’, “ನವೋದಯ ಕಾಲದ ಕವನಗಳಲ್ಲಿ ಕನ್ನಡ’, “ಕನ್ನಡ ಚಲನಚಿತ್ರ – ನಾಟಕಗಳಲ್ಲಿ ಕನ್ನಡ’, “ಕನ್ನಡ ಮಾಧ್ಯಮ -ಶಿಕ್ಷಣದ ಬಿಕ್ಕಟ್ಟುಗಳು’ ಸೇರಿದಂತೆ ಹಲವು ವಿಚಾರಗೋಷ್ಠಿಗಳು ನಡೆದವು. ಸಪ್ನ ಬುಕ್‌ ಹೌಸ್‌ನ ವ್ಯವಸ್ಥಾಪಕ ನಿರ್ದೇಶಕ ನಿತಿನ್‌ ಶಾ, ದೊಡ್ಡೆಗೌಡ ಉಪಸ್ಥಿತರಿದ್ದರು.

ಐಎಎಸ್‌ ಅಧಿಕಾರಿಗಳಿಂದ ಅಡ್ಡಗಾಲು: ಕನ್ನಡ ಭಾಷೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತ್ಯೇಕ ಭಾಷಾ ಕಾಯ್ದೆ ಜಾರಿಗೆ ಚಿಂತನೆ ನಡೆಸಲಾಗಿದೆ. ಆದರೆ ಕೆಲ ಐಎಎಸ್‌ ಅಧಿಕಾರಿಗಳು ಇದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪೊ›.ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಕೆಲ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸುವ ನಿಯಮ ಇದ್ದು, ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಠಿಣ ಕಾನೂನು ಜಾರಿಗೆ ತಂದು, ಆರು ತಿಂಗಳಲ್ಲಿ ಕನ್ನಡ ಕಲಿಯುವಂತೆ ಮಾಡಬೇಕು. 
-ಡಾ.ವಸುಂಧರಾ ಭೂಪತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ 

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.