ಕಾಂಗೆ‹ಸ್‌ “ಖೆಡ್ಡಾ’ಗೆ ಬಿದ್ದರೆ ಬಿಜೆಪಿ ಅಭ್ಯರ್ಥಿ?


Team Udayavani, Nov 2, 2018, 12:30 PM IST

chandra.jpg

ಬೆಂಗಳೂರು: ರಾಮನಗರ ಉಪಚುನಾವಣೆ ಮತದಾನಕ್ಕೆ 48 ಗಂಟೆ ಬಾಕಿ ಇರುವಾಗ ಪಕ್ಷದ ಅಧಿಕೃತ ಅಭ್ಯರ್ಥಿ
ಸ್ಪರ್ಧೆಯಿಂದ ಹಿಂದೆ ಸರಿದು ಜೆಡಿಎಸ್‌ ಅಭ್ಯರ್ಥಿ ಬೆಂಬಲಿಸಿದ್ದರಿಂದ ಬಿಜೆಪಿಗೆ ಮರ್ಮಾಘಾತವಾಗಿದೆ. ಈ
ಕ್ಷಿಪ್ರ ಬೆಳವಣಿಗೆಯನ್ನು ಕಾಂಗ್ರೆಸ್‌ ತೋಡಿದ “ಖೆಡ್ಡಾ’ಕ್ಕೆ ಬಿಜೆಪಿ ಬಿದ್ದಿದೆ ಎಂಬುದಾಗಿ ವಿಶ್ಲೇಷಿಸಲಾಗುತ್ತಿದೆ.

ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯರ ಪುತ್ರನನ್ನೇ ಸೆಳೆದು ಅಚ್ಚರಿಯ ಫ‌ಲಿತಾಂಶ ನೀಡುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಅಧಿಕೃತ ಅಭ್ಯರ್ಥಿಯೇ “ಕೈ’ ಕೊಡುವಂತೆ ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದ್ದು, ಕಮಲ ಪಾಳೆಯ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಿಸಿದೆ. ಅಧಿಕೃತ ಅಭ್ಯರ್ಥಿ ಸ್ಪಧೆಯಿಂದ ಹಿಂದೆ ಸರಿದಿರುವುದರಿಂದ ಯಾರಿಗೆ ಮತದಾನ ಮಾಡಬೇಕು ಎಂಬ ಗೊಂದಲ ಕಾರ್ಯಕರ್ತರು, ಬೆಂಬಲಿಗರನ್ನು ಕಾಡುತ್ತಿದೆ.

ಸಿಎಂ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಎದುರಾದ ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ
ಗೆಲ್ಲುವ ಮೂಲಕ ಮೈತ್ರಿ ಪಕ್ಷಕ್ಕೆ ಜನಬೆಂಬಲವಿದೆ ಎಂಬುದನ್ನು ಸಾಬೀತು ಪಡಿಸುವುದು ಜೆಡಿಎಸ್‌ಗೆ ಅನಿವಾರ್ಯವಾಗಿತ್ತು. ಇನ್ನೊಂದೆಡೆ ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್‌ ಉಸ್ತುವಾರಿಯಾಗಿರುವ ಜಿಲ್ಲೆಯಲ್ಲಿ ಪಕ್ಷದ ಹಿಡಿತ ಸಾಧಿಸುವುದು ಅಷ್ಟೇ ಮುಖ್ಯವಾಗಿತ್ತು. ಅಂತಿಮವಾಗಿ ಕುಮಾರಸ್ವಾಮಿ ಪತ್ನಿ ಅನಿತಾ
ಕುಮಾರಸ್ವಾಮಿಯವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಮೈತ್ರಿ ಸರ್ಕಾರ ನಿರ್ಧರಿಸಿತ್ತು. ಹಾಗಿದ್ದರೂ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಒಮ್ಮತ ಮೂಡದಿರುವುದು ಹಲವು ಬಾರಿ ಬಹಿರಂಗವಾಗಿತ್ತು. ಈ ಒಡಕಿನ ಲಾಭ ಪಡೆಯುವ ಲೆಕ್ಕಾಚಾರ ನಡೆಸಿದ್ದ ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾದ ಕಾಂಗ್ರೆಸ್‌ನ ಸಿ.ಎಂ. ಲಿಂಗಪ್ಪ ಪುತ್ರ ಎಲ್‌. ಚಂದ್ರಶೇಖರ್‌ರನ್ನು ಪಕ್ಷಕ್ಕೆ ಸೆಳೆದು ಕಣಕ್ಕಿಳಿಸುವಲ್ಲಿ ಯಶಸ್ವಿಯಾಗಿತ್ತು.

ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಅದೇ ಸಮುದಾಯದ ಕಾಂಗ್ರೆಸ್‌ ಕಟ್ಟಾಳುವಿನ ಪುತ್ರನನ್ನೇ ಸ್ಪರ್ಧೆಗಿಳಿಸಿ
ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿತ್ತು. ಹಾಗೆಂದೇ ಒಕ್ಕಲಿಗ ಸಮುದಾಯದ ನಾಯಕರಾದ ಕೇಂದ್ರ ಸಚಿವ
ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌, ಮುಖಂಡ ಮುನಿರಾಜುಗೌಡರನ್ನು ಚುನಾವಣಾ
ಉಸ್ತುವಾರಿಯನ್ನಾಗಿ ನೇಮಿಸಿ ಮತದಾರರನ್ನು ಸೆಳೆಯಲು ಮುಂದಾಗಿತ್ತು. ಆದರೆ ರಾತ್ರಿ ಬೆಳಗಾಗುವುದರಲ್ಲಿ   ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಅವರ ಮಗ್ಗುಲಲ್ಲಿ ಕುಳಿತು ಜೆಡಿಎಸ್‌ ಬೆಂಬಲಿಸುವುದಾಗಿ ಘೋಷಿಸಿರುವುದು,ಬಿಜೆಪಿಗೆ ಮಹಾ ಆಘಾತ ನೀಡಿದಂತಾಗಿದೆ.

ಬಿಜೆಪಿಗೆ “ಖೆಡ್ಡಾ’ ತೋಡಿತೇ ಕಾಂಗ್ರೆಸ್‌?: ಕಾಂಗ್ರೆಸ್‌ ನಾಯಕ ಸಿ.ಎಂ.ಲಿಂಗಪ್ಪ ಅವರ ಪುತ್ರನನ್ನು ಅ.10ರಂದು
ಬಿಜೆಪಿಗೆ ಬರ ಮಾಡಿಕೊಳ್ಳಲಾಯಿತು. ಆ ಮೂಲಕ ಕಾಂಗ್ರೆಸ್‌ ಹಾಗೂ ಮೈತ್ರಿ ಸರ್ಕಾರಕ್ಕೆ ತಿರುಗೇಟು ನೀಡಲು ಪ್ರತಿತಂತ್ರ ಹೆಣೆದಿರುವುದಾಗಿ ಬಿಜೆಪಿ ಬೀಗಿತ್ತು. ಆಗ ಸಿ.ಎಂ. ಲಿಂಗಪ್ಪಪುತ್ರನ ಬಗ್ಗೆ ಒಂದಷ್ಟು ಆಕ್ರೋಶದ ಮಾತುಗಳನ್ನಾಡಿದ್ದು ಬಿಟ್ಟರೆ ಸಚಿವ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌ ಆಕ್ರೋಶ ಇಲ್ಲವೇ ಅಸಮಾಧಾನದ ಮಾತುಗಳನ್ನಾಡಿರಲಿಲ್ಲ. ಅಲ್ಲದೇ ಪ್ರಚಾರದ ವೇಳೆಯೂ ಎಲ್ಲಿಯೂ ಚಂದ್ರಶೇಖರ್‌ ವಿರುದ್ಧ
ಕಾಂಗ್ರೆಸ್‌, ಜೆಡಿಎಸ್‌ ನಾಯಕರು ವಾಗ್ಧಾಳಿ ನಡೆಸಿದ್ದು ಕಂಡುಬರಲಿಲ್ಲ.

ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿ ಮೈತ್ರಿ ಸರ್ಕಾರದ ಅಭ್ಯರ್ಥಿಯನ್ನೇ ಬೆಂಬಲಿಸುವಂತೆ ಮನವೊಲಿಸುತ್ತಿದ್ದ ಕಾಂಗ್ರೆಸ್‌ ಅಂತಿಮವಾಗಿ ಬಿಜೆಪಿ ಅಭ್ಯರ್ಥಿಯನ್ನೇ ಮರಳಿ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಎಲ್ಲ ಬೆಳವಣಿಗೆ ಡಿ.ಕೆ. ಸಹೋದರರ ಪೂರ್ವಯೋಜಿತ ತಂತ್ರ ಎಂದೇ ಬಣ್ಣಿಸಲಾಗುತ್ತಿದೆ. ಕಾಂಗ್ರೆಸ್‌ ನಾಯಕರೇ ಚಂದ್ರಶೇಖರ್‌ರನ್ನು ಬಿಜೆಪಿಯತ್ತ ಹೋಗುವಂತೆ ಮಾಡಿ ಬಳಿಕ
ಅಭ್ಯರ್ಥಿಯಾಗಿ ಕಣಕ್ಕಿಳಿದು ಅಂತಿಮ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ “ಮಾಸ್ಟರ್‌ ಪ್ಲಾನ್‌’ ರೂಪುಗೊಂಡಿತ್ತೇ ಎಂಬ ಬಗ್ಗೆ ಚರ್ಚೆ ನಡೆದಿದೆ. ಒಟ್ಟಿನಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದ ರಾಮನಗರದಲ್ಲಿ ಪ್ರಬಲ ಸ್ಪರ್ಧೆಯೊಡ್ಡುವ ಬಿಜೆಪಿಯ ಹುಮ್ಮಸ್ಸು ಮತದಾನಕ್ಕೂ ಮುನ್ನವೇ ಕಮರಿದೆ. ಈ ಬೆಳವಣಿಗೆ ರಾಮನಗರ ಜಿಲ್ಲೆ ಮಾತ್ರವಲ್ಲದೆ ರಾಜ್ಯ ಬಿಜೆಪಿಯಲ್ಲೂ ತಲ್ಲಣ ಸೃಷ್ಟಿಸಿದೆ.

ಬೆದರಿಕೆ ತಂತ್ರ
ಇನ್ನೊಂದೆಡೆ ಮೈತ್ರಿ ಸರ್ಕಾರದ ಪ್ರಮುಖರೇ ಚಂದ್ರಶೇಖರ್‌ಗೆ ಬೆದರಿಕೆಯೊಡ್ಡಿ ಸ್ಪರ್ಧೆಯಿಂದ
ಹಿಂದೆ ಸರಿಯುವಂತೆ ಮಾಡಿರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಚಂದ್ರಶೇಖರ್‌ ವಿರುದ್ಧ ಕೆಲ ಪ್ರಕರಣಗಳಿದ್ದು,
ಅವುಗಳನ್ನಾಧರಿಸಿ ತೊಂದರೆಗೆ ಸಿಲುಕಿಸುವುದಾಗಿ ಬೆದರಿಸಿ ಪಕ್ಷ ತೊರೆಯುವಂತೆ ಒತ್ತಡ ಹೇರಿರಬಹುದು ಎಂಬ ಮಾತುಗಳು ಕೇಳಿಬಂದಿವೆ.

ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.