ಬಸ್‌ ಪಾಸ್‌ ರದ್ದು , ಹಣವಿಲ್ಲ , ಕೆಲಸಕ್ಕೂ ಬರ


Team Udayavani, Nov 3, 2018, 9:04 AM IST

jodupala.jpg

ಅರಂತೋಡು: ಜೋಡುಪಾಲ ಪ್ರಕೃತಿ ವಿಕೋಪ ಸಂಭವಿಸಿ ಮೂರು ತಿಂಗಳು ತುಂಬುತ್ತಿದ್ದರೂ ನಿರಾಶ್ರಿತರ ಸಂಕಷ್ಟ ದೂರವಾಗಿಲ್ಲ. ಅವರ ಪುನರ್ವಸತಿ ಸಹಿತ ಮೂಲ ಸೌಕರ್ಯ ಗಳಿಗೆ ಸರಕಾರ ಅಧಿಕೃತವಾಗಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಪರಿಹಾರ ಕೇಂದ್ರಗಳಲ್ಲಿ ವಾಸವಿದ್ದ ಕೆಲವರು ಗುಳೆ ಹೊರಟಿದ್ದರೆ ಇನ್ನು ಕೆಲವರು ನೆಮ್ಮದಿಯಿಲ್ಲದ ಬದುಕು ಕಳೆಯುತ್ತಿದ್ದಾರೆ.

ಕೊಡಗು ಸಂಪಾಜೆ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಈಗ 24 ಕುಟುಂಬಗಳು ವಾಸವಿದ್ದು, ಒಟ್ಟು 73 ಮಂದಿ ಇದ್ದಾರೆ. ಇವರಲ್ಲಿ 13 ಮಂದಿ ವಿದ್ಯಾರ್ಥಿಗಳು. ದಕ್ಷಿಣ ಕನ್ನಡದ ಸಂಪಾಜೆ ಪರಿಹಾರ ಕೇಂದ್ರದಲ್ಲಿ 11 ಕುಟುಂಬ ಗಳ 42 ಜನರಿದ್ದಾರೆ. ಇವರಲ್ಲಿ 9 ವಿದ್ಯಾರ್ಥಿಗಳು. 80 ವರ್ಷ ವಯಸ್ಸಿನ ವೃದ್ಧೆಯೊಬ್ಬರಿದ್ದು, ಅನಾರೋಗ್ಯದಿಂದಿದ್ದಾರೆ.

ಒಂದೂವರೆ ತಿಂಗಳ ಹಿಂದೆ ಸಚಿವ ಯು.ಟಿ. ಖಾದರ್‌ ಅವರು ಪರಿಹಾರ ಕೇಂದ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಂತ್ರಸ್ತರು ತಮಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಒತ್ತಾಯಿಸಿದ್ದರು. ಸಚಿವರು ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸಂಚರಿಸಲು ಉಚಿತ ಪಾಸ್‌ ವ್ಯವಸ್ಥೆ ಮಾಡಿದ್ದರು. 1 ತಿಂಗಳು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾ ಣಿಸಿದ್ದು, ಆ ಬಳಿಕ ಪಾಸ್‌ ನವೀಕರಿಸಿಲ್ಲ. ವಿದ್ಯಾರ್ಥಿಗಳಿಗೆ ನೀಡಿದ್ದ ಪಾಸ್‌ ನ.4ಕ್ಕೆ ಕೊನೆಗೊಳ್ಳಲಿದ್ದು, ಅವನ್ನೂ ನವೀಕರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದ ರಿಂದಾಗಿ ಸಂತ್ರಸ್ತರು ತಮ್ಮ ಭೂಮಿ ಇರುವ ಜೋಡುಪಾಲ ಮತ್ತು ಮೊಣ್ಣಂಗೇರಿಗೆ ಹೋಗಿಬರಲು 40 ರೂ. ನೀಡಬೇಕಾಗುತ್ತದೆ. ನ.4ರ ಬಳಿಕ ವಿದ್ಯಾರ್ಥಿಗಳೂ ಇಷ್ಟೇ ಮೊತ್ತ ತೆರಬೇಕಾಗುತ್ತದೆ. 

ಸರಕಾರ ನೀಡಿದ ಹಣ ಎಷ್ಟು ?
ಪ್ರಥಮ ಅವಧಿಯಲ್ಲಿ ಪ್ರತಿ ಸಂತ್ರಸ್ತ ಕುಟುಂಬಕ್ಕೆ ರೂ.3,800 ನೀಡಲಾಗಿದೆ. ಸಂಪೂರ್ಣ ಮನೆ ಕಳಕೊಂಡ ಕುಟುಂಬಕ್ಕೆ ತಲಾ 1,01,900 ರೂ. ನೀಡ ಲಾಗಿದೆ. ಹಾನಿಗೊಳಗಾದ ಮನೆ ಗಳಿಗೆ ಹಾನಿಗೆ ಅನುಸಾರ ಪರಿಹಾರ ನೀಡಲಾಗಿದೆ. ಇದು ಇನ್ನೂ ಕೆಲವರಿಗೆ ದೊರೆತಿಲ್ಲ. ಮನೆ ಮತ್ತು ಜಮೀನಿನ ಬಗ್ಗೆ ದಾಖಲೆ ಇಲ್ಲದವರಿಗೆ ಪರಿಹಾರ ದೊರೆಯುತ್ತದೆಯೇ ಇಲ್ಲವೇ ಎಂಬ ಗೊಂದಲ ಇದೆ.  ನಿರಾಶ್ರಿತರಿಗೆ ಪರಿಹಾರ ಕೇಂದ್ರ ಗಳಲ್ಲಿ ಆಹಾರ ಸಮಸ್ಯೆ ಎದುರಾಗಿಲ್ಲ.

ಜಾಗ ಗುರುತು
ನಿರಾಶ್ರಿತರಿಗೆ ಮನೆ ಕಟ್ಟಲು ಈಗಾಗಲೇ ಕೊಡಗು ಸಂಪಾಜೆ ಶಾಲೆ ಬಳಿ ಒಂದೂವರೆ ಎಕರೆ ಮತ್ತು ಮದೆನಾಡು ಸಮೀಪದ ಗೋಳಿಕಟ್ಟೆ ಎಂಬಲ್ಲಿ ಐದು ಎಕರೆ ಜಾಗ ಗುರುತಿಸಲಾಗಿದೆ.

ನಮಗೆ ಸಂಪಾಜೆ ಭಾಗದಲ್ಲಿ ಮನೆ ಕಟ್ಟಲು ಜಾಗ ನೀಡಲಿ. ನಾವು ಸಂಪಾಜೆ ಭಾಗವನ್ನೇ ಹೆಚ್ಚಾಗಿ ಅವಲಂಬಿಸಿದ್ದೇವೆ. ಸರಕಾರ ನಮಗೆ ಯಾವಾಗ, ಎಲ್ಲಿ ಮನೆ ಕಟ್ಟಿ ಜಾಗ ನೀಡುತ್ತದೆ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು. ಇಲ್ಲವಾದರೆ ನಾವು ಮಾನಸಿಕವಾಗಿ ಕೊರಗಬೇಕಾಗು ತ್ತದೆ. ಉಚಿತವಾಗಿ ನೀಡಿದ್ದ ಬಸ್‌ ಪಾಸ್‌ ರದ್ದುಗೊಳಿಸಿದ್ದು, ಇದನ್ನು ನವೀಕರಿಸಬೇಕು.
ರಾಮಕೃಷ್ಣ ಸಂತ್ರಸ್ತ, ಜೋಡುಪಾಲ

ಪ್ರಕೃತಿ ವಿಕೋಪದಿಂದಾಗಿ ನಾವು ಬಹಳ ಸಂಕಷ್ಟಕ್ಕೆ ಒಳಗಾಗಿದ್ದೇವೆ. ನಮ್ಮ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ನಿರಾಶ್ರಿತರಾದ ಪ್ರತೀ ಕುಟುಂಬಕ್ಕೆ ಸರಕಾರಿ ಉದ್ಯೋಗ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಾವು ಜೀವನ ನಡೆಸುವುದು ತುಂಬಾ ಕಷ್ಟ ಆಗಬಹುದು.
 ಶಿಲ್ಪಾ  ಜೋಡುಪಾಲ, ಅಂಗವಿಕಲ ಬಿಎಡ್‌ ಪದವೀಧರೆ

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.