ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆ ಅಗತ್ಯ
Team Udayavani, Nov 3, 2018, 12:33 PM IST
ಎಚ್.ಡಿ.ಕೋಟೆ: ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಂದು ಕೆಲಸಕ್ಕೂ ಕಂಪ್ಯೂಟರ್ ಅವಶ್ಯವಿದ್ದು ಪ್ರತಿಯೊಬ್ಬರೂ ಕಡ್ಡಾಯವಾಗಿ ಕಂಪ್ಯೂಟರ್ ತರಬೇತಿ ಪಡೆದುಕೊಳ್ಳಬೇಕಿದೆ ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಚಂದ್ರಪ್ಪ ಹೇಳಿದರು.
ಪಟ್ಟಣದ ಕಸ್ತೂರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಸರ್ವಚೇತನ ಟ್ರಸ್ಟ್ ಆದಿವಾಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿ ಜೀವನದ ಪ್ರಾರಂಭಿಕ ಹಂತದಿಂದಲೇ ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳುವುದರಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವುದರ ಜೊತೆಗೆ ಖಾಸಗಿ ಕ್ಷೇತ್ರದಲ್ಲೂ ಉದ್ಯೋಗ ಪಡೆಯಲು ಅನುಕೂಲವಾಗಲಿದೆ. ಇದರಿಂದ ಸ್ವಯಂ ಉದ್ಯೋಗವೂ ಮಾಡಬಹುದೆಂದು ಹೇಳಿದರು.
ಸವ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟಮ್ಮ ಮಾತನಾಡಿ, ಇಂದು ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿಯದಿದ್ದರೆ ಆತನ ವಿದ್ಯಾಭ್ಯಾಸ ಪೂರ್ಣಗೊಂಡಿಲ್ಲವೆಂದೇ ಅರ್ಥ. ಬ್ಯಾಂಕ್, ಕಚೇರಿ, ಮುದ್ರಣ ಮಾಧ್ಯಮ, ಡಿಜಿಟಲ್ ಮಾಧ್ಯಮ ಸೇರಿದಂತೆ ಎಲ್ಲೆ ಕ್ಷೇತ್ರಗಳಲ್ಲಿಯೂ ಕಂಪ್ಯೂಟರ್ ಬಳಕೆ ಅನಿವಾರ್ಯವಾಗಿದೆ ಎಂದು ಹೇಳಿದರು.
ಕಸ್ತೂರಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸತೀಶ್ ಆರಾಧ್ಯ, ಆದಿವಾಸಿ ಮುಖಂಡ ಶೈಲೇಂದ್ರ, ಬಿ.ಸಿದ್ದರಾಜು, ಜಯರಾಜು, ಕಸ್ತೂರಿ ಮಹೇಶ್, ಮಹದೇವು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.