ರೈತರಿಗೆ ಆತ್ಮಸ್ಥೈರ್ಯ ತುಂಬಿ: ವೀರೇಂದ್ರ ಹೆಗ್ಗಡೆ


Team Udayavani, Nov 3, 2018, 12:33 PM IST

m1-raita.jpg

ಮೈಸೂರು: ಸಾಲಕ್ಕೆ ಹೆದರಿ ರೈತರು ಆತ್ಮಹತ್ಯೆ ಮಾಡಿಕೊಳ್ಳದೆ, ಸರ್ಕಾರ ಮತ್ತು ಸಂಘ ಸಂಸ್ಥೆಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ.ವೀರೇಂದ್ರಹೆಗ್ಗಡೆ ಅವರು ಸಲಹೆ ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮೈಸೂರಿನಲ್ಲಿ ರಚಿಸಲಾದ ನೂತನ ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದ ಪಟ್ಟಾಧಿಕಾರಿಯಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೈಸೂರು ನಗರದ ಜನತೆಯ ಪರವಾಗಿ ನೀಡಲಾದ ಗೌರವ ಸಮರ್ಪಣೆ ಸ್ವೀಕರಿಸಿ ಅವರು ಮಾತನಾಡಿದರು.

ಮಹಿಳೆಯರ ಸಬಲೀಕರಣ: ರೈತನ ಆಪ್ರಮಿತ್ರ ಎನಿಸಿಕೊಂಡವರು ಕಷ್ಟಕ್ಕೆ ಸಿಲುಕಿದ ರೈತನಿಗೆ ಆತ್ಮಸ್ಥೈರ್ಯ ತುಂಬುವ ಮಾತುಗಳನ್ನಾಡುವ ಬದಲಿಗೆ ಸಾಲಕ್ಕೆ ಹೆದರಿ ಸಾಯುವ ಯೋಚನೆ ಮಾಡುತ್ತಿರುವವನಿಗೆ ಪ್ರಪಾತಕ್ಕೆ ತಳ್ಳಿ, ತಾನೂ ಸಾಯುತ್ತಾನೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಾಲ ಪಡೆದವರು ಯಾರೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಹೀಗಾಗಿ ಯೋಜನೆಯ ಸದ್ವಿನಿಯೋಗ ಮಾಡಿಕೊಳ್ಳಿ. ಯೋಜನೆಯಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ಹೇಳಿದರು.

ಪ್ರಗತಿ ರಕ್ಷಾ ಕವಚ: ಧರ್ಮಸ್ಥಳ ಸ್ವಸಹಾಯ ಸಂಘಗಳಿಂದ ಯಾರೇ ಸಾಲ ಪಡೆದರೂ ಸಾಲದ ಹಣಕ್ಕೆ ವಿಮೆ ಸೌಲಭ್ಯ ಕಲ್ಪಿಸಲು ಪ್ರಗತಿ ರಕ್ಷಾ ಕವಚ ಯೋಜನೆ ರೂಪಿಸಲಾಗಿದೆ. ಸ್ವಸಹಾಯ ಸಂಘಗಳಲ್ಲಿ ಸಾಲಪಡೆದಿರುವ 70 ಲಕ್ಷ ಜನರಿಗೆ ಎಲ್‌ಐಸಿಯ ವಿಮೆ ಸೌಲಭ್ಯ ದೊರೆಯಲಿದೆ.

ಯಾವುದೇ ಕಾರಣದಿಂದ ಮಧ್ಯದಲ್ಲಿ ಸಾಲಪಡೆದವರ ದೇಹಾಂತ್ಯವಾದರೆ ವಿಮೆಯ ಹಣ ಅವರ ಕುಟುಂಬದವರಿಗೆ ದೊರಕುತ್ತದೆ. ಹೀಗಾಗಿ ಈ ಯೋಜನೆಯ ಫ‌ಲವನ್ನು ಹೆಚ್ಚು ಪಡೆದುಕೊಳ್ಳಬೇಕು. ಈ ವರ್ಷ ಸಣ್ಣ ನೀರಾವರಿ ಇಲಾಖೆಯ ಸಹಯೋಗದಲ್ಲಿ ರಾಜ್ಯದ 93 ಕೆರೆಗಳನ್ನು ಅಭಿವೃದ್ಧಿ ಪಡಿಸಲು ಕಾರ್ಯಕ್ರಮ ರೂಪಿಸಿರುವುದಾಗಿ ಹೇಳಿದರು.

ನೆಮ್ಮದಿಗಾಗಿ ಪ್ರಾರ್ಥಿಸಿ: ರಾಕ್ಷಸರು ಹೊರಗೆಲ್ಲೋ ಇಲ್ಲ, ನಮ್ಮೊಳಗೇ ಇದ್ದಾರೆ. ನನ್ನೊಳಗೆ ಬಲಭಾಗದಲ್ಲಿ ದೇವರು, ಎಡಭಾಗದಲ್ಲಿ ರಾಕ್ಷಸರಿದ್ದಾರೆ. ನ್ಯಾಯದೇವತೆ, ಸತ್ಯದೇವತೆ ಮನೆಗೆ ಬಂದು ಒಳ್ಳೆಯದನ್ನು ಮಾಡು ಎಂದು ಒಂದು ಕಾಲನ್ನು ತಿಕ್ಕಿದರೆ, ರಾಕ್ಷಸರು ಸೋಮಾರಿಗಳಾಗುವಂತೆ ಕಾಲು ತಿಕ್ಕುತ್ತಾರೆ. ನಿಮ್ಮ ಭಾಗ್ಯದ ಬಾಗಿಲು ಈಗ ತೆರೆದಿದೆ. ಕಣ್ಮುಚ್ಚಿ ಕೂರದೆ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.

ಹಿಂದಿನ 20 ಹೆಗ್ಗಡೆಯವರು ಮಾಡಿದ್ದನ್ನು ನಾನು ಮುಂದುವರಿಸುತ್ತಿದ್ದೇನೆ. ಸ್ವಸಹಾಯ ಸಂಘಗಳ ಮೂಲಕ ಕುಟುಂಬ, ಗ್ರಾಮ ವಿಕಾಸದ ಕನಸು ಕಂಡು ಬಳಸಿಕೊಳ್ಳಿ. ನಾಳಿನ ಸುಖ, ನೆಮ್ಮದಿಗಾಗಿ ದೇವರನ್ನು ಪ್ರಾರ್ಥಿಸಿ, ದೇವರು ಕೊಟ್ಟಿದ್ದನ್ನು ಬಳಸಿಕೊಳ್ಳುವ ಬುದ್ಧಿವಂತಿಕೆಯನ್ನು ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳವನ್ನು ಧಾರ್ಮಿಕ ಸಹಿಷ್ಣು ಕ್ಷೇತ್ರವಾಗಿಸಿದ್ದಾರೆ. ಮನುಷ್ಯನನ್ನು ಧಾರ್ಮಿಕ ಕ್ಷೇತ್ರದ ಮೂಲಕ ದೈವತ್ವದ ಕಡೆಗೆ ಕೊಂಡೊಯ್ಯುತ್ತಿದ್ದಾರೆ. ಶ್ರೀಕ್ಷೇತ್ರದಿಂದ ಸಮಾಜಕ್ಕೆ ನೇರವಾಗಿ ಕಾರ್ಯಕ್ರಮಗಳನ್ನು ತಲುಪಿಸಿ ಸಮಾಜದಲ್ಲಿ ಸಮಾನತೆ, ಆರ್ಥಿಕ ಭದ್ರತೆ ಒದಗಿಸಿಕೊಡುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಮಾತನಾಡಿ, ಪ್ರಕೃತಿ ವಿಕೋಪದಿಂದ ನಲುಗಿರುವ ಕೊಡಗು ಜಿಲ್ಲೆಯಲ್ಲಿ ಅನೇಕರು ಆರ್ಥಿಕವಾಗಿ ಕಷ್ಟದಲ್ಲಿದ್ದಾರೆ. ಹೀಗಾಗಿ ಮಹಿಳಾ ಸಂಘಗಳ ಸಾಲ ಮರುಪಾವತಿಗೆ ಕಾಲಾವಕಾಶ ಕೊಡುವಂತೆ ಮನವಿ ಮಾಡಿದರು. ಸಂಸದ ಪ್ರತಾಪ್‌ಸಿಂಹ ಮಾತನಾಡಿ, ಖಾವಂದಿರು ಅಂದರೆ ಧಣಿ ಎಂದು ಅರ್ಥ. ಆದರೆ, ವೀರೇಂದ್ರಹೆಗ್ಗಡೆಯವರು ಧಣಿಯಲ್ಲ. ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಬಂದಿರುವ ಇವರು ಮಾತನಾಡುವ ಮಂಜುನಾಥ ಎಂದು ಬಣ್ಣಿಸಿದರು.

ಗಾವಡಗೆರೆ ಓಂ ಶ್ರೀಗುರುಲಿಂಗಜಂಗಮ ಮಠದ ನಟರಾಜ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಲ್‌.ನಾಗೇಂದ್ರ, ಗೌರವಾರ್ಪಣ ಸಮಿತಿ ಗೌರವಾಧ್ಯಕ್ಷರಾದ ವಿಧಾನಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್‌, ಡಿ.ಮಾದೇಗೌಡ, ಸಮಿತಿ ಕಾರ್ಯಾಧ್ಯಕ್ಷ ಎಚ್‌.ವಿ.ರಾಜೀವ್‌ ಉಪಸ್ಥಿತರಿದ್ದರು.

ಮಹಾರಾಷ್ಟ್ರದಿಂದ ರೈತರ ಆತ್ಮಹತ್ಯೆ ಗಾಳಿ ಕರ್ನಾಟಕಕ್ಕೂ ಬಂದಿರುವುದು ಚಿಂತೆಗೀಡು ಮಾಡಿದೆ. ಆತ್ಮಹತ್ಯೆ ಮಾಡಿಕೊಳ್ಳುವುದು ಪಾಪ ಮಾತ್ರವಲ್ಲ, ಆತ್ಮಹತ್ಯೆ ಮಾಡಿಕೊಂಡು ಕುಟುಂಬವನ್ನು ಅನಾಥ ಮಾಡಿ ಹೋಗುವವರನ್ನು ದೇವರು ಕೂಡ ಕ್ಷಮಿಸುವುದಿಲ್ಲ.
-ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ಧರ್ಮಾಧಿಕಾರಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.