ಸಾವಿರ ದಿವ್ಯಾಂಗರಿಗೆ ಡ್ರೈವಿಂಗ್‌ ಲೈಸೆನ್ಸ್‌ ಮಾಡಿಸಿದ ದಿವ್ಯಾಂಗ


Team Udayavani, Nov 3, 2018, 3:34 PM IST

3-november-15.gif

ಉಡುಪಿ : ಚಾಲನಾ ಪರವಾನಿಗೆ ಪಡೆಯುವುದು ದಿವ್ಯಾಂಗರಿಗೆ ಅಷ್ಟು ಸುಲಭದ ಕೆಲಸವಲ್ಲ. ಇದನ್ನು ಮನಗಂಡು ಸ್ವತಃ ದಿವ್ಯಾಂಗರಾದ ಅಂಬಲಪಾಡಿಯ ಸಾವಿರಕ್ಕೂ ಹೆಚ್ಚು ಮಂದಿಗೆ ನೆರವಾಗಿದ್ದಾರೆ. ಸುಮಾರು ನೂರು ಮಂದಿಗೆ ಉಚಿತವಾಗಿ ಡ್ರೈವಿಂಗ್‌ ತರಬೇತಿ ಕೊಡಿಸಿದ್ದೂ ಇವರ ಸಾಧನೆ.

ಉದ್ಯಾವರದ ಐಟಿಐ ಕಾಲೇಜಿನಲ್ಲಿ ಉದ್ಯೋಗದಲ್ಲಿರುವ ಜಗದೀಶ್‌ ಭಟ್‌ ಹುಟ್ಟುವಾಗ ಸಾಮಾನ್ಯ ಮಗುವಾಗಿ ಹುಟ್ಟಿದ್ದರು. ಆದರೆ 6ನೇ ವಯಸ್ಸಿಗೆ ಪೋಲಿಯೋ ಕಾಯಿಲೆಗೆ ಈಡಾಗಿದ್ದು, ಪರಿಣಾಮ ಒಂದು ಕಾಲು ಸ್ವಾಧೀನ ಕಳೆದುಕೊಂಡಿತ್ತು. ಆದರೂ ಧೃತಿಗೆಡದ ಜಗದೀಶ್‌ ಕಷ್ಟಪಟ್ಟು ಕಲಿತು ಪದವಿ ಶಿಕ್ಷಣವನ್ನು ಪೂರೈಸಿದರು. ಸ್ವಾವಲಂಬಿ ಜೀವನ ಸಾಗಿಸಬೇಕೆಂದು ದ್ವಿಚಕ್ರ ವಾಹನ ಚಾಲನಾ ತರಬೇತಿಯನ್ನೂ ಪಡೆದರು.

ಚಾಲನಾ ಪರವಾನಿಗೆ ಪಡೆಯಲು ನೆರವು
ದೈಹಿಕವಾಗಿ ಸೂಕ್ಷ್ಮವಾಗಿರುವ ವಿಕಲ ಚೇತನರಿಗೆ ವಾಹನ ತರಬೇತಿ ನೀಡಲು ಸಾಮಾನ್ಯವಾಗಿ ಯಾರೂ ಧೈರ್ಯ ಮಾಡುವುದಿಲ್ಲ. ಇದರಿಂದ ಸಾಕಷ್ಟು ಜನರಿಗೆ ವಾಹನ ತರಬೇತಿ ಪಡೆಯುವ ಕನಸು ಈಡೇರುವುದೇ ಇಲ್ಲ. ಇದಕ್ಕೊಂದು ಪರಿಹಾರ ನೀಡಬೇಕೆಂದು ಸ್ವತಃ ತರಬೇತಿ ನೀಡಲು ನಿಂತರು. ನೂರಕ್ಕೂ ಅಧಿಕ ಮಂದಿ ವಿಕಲಚೇತನರಿಗೆ ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೆ ವಾಹನ ತರಬೇತಿ ನೀಡಿರುವ ಇವರು, ಸುಮಾರು ಸಾವಿರಕ್ಕೂ ಮಿಕ್ಕಿ ವಿಕಲಚೇತನರಿಗೆ ಮತ್ತು ಪರವಾನಿಗೆ ಮಾಡಿಕೊಟ್ಟಿದ್ದಾರೆ. ಎಷ್ಟೋ ಜನ ವಿಕಲಚೇತನರು ಆರ್‌ಟಿಒ ಕಚೇರಿಗೆ ತೆರಳಿದ ಸಂದರ್ಭ ವಾಹನ ಪರವಾನಿಗೆ ಮಾಡಿಸಿಕೊಳ್ಳಲು ಕಷ್ಟಪಡುತ್ತಾರೆ ಆ ಸಂದರ್ಭ ಆರ್‌ಟಿಒ ಸಿಬಂದಿಯೇ ಇವರ ದೂರವಾಣಿ ಸಂಖ್ಯೆ ನೀಡಿ ಇವರ ಸಹಕಾರ ಪಡೆಯಲು ತಿಳಿಸುತ್ತಾರೆ.

ಯಕ್ಷಗಾನ, ಹುಲಿವೇಷದ ಆಸಕ್ತಿ
ಜಿಲ್ಲಾ ವಿಕಲಚೇತನರ ಒಕ್ಕೂಟದ ಉಪಾಧ್ಯಕ್ಷರೂ ಕೂಡ ಆಗಿರುವ ಇವರು, ಹಲವಾರು ಮಂದಿ ದಿವ್ಯಾಂಗರಿಗೆ ಕಾನೂನು, ಸವಲತ್ತು ಮಾಹಿತಿ ನೀಡುತ್ತಾರೆ. ಇದೀಗ ದಿವ್ಯಾಂಗರ ಯಕ್ಷಗಾನ ತಂಡವೊಂದನ್ನು ಕಟ್ಟಿಕೊಂಡು ವಿವಿಧೆಡೆ ಪ್ರದರ್ಶನ ನೀಡಿದ್ದಾರೆ. ಪ್ರತಿ ವರ್ಷ ಕೃಷ್ಣಾಷ್ಟಮಿಗೆ ಹುಲಿವೇಷ ಕುಣಿಯುತ್ತಾರೆ. ಈ ಹಿಂದೆ ವೇಷ ಹಾಕಿದ್ದ ಸಂದರ್ಭ ಶ್ರೀ ಶೀರೂರು ಮಠದ ಲಕ್ಷ್ಮೀವರತೀರ್ಥ ಶ್ರೀಪಾದರೂ ಇವರ ಜೀವನೋತ್ಸಾಹ ಕೊಂಡಾಡಿದ್ದರು.

ಪ್ರತಿಭೆಗೆ ಪ್ರೋತ್ಸಾಹ ನೀಡಿ
ದಿವ್ಯಾಂಗರಲ್ಲಿ ಸಾಕಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ. ಇವರಿಗೆ ಸೂಕ್ತ ಬೆಂಬಲ, ಪ್ರೋತ್ಸಾಹ ಸಿಗುತ್ತಿಲ್ಲ. ಅವರನ್ನು ಅನುಕಂಪದ ದೃಷ್ಟಿಯಿಂದ ನೋಡುವ ಬದಲು ಸಾಮಾನ್ಯ ದೃಷ್ಟಿಯಿಂದ ನೋಡಿ ಪ್ರೋತ್ಸಾಹಿಸಿ’
– ಜಗದೀಶ್‌ ಭಟ್‌, ದಿವ್ಯಾಂಗ

ಹಲವರಿಗೆ ತರಬೇತಿ
ಹಲವಾರು ವಿಕಲಚೇತನರಿಗೆ ವಾಹನ ಚಾಲನಾ ತರಬೇತಿ ಮತ್ತು ಪರವಾನಿಗೆ ಮಾಡಿಸಿಕೊಟ್ಟಿದ್ದಾರೆ. ಯಾರಿಂದಲೂ ಹಣವನ್ನು ಪಡೆದಿಲ್ಲ. ನಾನೇ ಹಲವು ಮಂದಿ ವಿಕಲಚೇತನರಿಗೆ ಇವರ ಮೂಲಕ ಲೈಸೆನ್ಸ್‌ ಮಾಡಿಸಿಕೊಟ್ಟಿದ್ದೇನೆ’.
ವಿಲ್ಫ್ರೆಡ್ ಡ್‌ ಗೋಮ್ಸ್‌,
  ಅಧ್ಯಕ್ಷರು, ವಿಕಲಚೇತನ ಒಕ್ಕೂಟ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.