2 ದಿನದಿಂದ ಕೆಲಸ ಸ್ಥಗಿತ: ಎಲ್ಲೆಡೆ ಕಸದ ರಾಶಿ
Team Udayavani, Nov 4, 2018, 12:36 PM IST
ನಂಜನಗೂಡು: ನಗರದಲ್ಲಿ ಕಳೆದ ಎರಡು ದಿನಗಳಿಂದ ಕಸ ವಿಲೇವಾರಿ ವಾಹನ ಚಾಲಕರು ಕೆಲಸವನ್ನು ಸ್ಥಗಿತಗೊಳಿಸಿರುವುದರಿಂದ ಎಲ್ಲೆಡೆ ಕಸದ ರಾಶಿ ಕಾಣುತ್ತಿದೆ. ನಗರಸಭೆ ವ್ಯಾಪ್ತಿಯಲ್ಲಿ ಕಸವನ್ನು ವಾಹನಗಳ ಮೂಲಕ ಸಾಗಿಸುವ ಚಾಲಕರಿಗೆ ಕಳೆದ 12 ತಿಂಗಳಿಂದ ವೇತನ ನೀಡಿಲ್ಲ. ಹೀಗಾಗಿ ತ್ವರಿತವಾಗಿ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ.
ಸಂಧಾನ ಸಭೆ: ಈ ಹಿನ್ನೆಲೆಯಲ್ಲಿ ಕಸ ವಿಲೇವಾರಿ ವಾಹನ ಚಾಲಕರೊಂದಿಗೆ ಸಭೆ ನಡೆಸಿದ ನಗರಸಭೆ ಆಯುಕ್ತ ವಿಜಯ್ಕುಮಾರ್ ಹಾಗೂ ಉಪಾಧ್ಯಕ್ಷ ಪ್ರದೀಪ್, ತ್ವರಿತವಾಗಿ ಬಾಕಿ ವೇತನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಸಂಬಳ ಬಿಡುಗಡೆಗೆ ಮನವರಿಕೆ ಮಾಡಿಕೊಡಲಾಗುವುದು.
ಕೂಡಲೇ ತ್ಯಾಜ್ಯ ವಿಲೇವಾರಿ ಕಾರ್ಯ ಕೈಗೊಳ್ಳುವಂತೆ ವಾಹನ ಚಾಲಕರಲ್ಲಿ ಮನವಿ ಮಾಡಿದರು. ಆದರೆ, ಇದಕ್ಕೆ ಬಗ್ಗದ ವಾಹನ ಚಾಲಕರು, ಕಳೆದ ಜೂನ್ ತಿಂಗಳಿನಲ್ಲೂ ಕೂಡ ಇದೇ ರೀತಿ ಭರವಸೆ ನೀಡಲಾಗಿತ್ತು. ಆದರೆ, ಇದುವರೆಗೂ ಕಾರ್ಯಗತವಾಗಿಲ್ಲ. ಬರೀ ಆಶ್ವಾಸನೆಗಳ ಮೂಲಕ ಕಾಲಹರಣ ಮಾಡಲಾಗುತ್ತಿದೆ. ಹೀಗಾಗಿ ಬಾಕಿ ವೇತನ ನೀಡಿದರೆ ಮಾತ್ರ ಕೆಲಸ ಪ್ರಾರಂಭಿಸುವುದಾಗಿ ಪಟ್ಟು ಹಿಡಿದರು.
ಹೀಗಾಗಿ ಸಂಧಾನ ಸಭೆ ವಿಫಲವಾಯಿತು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಡಿ.ಆರ್. ರಾಜು, ಆರೋಗ್ಯಾಧಿಕಾರಿ ಅರ್ಚನಾ, ಮುಖಂಡ ಕಮಲೇಶ್ ಹಾಗೂ ವಾಹನ ಚಾಲಕರಾದ ಕುಮಾರ್, ಪ್ರಸನ್ನ, ಬಾಲು, ಕೃಷ್ಣ , ಬಸವರಾಜು, ಬಸವಣ್ಣ, ಶಿವು, ಗಣೇಶ, ಮಣಿ, ಬಸವ, ನಂಜುಂಡಸ್ವಾಮಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.