![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 5, 2018, 6:10 AM IST
ಬೆಂಗಳೂರು : ರಾಜ್ಯದ ಪಾಲಿಟೆಕ್ನಿಕ್ಗಳಲ್ಲಿ ಡಿಪ್ಲೊಮಾ ಕೋರ್ಸ್ಗಳಿಗೆ 2009-10ನೇ ಸಾಲಿನಲ್ಲಿ ಮೊದಲ ವರ್ಷಕ್ಕೆ ಹಾಗೂ 2011-12, 2012-13ರಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ವಿಸ್ತರಿಸಲಾಗಿದೆ.
2009-10 ಹಾಗೂ 2011-12, 2012-13ರಲ್ಲಿ ಐಟಿಐಗೆ ದಾಖಲಾಗಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 2018-19 ಏಪ್ರಿಲ್, ಮೇ ಸಮಿಸ್ಟರ್ ಪರೀಕ್ಷೆಯೇ ಕೊನೆಯ ಅವಕಾಶ ಆಗಿತ್ತು. ಆದರೆ, ಏಪ್ರಿಲ್, ಮೇನಲ್ಲಿ ನಡೆದ ಪರೀಕ್ಷೆಯಲ್ಲಿ ಹಲವು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರಿಂದ ಶೈಕ್ಷಣಿಕ ಹಿತದೃಷ್ಟಿಯಿಂದ ಒಂದು ಅವಧಿ ವಿಸ್ತರಿಸಲಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಈ ಅವಧಿಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಬೇರೆ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ. ನಿರ್ದಿಷ್ಟ ವರ್ಷದೊಳಗೆ ಕೋರ್ಸ್ ಪೂರೈಸಬೇಕು ಎಂಬ ಸ್ಪಷ್ಟ ನಿಯಮ ಇರುತ್ತದೆ. ಆದರೆ, ಕ್ಯಾರಿಓವರ್ ಪದ್ಧತಿಯಲ್ಲಿ ಕೆಲವು ವಿದ್ಯಾರ್ಥಿಗಳು ಅನುತ್ತೀರ್ಣ ವಿಷಯವನ್ನು ಮುಂದುವರಿಸಿಕೊಂಡು ಬರುತ್ತಿರುತ್ತಾರೆ. ಪಠ್ಯಕ್ರಮ ಬದಲಾದಂತೆ ಈ ವಿದ್ಯಾರ್ಥಿಗಳಿಗೆ ಅನಾನೂಕೂಲವಾಗಲಿದೆ. ಹೀಗಾಗಿ 2009-10 ಹಾಗೂ 2011-12, 2012-13ರಲ್ಲಿ ಐಟಿಐಗೆ ದಾಖಲಾಗಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆದು ಪಾಸಾಗಲು ಒಂದು ಅವಕಾಶ ನೀಡಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಅರ್ಹ ಅಭ್ಯರ್ಥಿಗಳು 2018ರ ನವೆಂಬರ್/ಡಿಸೆಂಬರ್ ಸೆಮಿಸ್ಟರ್ ಪರೀಕ್ಷೆ ಹಾಗೂ 2019ರ ಏಪ್ರಿಲ್/ಮೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಾಜರಾಗಲು ಅವಕಾಶ ಇದೆ. 2018ರ ನವೆಂಬರ್/ಡಿಸೆಂಬರ್ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗುವವರು ನ.13ರೊಳಗೆ ದಂಡ ರಹಿತವಾಗಿ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ವಿವರಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.