ಪುರಸಭೆಗೆಸವಾಲಾಗಿದೆಬೀದಿನಾಯಿಗಳ ನಿಯಂತ್ರಣ;ಸಾರ್ವಜನಿಕರಲ್ಲಿ ಭಯದಭೀತಿ!


Team Udayavani, Nov 15, 2018, 3:20 PM IST

15-november-11.gif

ಕಾಪು : ಕಾಪು ಪೇಟೆಯೂ ಸೇರಿದಂತೆ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದಾಗಿ ಶಾಲಾ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರಲ್ಲಿ ಭಯದ ಭೀತಿ ಎದುರಾಗಿದೆ. ದಿನದಿಂದ ದಿನಕ್ಕೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬೀದಿ ನಾಯಿಗಳನ್ನು ನಿಯಂತ್ರಿಸುವುದೇ ಪುರಸಭೆಗೆ ದೊಡ್ಡ ಸವಾಲಾಗಿ ಬಿಟ್ಟಿದೆ.

ಸ್ವಚ್ಚ ಕಾಪು – ಸುಂದರ ಕಾಪು ನಿರ್ಮಾಣ ಗುರಿ ಹೊಂದಿರುವ ಪುರಸಭೆಗೆ ಬೀದಿ ನಾಯಿಗಳನ್ನು ನಿಯಂತ್ರಿಸುವುದೇ ದೊಡ್ಡ ಸವಾಲಾಗಿ ಬಿಟ್ಟಿದೆ. ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗದಂತೆ ತಡೆಯಲು ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನಡೆಸುವುದಾಗಿ ಪುರಸಭೆ ಹೇಳುತ್ತಾ ಬರುತ್ತಿದೆಯಾದರೂ, ಅದು ಇನ್ನೂ ಕೂಡಾ ಕಾರ್ಯರೂಪಕ್ಕೆ ಬರುತ್ತಿಲ್ಲ.

ಹುಚ್ಚು ನಾಯಿ ಭೀತಿ
ಕಾಪು ಪೇಟೆಯಲ್ಲಿ ಬೀದಿ ನಾಯಿಗಳ ಜೊತೆಗೆ ಹುಚ್ಚು ನಾಯಿಗಳ ಹಾವಳಿಯೂ ಹೆಚ್ಚಾಗಿದ್ದು, ಹಲವು ಮಂದಿ ಹುಚ್ಚು ನಾಯಿಗಳ ಕಡಿತಕ್ಕೆ ಒಳಗಾಗಿದ್ದಾರೆ. ಕೆಲವು ಸಮಯದ ಹಿಂದೆ ಒಂದೇ ದಿನ ಆರೇಳು ಜನರಿಗೆ ಹುಚ್ಚು ನಾಯಿ ಕಡಿದಿದ್ದು, ಸಾರ್ವಜನಿಕರೇ ಆ ನಾಯಿಯನ್ನು ಕೊಂದು ಹೂತು ಹಾಕಿದ ಪ್ರಸಂಗವೂ ಕಾಪು ಮಾರ್ಕೆಟ್‌ ಬಳಿ ನಡೆದಿತ್ತು.

ಸಾಮಾನ್ಯ ಸಭೆಯಲ್ಲಿ ಸಾಮಾನ್ಯ ವಿಷಯ
ಬೀದಿ ನಾಯಿಗಳ ಸಮಸ್ಯೆಯ ಬಗ್ಗೆ ಪುರಸಭೆಯ ಪ್ರತೀ ತಿಂಗಳ ಸಾಮಾನ್ಯ ಸಭೆಯಲ್ಲೂ ಭಾರೀ ಚರ್ಚೆ ನಡೆಯುತ್ತಿದ್ದು, ಆ ಚರ್ಚೆ ಮತ್ತು ಅದರ ಕುರಿತಾದ ಪರಿಹಾರದ ಕ್ರಮಗಳು ಕೇವಲ ನಿರ್ಣಯ ಪುಸ್ತಕಕ್ಕೆ ಮಾತ್ರಾ ಸೀಮಿತವಾಗಿ ಬಿಟ್ಟಿದೆ. ಬೀದಿ ನಾಯಿಗಳ ಬಗ್ಗೆ ಭಾರೀ ಚರ್ಚೆಗಳು ನಡೆದರೂ ಈ ಕುರಿತಾದ ಪರಿಹಾರ ಕ್ರಮ ಮಾತ್ರಾ ಶೂನ್ಯ ಎಂಬಂತಾಗಿದೆ.

ಕಾಪು ಪೇಟೆಯಲ್ಲಿ ಬೀದಿ ನಾಯಿಗಳಿಂದಾಗಿ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಪುರಸಭೆಯ ಗಮನಕ್ಕೆ ತರಲಾಗುತ್ತಿದೆಯಾದರೂ, ಪುರಸಭೆ ಮಾತ್ರಾ ಈ ಬಗ್ಗೆ ಯಾವುದೇ ರೀತಿಯ ಕ್ರಮಕ್ಕೆ ಮುಂದಾಗಿಲ್ಲ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ. ಬೀದಿ ನಾಯಿಗಳ ನಿಯಂತ್ರಣದಲ್ಲಿ ಪುರಸಭೆ ಆಡಳಿತವು ಸಂಪೂರ್ಣ ವಿಫಲವಾಗಿದೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ 500ಕ್ಕೂ ಅಧಿಕ ಬೀದಿ ನಾಯಿಗಳನ್ನು ಗುರುತಿಸಲಾಗಿದ್ದು, ಅವುಗಳ ನಿಯಂತ್ರಣದ ಬಗ್ಗೆ ವಿವಿಧ ರೀತಿಯ ಕ್ರಮಕ್ಕೆ ಪುರಸಭೆ ಕಾರ್ಯೋನ್ಮುಖವಾಗಿದೆ. ಬೀದಿ ನಾಯಿಗಳ ಜೊತೆಗೆ ಸಾಕು ನಾಯಿಗಳ ನಿಯಂತ್ರಣಕ್ಕೂ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

ಕಾಪು ಪುರಸಭೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ನಡೆಸುವ ಉದ್ದೇಶದೊಂದಿಗೆ ಟೆಂಡರ್‌ ಕರೆಯಲಾಗಿದ್ದು, ಟೆಂಡರ್‌ ಮೂಲಕ ಬಿಡ್‌ ಸಲ್ಲಿಸಿರುವ ಬೆಂಗಳೂರು ಮೂಲದ ಎನ್‌ಜಿಒಗೆ ಕಾರ್ಯಾದೇಶ ನೀಡಲಾಗಿದೆ. ಒಂದು ಜೋಡಿ ನಾಯಿಯ ಸಂತಾನ ಹರಣ ಚಿಕಿತ್ಸೆಗೆ 2,700ರೂ. ವೆಚ್ಚ ತಗುಲಲಿದ್ದು, ಅದನ್ನು ಬೆಂಗಳೂರಿನ ಎನ್‌ಜಿಒ ಒಂದಕ್ಕೆ ಆದೇಶ ಪತ್ರ ನೀಡಲಾಗಿದೆ. ಅದರೊಂದಿಗೆ ಪುರಸಭಾ ವ್ಯಾಪ್ತಿಯಲ್ಲಿರುವ ಸಾಕು ನಾಯಿಗಳ ಬಗ್ಗೆಯೂ ಮಾಹಿತಿಯನ್ನು ಕಲೆ ಹಾಕುವ ಪ್ರಯತ್ನವೂ ನಡೆಯುತ್ತಿದೆ.
ರಾಯಪ್ಪ , ಮುಖ್ಯಾಧಿಕಾರಿ, ಕಾಪು ಪುರಸಭೆ 

ಕಾಪು ಪೇಟೆಯೂ ಸೇರಿದಂತೆ, ಪುರಸಭೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳನ್ನು ನಿಯಂತ್ರಿಸಲು ಪುರಸಭೆ ಶೀಘ್ರದಲ್ಲಿ ಕ್ರಮ ಕೈಗೊಳ್ಳ ಬೇಕಿದೆ. ಪ್ರತೀ ದಿನ ಬೆಳಿಗ್ಗೆ ಮತ್ತು ಸಂಜೆ ವಾಕಿಂಗ್‌ ಹೋಗುವವರನ್ನು ಮತ್ತು ಶಾಲಾ ವಿದ್ಯಾರ್ಥಿಗಳನ್ನು ಬೀದಿ ನಾಯಿಗಳು ಬಹುವಾಗಿ ಕಾಡುತ್ತಿದ್ದು, ಕಾಪು ಪೇಟೆಯಲ್ಲಿ ನಡೆದಾಡುವ ನಾಗರಿಕರಿಗೂ ಬೀದಿ ನಾಯಿಗಳ ಬಗ್ಗೆ ಭಯ ಆವರಿಸಲಾರಂಭಿಸಿದೆ. ಬೀದಿ ನಾಯಿಗಳ ನಿಯಂತ್ರಣದ ಬಗ್ಗೆ ಪುರಸಭೆ ಕ್ರಮ ಕೈಗೊಳ್ಳಬೇಕಿದ್ದು, ಅದರೊಂದಿಗೆ ಜಿಲ್ಲಾಡಳಿತ ಕೂಡಾ ಶ್ವಾನ ಪಾಲನಾ ಕೇಂದ್ರ ಸ್ಥಾಪಿಸಲು ಮುಂದಾಗಬೇಕಿದೆ.
ಜಯಕರ್‌ ಪೂಜಾರಿ,
ಮಾಜಿ ಗ್ರಾ.ಪಂ. ಸದಸ್ಯ, ಕೈಪುಂಜಾಲು

 ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.