ಪ್ರೇಮಿಗಳ ಮರ್ಯಾದಾ ಹತ್ಯೆ?
Team Udayavani, Nov 17, 2018, 6:50 AM IST
ಮಂಡ್ಯ: ಅಂತರ್ಜಾತಿ ಮದುವೆ ಮಾಡಿಕೊಂಡಿದ್ದನ್ನು ಸಹಿಸದ ಹುಡುಗಿಯ ಸಂಬಂಧಿಕರು ತಮಿಳುನಾಡಿನ ಪ್ರೇಮಿಗಳ ಕೈ-ಕಾಲು ಕಟ್ಟಿ, ಕೆರೆಗೆ ಎಸೆದು ಕೊಲೆ ಮಾಡಿರುವ ಘಟನೆ ಮಳವಳ್ಳಿ ಸಮೀಪದ ಶಿವನಸಮುದ್ರ ಬಳಿ ನಡೆದಿದೆ.
ಇದೊಂದು ಮರ್ಯಾದಾ ಹತ್ಯೆ ಎಂದು ಮೇಲ್ನೋಟಕ್ಕೆ ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ತಮಿಳುನಾಡಿನ ಹೊಸೂರು ತಾಲೂಕು ಚೂಡಗೌಂಡನಹಳ್ಳಿ ಗ್ರಾಮದ ನಂದೀಶ್ (26) ಹಾಗೂ ಅದೇ ಗ್ರಾಮದ ಸ್ವಾತಿ(19) ಕೊಲೆಯಾದ ಪ್ರೇಮಿಗಳು.
ನಂದೀಶ್, ಹಾರ್ಡ್ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸ್ವಾತಿ, ಕೃಷ್ಣಗಿರಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದಳು.
ಮೂರು ತಿಂಗಳ ಹಿಂದೆ ಸ್ವಾತಿ, ಮನೆಯಿಂದ ನಾಪತ್ತೆಯಾಗಿದ್ದಳು. ನಂತರ, ನಂದೀಶನೊಂದಿಗೆ ಮದುವೆಯಾಗಿ ಹೊಸೂರಿನಲ್ಲಿ ಬಾಡಿಗೆ ಮನೆಯೊಂದನ್ನು ಪಡೆದು ವಾಸವಾಗಿದ್ದರು. ನ.10ರಂದು ಹೊಸೂರಿನಲ್ಲಿ ಚಿತ್ರನಟ ಕಮಲ್ಹಾಸನ್ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ, ವಿಷಯ ಪೋಷಕರಿಗೆ ತಿಳಿಯಿತು.
ಇದರಿಂದ ಕೋಪಗೊಂಡ ಸ್ವಾತಿಯ ತಂದೆ ಶ್ರೀನಿವಾಸ್, ದೊಡ್ಡಪ್ಪ ವೆಂಕಟೇಶ್,ಅಶ್ವಥ್, ವೆಂಕಟರಾಜು ಅದೇ ದಿನ ಹೊಸೂರಿಗೆ ಹೋಗಿ, ಪುಸಲಾಯಿಸಿ ಇಬ್ಬರನ್ನೂ ಟಾಟಾ ಸುಮೋದೊಳಗೆ ಹತ್ತಿಸಿಕೊಂಡು ಶಿವನಸಮುದ್ರಕ್ಕೆ ಬಂದರು. ಮುಂಜಾನೆ 3 ಗಂಟೆ ಸುಮಾರಿಗೆ ನಂದೀಶನ ಕುತ್ತಿಗೆ ಬಿಗಿದು,ಕೈ-ಕಾಲು ಕಟ್ಟಿ ಕೆರೆಗೆ ಎಸೆದರು. ನಂತರ ಸ್ವಾತಿಗೂ ಮನಸೋ ಇಚ್ಛೆ ಥಳಿಸಿ ವೇಲ್ನಿಂದ ಆಕೆಯ ಕಾಲನ್ನು ಬಿಗಿದು, ಅದೇ ಕೆರೆಗೆ ಎಸೆದು, ಅಲ್ಲಿಂದ ಹೊಸೂರಿಗೆ ವಾಪಸ್ಸಾಗಿದ್ದರು. ನ.13ರಂದು ಕತ್ತು ಬಿಗಿದು, ಕಾಲು ಕಟ್ಟಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಮತ್ತು ನ.15ರಂದು ಕಾಲುಕಟ್ಟಿದ ರೀತಿಯಲ್ಲಿಯುವತಿಯ ಮೃತದೇಹ ಶಿವನಸಮುದ್ರ ಬಳಿಯ ಕೆರೆಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು, ಯುವತಿಯ ತಂದೆಯನ್ನು ತಮಿಳುನಾಡಿನ ಕೃಷ್ಣಗಿರಿಯಲ್ಲಿ ಬಂಧಿಸಿದ್ದಾರೆ. ಬೆಳಕವಾಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.