![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 25, 2018, 10:47 AM IST
ಕಲಬುರಗಿ: ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ತಾಲೂಕುಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಘೋಷಿತ ಆರು ತಾಲೂಕುಗಳಲ್ಲಿ ಬರ ಪರಿಹಾರ ಕಾಮಗಾರಿ ಆರಂಭಿಸಬೇಕು, ಬರ ಪರಿಹಾರಕ್ಕೆ ಎಕರೆಗೆ 10 ಸಾವಿರ ರೂ. ನೀಡಬೇಕು, ಕೂಲಿಕಾರರು ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಇರುವ ತೊಂದರೆ ನಿವಾರಿಸಬೇಕು, ವರ್ಷಕ್ಕೆ 100 ದಿನಗಳ ಬದಲು ಬರಗಾಲದ ಅಂಗವಾಗಿ ಕೆಲಸದ ಮಿತಿ ತೆಗೆದುಹಾಕಬೇಕು, ಕೂಲಿಕಾರರು ಕೇಳಿದ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.
ಬರದ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಪಟ್ಟಣಗಳಿಗೂ ವಿಸ್ತರಿಸಿ ಅಲ್ಲಿನ ಕೂಲಿಕಾರರಿಗೂ ಕೆಲಸ ನೀಡಬೇಕು. ಜಾನುವಾರುಗಳಿಗೆ ಗ್ರಾ.ಪಂ. ಮಟ್ಟದಲ್ಲಿ ಮೇವು ಬ್ಯಾಂಕ್ ತೆರೆಯಬೇಕು, ಕುಡಿಯುವ ನೀರು ಒದಗಿಸಬೇಕೆಂದು ಆಗ್ರಹಿಸಿದರು.
ರಾಜ್ಯ ಸರ್ಕಾರ 2 ಲಕ್ಷ ರೂ.ಗಳ ರೈತರ ಸಾಲ ಮನ್ನಾ ಮಾಡಿದ್ದು, ಉಳಿದ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಫಸಲ್ ವಿಮಾ ಯೋಜನೆ ವಿಮಾ ಕಂಪನಿಗಳ ಪರವಾಗಿದ್ದು, ಅದರ ಬದಲು ರಾಜ್ಯ ಸರ್ಕಾರ ಪರ್ಯಾಯ ಬೆಳೆ ವಿಮೆ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿದರು.
ಡಾ| ಸ್ವಾಮಿನಾಥನ್ ವರದಿಯಂತೆ ತೊಗರಿಗೆ 7500ರೂ. ಗಳ ಬೆಂಬಲ ಬೆಲೆ ನಿಗದಿಪಡಿಸಬೇಕು, ಕೇಂದ್ರ ಸರ್ಕಾರ ಶೇ.25 ರಷ್ಟು ಕೋಟಾ ನಿಗದಿಪಡಿಸಿದ್ದು, ರೈತರು ಬೆಳೆದ ಬೆಳೆ ಖರೀದಿ ಮಾಡಲು ಕಾನೂನು ರೂಪಿಸುವಂತೆ ಒತ್ತಾಯಿಸಿದರು. ರಾಜ್ಯ ಸರ್ಕಾರ ಕಳೆದ ವರ್ಷದಂತೆ ಈ ವರ್ಷವೂ ಪ್ರತಿ ಕ್ವಿಂಟಲ್ಗೆ 600 ರೂ. ಬದಲು 1000 ರೂ. ಪ್ರೋತ್ಸಾಹ ಧನ ನೀಡಬೇಕು. ಗ್ರಾ.ಪಂ. ಮಟ್ಟದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಅಶೋಕ ಮ್ಯಾಗೇರಿ, ಶಾಂತಪ್ಪ ಪಾಟೀಲ, ಮಲ್ಲಣ್ಣಗೌಡ ಬನ್ನೂರ, ಸುಭಾಷ ಹೊಸ್ಮನಿ, ಪಾಂಡುರಂಗ ಮಾವಿನಕರ, ಸಿದ್ದಯ್ಯ ಸ್ವಾಮಿ, ಗೌರಮ್ಮ ಪಾಟೀಲ, ಸುಧಾಮ ಧನ್ನಿ ಹಾಗೂ ಇತರರು ಭಾಗವಹಿಸಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.