ಅಘೋಷಿತ ಬಂದ್‌, ಬಿಗಿ ಬಂದೋಬಸ್ತ್


Team Udayavani, Nov 26, 2018, 12:56 PM IST

agoshita.jpg

ಮಂಡ್ಯ: ಅಂಬರೀಶ್‌ ಸಾವಿನ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದ್ದು, ವರ್ತಕರು ಭಾನುವಾರ ಸ್ವಯಂಪ್ರೇರಿತರಾಗಿ ಅಂಗಡಿ ಬಾಗಿಲು ಮುಚ್ಚಿದ್ದರು. ಜತೆಗೆ, ನೆಚ್ಚಿನ ನಾಯಕನ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕರೆ ತರುವಂತೆ, ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಅಭಿಮಾನಿಗಳು ಅಲ್ಲಲ್ಲಿ ರಸ್ತೆ ತಡೆ ನಡೆಸಿದರು. ಚಿತ್ರಮಂದಿರಗಳಲ್ಲಿ ಪ್ರದರ್ಶನ ರದ್ದು ಪಡಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಅಂಬರೀಶ್‌ ಪಾರ್ಥಿವ ಶರೀರದ ದರ್ಶನಕ್ಕಾಗಿ ಜಿಲ್ಲೆಯ ಜನರನ್ನು ಕರೆದೊಯ್ಯಲು ಬೆಂಗಳೂರಿಗೆ ಸಾರಿಗೆ ಬಸ್‌ಗಳನ್ನು ಬಿಡಲಾಗಿತ್ತು. ಬಹುತೇಕ ಖಾಸಗಿ ಬಸ್‌ಗಳು ಸಂಚಾರವನ್ನು ಸ್ಥಗಿತಗೊಳಿಸಿದ್ದವು. ಇದರ ಪರಿಣಾಮ ಬಸ್‌ಗಳ ಕೊರತೆಯಿಂದ ಪ್ರಯಾಣಿಕರು ದೂರದ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈ ಮಧ್ಯೆ, ಅಂಬರೀಶ್‌ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರುವಂತೆ ಒತ್ತಾಯಿಸಿ ಅಭಿಮಾನಿಗಳು ಮಂಡ್ಯ ಜಯಚಾಮರಾಜೇಂದ್ರ ಒಡೆಯರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆ ಯಲ್ಲಿನ ಎಲ್ಲಾ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ರದ್ದುಪಡಿಸಲಾಗಿತ್ತು. ಚಿತ್ರಮಂದಿರದ ಆವರಣದಲ್ಲಿ ಅಂಬರೀಷ್‌ ಭಾವಚಿತ್ರವಿರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಅಂಬಿ ಮತ್ತೆ ಹುಟ್ಟಿ  ಬಾ…. ಎಂಬ ಘೋಷಣೆ ಬರೆದಿರುವ ಅಂಬಿಯ ಕಟೌಟ್‌ಗಳನ್ನು ಗೂಡ್ಸ್‌ ಆಟೋದಲ್ಲಿ ಮೆರವಣಿಗೆ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು. ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ದೊಡ್ಡರಸಿನಕೆರೆಯಲ್ಲಿ ನಡೆಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ದೊಡ್ಡರಸಿನಕೆರೆ ಗೇಟ್‌ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಮಂಡ್ಯ ಮಿಠಾಯಿ ಎಂದರೆ ಅಂಬಿಗೆ ಬಲು ಪ್ರಿಯ: ಅಂಬರೀಶ್‌ಗೆ ಬಹಳ ಇಷ್ಟವಾದ ಸಿಹಿ ಎಂದರೆ ಅದು ಮಂಡ್ಯ ಮಿಠಾಯಿ. ತವರು ಜಿಲ್ಲೆಗೆ ಭೇಟಿ ನೀಡಿದ ಬಹುತೇಕ ಸಂದರ್ಭಗಳಲ್ಲಿ ತಮಗಿರುವ ಮಧುಮೇಹ ರೋಗವನ್ನು ಮರೆತು ಮಿಠಾಯಿಯನ್ನು ಬಾಯ್ತುಂಬ ಚಪ್ಪರಿಸಿ ತಿಂದು ಹೋಗುತ್ತಿದ್ದರು. ಅಂದ ಹಾಗೆ ಅಂಬರೀಶ್‌ ತಿನ್ನುತ್ತಿದ್ದ ಆ ಮಿಠಾಯಿ ಯಾವುದೋ ಸ್ಟಾರ್‌ ಹೋಟೆಲ್‌ ಅಥವಾ ಬೇಕರಿಯಲ್ಲಿ ತಯಾರಾದ ಮಿಠಾಯಿಯಲ್ಲ.

ಅದೊಂದು ಪುಟ್ಟ ಮನೆಯಲ್ಲಿ ತಯಾರಾಗುತ್ತಿದ್ದ ಕೊಬ್ಬರಿ ಮಿಠಾಯಿ. ಮಂಡ್ಯ ನಗರದಿಂದ ಚಿಕ್ಕಮಂಡ್ಯಕ್ಕೆ ಹೋಗುವ ಮಾರ್ಗದ ಕಾರೇಮನೆ ಗೇಟ್‌ ಬಳಿ ಮಾದಯ್ಯ ಎಂಬುವರು ತಯಾರಿಸುತ್ತಿದ್ದ ಮಿಠಾಯಿ ಅಂಬರೀಶ್‌ಗೆ ಬಹಳ ಅಚ್ಚುಮೆಚ್ಚು. ಆ ಮಾರ್ಗದಲ್ಲಿ ಹೋಗುವಾಗ ಅಂಬರೀಶ್‌ ಕಾರಿನಿಂದ ಇಳಿದು ಬಂದು ಮಿಠಾಯಿ ತೆಗೆದುಕೊಂಡು ಸವಿಯುತ್ತಿದ್ದರು. ಜತೆಗೆ, ಪ್ಯಾಕೆಟ್‌ಗಳಲ್ಲಿ ಕಟ್ಟಿಸಿಕೊಂಡು ಹೋಗುತ್ತಿದ್ದರು. 

ಅಂಬರೀಶ್‌ಗೆ ಮಂಡ್ಯದ ಗಂಡು ಎಂದು ಬಿರುದು ಕೊಟ್ಟಿದ್ದು ನಾನೇ. ಅವರ ಸಾವು ನನಗೆ ಅತೀವ ದುಃಖವನ್ನು ಉಂಟುಮಾಡಿದೆ. ಅವರದ್ದು ಇನ್ನೂ ಚಿಕ್ಕ ವಯಸ್ಸು. ಸಾಯುವಂತಹ ವಯಸ್ಸೇನೂ ಆಗಿರಲಿಲ್ಲ. ತುಂಬಾ ಒಳ್ಳೆಯ ಮನುಷ್ಯ. ಮೃದು ಸ್ವಭಾವದ ವ್ಯಕ್ತಿ. ಮಾತು ಕಠಿಣವಾಗಿದ್ದರೂ, ಹೂವಿನಂಥ ಮನಸ್ಸುಳ್ಳವರಾಗಿದ್ದರು. 
-ಜಿ.ಮಾದೇಗೌಡ, ಮಾಜಿ ಸಂಸದ.

ಟಾಪ್ ನ್ಯೂಸ್

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

1-isra;

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

Brahmavar

Mangaluru: ಅಪರಿಚಿತ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.