![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 30, 2018, 6:00 AM IST
ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ ದಿನದಿಂದ ದಿನಕ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಶಾಸಕ, ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಹಾಗೂ ನಿರ್ಮಾಪಕ ಕೆ. ಮಂಜು ಗುರುವಾರ ಭಾರತಿ ವಿಷ್ಣುವರ್ಧನ್ ಅವರನ್ನು ಭೇಟಿ ಮಾಡಿ ಸ್ಮಾರಕ ನಿರ್ಮಾಣ ವಿಚಾರ ಕುರಿತಂತೆ ಚರ್ಚಿಸಿದರು. ಇದೇ ವೇಳೆ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸುವಂತೆ ವಿಷ್ಣುವರ್ಧನ್ ಕುಟುಂಬ ಮುನಿರತ್ನ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ.
ಬಳಿಕ ಮಾತನಾಡಿದ ಮುನಿರತ್ನ, “ವಿಷ್ಣುವರ್ಧನ್ ಕುಟುಂಬ ಸ್ಮಾರಕ ನಿರ್ಮಾಣ ಕುರಿತು ಮುಖ್ಯಮಂತ್ರಿಗೆ ಮನವಿ ಪತ್ರ ಬರೆದು, ನನಗೆ ನೀಡಿದ್ದಾರೆ. ಹಾಗಾಗಿ ಅದರಲ್ಲಿ ಏನಿದೆ ಎಂದು ನಾನು ಓದಲು ಹೋಗುವುದಿಲ್ಲ. ಈ ಪತ್ರವನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿ, ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸುತ್ತೇನೆ. ಸ್ಮಾರಕ ನಿರ್ಮಾಣ ವಿಚಾರವಾಗಿ ಚಿತ್ರರಂಗ ಹಾಗೂ ಅಭಿಮಾನಿಗಳ ಸಲಹೆ ಪಡೆದುಕೊಳ್ಳುತ್ತೇವೆ. ಆದರೆ, ಕುಟುಂಬದ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಅದೇ ಅಂತಿಮ. ಈಗಾಗಲೇ ನಿರ್ಮಾಣವಾಗಿರುವ ಡಾ. ರಾಜ್ ಹಾಗೂ ಅಂಬರೀಶ್ ಸ್ಮಾರಕದಂತೆಯೇ, ವಿಷ್ಣುವರ್ಧನ್ ಸ್ಮಾರಕವೂ ನಿರ್ಮಾಣ ಆಗಬೇಕು ಎಂಬುದು ನಮ್ಮ ಆಸೆ’ ಎಂದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್, “ಅಭಿಮಾನ್ ಸ್ಟುಡಿಯೋ ಜಾಗದ ವಿವಾದ ಕೋರ್ಟ್ನಲ್ಲಿದೆ. ಅದು ಬಗೆಹರಿಯದ ವ್ಯಾಜ್ಯ. ಹೀಗಾಗಿಯೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣವಾಗಲಿ ಎಂಬುದು ನಮ್ಮ ಆಶಯ. ಅದಕ್ಕಾಗಿ ಈಗಾಗಲೇ ಗುದ್ದಲಿ ಪೂಜೆ ಕೂಡ ಆಗಿದೆ. ಆದರೆ, ಅಲ್ಲೂ ಒಂದಷ್ಟು ಕಾನೂನು ಸಮಸ್ಯೆಗಳು ಬಂದಿದ್ದರಿಂದ ಕೆಲಸ ನಿಂತು ಹೋಯ್ತು. ಅದನ್ನೆಲ್ಲ ಬಗೆಹರಿಸಿ ಸ್ಮಾರಕ ನಿರ್ಮಿಸಿದರೆ ಸಾಕು. ಈ ವಿಚಾರವನ್ನು ಇನ್ನೂ ಮುಂದುವರಿಸಲು ನಮಗೂ ಇಷ್ಟವಿಲ್ಲ. ಆದಷ್ಟು ಬೇಗ ಸರಕಾರ ಈ ಬಗ್ಗೆ ನಿರ್ಧರಿಸಲಿ’ ಎಂದರು. ಸ್ಮಾರಕ ನಿರ್ಮಾಣಕ್ಕೆ ಮೈಸೂರೇ ಕಡೆ ಆಯ್ಕೆ ಎಂಬುದು ನಮ್ಮ ಕುಟುಂಬದ ನಿರ್ಧಾರ. ಇಲ್ಲಾ ಅಂದ್ರೆ ಸ್ಮಾರಕ ನಿರ್ಮಾಣ ಮಾಡುವ ಯೋಚನೆಯೇ ಬೇಡ ಎಂದು ವಿಷ್ಣುವರ್ಧನ್ ಮಗಳು ಕೀರ್ತಿ ಹೇಳಿದರು.
ಸ್ಮಾರಕಕ್ಕೆ ಜಾಗ ನೀಡಲು ಸಿದ್ಧ: ಗಣೇಶ್
ವಿಷ್ಣು ಸ್ಮಾರಕ ವಿವಾದ ಜೋರಾಗುತ್ತಿದ್ದಂತೆ ಅಭಿಮಾನ್ ಸ್ಟುಡಿಯೋದ ಮಾಲೀಕತ್ವ ಹೊಂದಿರುವ ಹಿರಿಯ ನಟ ದಿವಂಗತ ಬಾಲಕೃಷ್ಣ ಅವರ ಪುತ್ರ ಗಣೇಶ್, “ವಿಷ್ಣು ಸಮಾಧಿ ನಿರ್ಮಾಣಕ್ಕೆ 50/150 ಅಳತೆಯ ಜಾಗವನ್ನು ಉಚಿತವಾಗಿ ನೀಡಲು ಸಿದ್ಧ’ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಗಣೇಶ್, “ಇಲ್ಲಿವರೆಗೆ ಈ ಸ್ಟುಡಿಯೋ ಮಾಲೀಕತ್ವದ ವಿವಾದ ಕೋರ್ಟ್ನಲ್ಲಿತ್ತು. ಈಗ ವ್ಯಾಜ್ಯ ಬಗೆಹರಿದಿದ್ದು, ಸಂಪೂರ್ಣ ಮಾಲೀಕತ್ವ ನನಗೆ ಬಂದಿದೆ. ಹಾಗಾಗಿ, ಸ್ಮಾರಕ ನಿರ್ಮಾಣಕ್ಕೆ ಬೇಕಾದ ಜಾಗವನ್ನು ಉಚಿತವಾಗಿ ನೀಡಲಿದ್ದೇನೆ. ಆದರೆ, ಸರ್ಕಾರ ನಮಗೆ ಸಹಕಾರ ನೀಡಬೇಕು’ ಎಂದಿದ್ದಾರೆ.
ಉಚಿತವಾಗಿ ಜಾಗ ನೀಡಲು
ಮುಂದಾದ ಅಭಿಮಾನಿ
ವಿಷ್ಣು ಸ್ಮಾರಕ ನಿರ್ಮಾಣದ ವಿವಾದವನ್ನು ಕಂಡು ಬೇಸತ್ತ ಅಭಿಮಾನಿಯೊಬ್ಬರು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಇರುವ ತನ್ನ ಜಮೀನಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿದ್ದಾರೆ. ವಿಷ್ಣು ಅಭಿಮಾನಿಯಾಗಿರುವ ಕೆ.ಸಿ.ಪಿ.ರಾಜಣ್ಣ ಅವರು ಈ ನಿರ್ಧಾರ ಕೈಗೊಂಡಿದ್ದು, ಸರ್ಕಾರ ಹಾಗೂ ವಿಷ್ಣು ಕುಟುಂಬ ಒಪ್ಪಿದರೆ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಬೀಳುವಷ್ಟು ಜಾಗ ನೀಡಲು ಸಿದ್ಧ ಎಂದಿದ್ದಾರೆ. ಈ ನಡುವೆಯೇ ವಿಷ್ಣುವರ್ಧನ್ ಅಭಿಮಾನಿಗಳು ಸ್ಮಾರಕಕ್ಕೆ ಬೇಕಾದ ಜಮೀನನ್ನು ತಾವೇ ಹಣ ಹೊಂದಿಸಿ ಖರೀದಿಸಲು ಸಿದ್ಧ ಎಂದು ಘೋಷಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.