ಜಾತಿ ವ್ಯವಸ್ಥೆಗೆ ರಾಜಕೀಯ ಪಕ್ಷಗಳೇ ಕಾರಣ
Team Udayavani, Nov 30, 2018, 11:42 AM IST
ಮಹದೇವಪುರ: ರಾಜಕೀಯ ಪಕ್ಷಗಳು ಜಾತಿ ವ್ಯವಸ್ಥೆಗೆ ಪುಷ್ಟಿ ನೀಡುತ್ತಿರುವ ಕಾರಣ ಸಮಾಜದಲ್ಲಿ ಇಂದಿಗೂ ಜಾತಿ ಪಿಡುಗು ಜೀವಂತವಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೂರೆಸ್ವಾಮಿ ಬೇಸರ ವ್ಯಕ್ತಪಡಿಸಿದರು. ಕ್ಷೇತ್ರದ ಹೂಡಿಯಲ್ಲಿ ಭಾರತೀಯರ ಸೇವಾ ಸಮಿತಿ ಹಮ್ಮಿಕೊಂಡಿದ್ದ 62ನೇ ಕನ್ನಡ ರಾಜ್ಯೋತ್ಸವ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮ ಉದ್ಗಾಟಿಸಿ ಅವರು ಮಾತನಾಡಿದರು.
ಮಠಗಳಿಗೆ ಜಾತಿ ಆಧಾರದಲ್ಲಿ ಹಣ ನೀಡುವುದನ್ನು ಬಿಟ್ಟು, ಬಡತನದಿಂದ ಬಳಲುತ್ತಿರುವ ಜನರಿಗೆ ಸರ್ಕಾರ ಅಸರೆಯಾಗಬೇಕು. ಜನ ಸೇವೆ ಮಾಡುವ ನಿಜವಾದ ಜನ ಪ್ರತಿನಿಧಿಗಳು ಯಾರೂ ಇಲ್ಲ. ಇದ್ದರೂ ಆಯಾ ಪಕ್ಷಗಳ ಕೈಗೊಂಬೆಗಳಾಗಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ದೇಶಕ್ಕೆ ಕೂಡುಗೆ ನೀಡಿದ ಮಹಾನ್ ವ್ಯಕ್ತಿಗಳನ್ನು ಆಯಾ ಜಾತಿಗೆ ಸೀಮಿತಗೊಳಿಸಿರುವುದು ಅವರ ಅಸ್ತಿತ್ವ, ಆಶಯಕ್ಕೆ ದಕ್ಕೆ ತಂದಿದೆ. ದೇಶಕ್ಕೆ ಸಂವಿಧಾನ ನೀಡಿದ್ದಲ್ಲದೆ, ಜಾತಿ ಪಿಡುಗನ್ನು ತೊಲಗಿಸಲು ಶ್ರಮಿಸಿದ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಸಮುದಾಯಕ್ಕೆ ಸಮೀತಗೊಳಿಸಿ ಬಿಂಬಿಸುತ್ತಿರುವುದು ಬೇಸರದ ಸಂಗತಿ ಎಂದರು.
ಬಿಎಸ್ಎಸ್ ರಾಜ್ಯ ಸಮಿತಿಯ ಸದಸ್ಯರು ವೀರಗಾಸೆ, ಡೊಳ್ಳು ಕುಣಿತ, ತಮಟೆ ವಾದ್ಯಗಳೊಂದಿಗೆ ಭುವನೇಶ್ವರಿ ದೇವಿ, ಮತ್ತು ಡಾ.ಅಂಬೇಡ್ಕರ್ ಪ್ರತಿಮೆಯ ಮೆರವಣಿಗೆ ಮಾಡಿದರು.ಹೂಡಿ ಆಟೋ ಚಾಲಕರು ಮೆರವಣಿಗೆಗೆ ಸಾಥ್ ನೀಡಿದರು.
ಬೆಳಗಾವಿಯ ಗುರುದೇವ ಬ್ರಹ್ಮಾನಂದ ಅಶ್ರಮದ ಸದ್ಗುರು ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ, ಬಿಎಸ್ಎಸ್ ರಾಜ್ಯ ಸಮಿತಿ ಅದ್ಯಕ್ಷ ಎಚ್.ಎಂ.ರಾಮಚಂದ್ರ, ನಲ್ಲೂರಹಳ್ಳಿ ನಾಗಾನಂದ ಸ್ವಾಮಿ, ನಟ ರುತ್ವಿಕ್, ಚಂದ್ರಶೇಖರ್ ನಾಯ್ಡು, ಸಿ.ನಾರಾಯಣಸ್ವಾಮಿ, ಅಲ್ತಾಫ್, ನಾಗರಾಜ್, ಆಂಜಿನಪ್ಪ ಯಾದವ್, ಮಂಜುಳಾ ಅಕ್ಕಿ, ಶೋಭಾ, ಸ್ವಾತಿ, ಕಿರಣ್ ಕುಮಾರ್ ರೆಡ್ಡಿ, ಹರಿಕೃಷ್ಣ ಯಾದವ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧ: ಡಿಸಿಎಂ ಶಿವಕುಮಾರ್
Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್
Fraud: ವಾಟ್ಸ್ಆ್ಯಪ್ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!
Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ
Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ
MUST WATCH
ಹೊಸ ಸೇರ್ಪಡೆ
Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ
Rain: ಎಲ್ಲೋ ಅಲರ್ಟ್; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.