ಪೊಲೀಸರ ಮೇಲೆರಗಿದ ಸುಲಿಗೆಕೋರನಿಗೆ ಗುಂಡೇಟು


Team Udayavani, Nov 30, 2018, 11:42 AM IST

polisara.jpg

ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ಮುಂಜಾನೆ ಒಂದೂವರೆ ಗಂಟೆ ಅವಧಿಯಲ್ಲಿ ಆರು ಮಂದಿ ವಾಹನ ಸವಾರರನ್ನು ಸುಲಿಗೆ ಮಾಡಿದ್ದ ಆರೋಪಿಗೆ ಚಿಕ್ಕಜಾಲ ಪೊಲೀಸರು ಗುಂಡೇಟು ನೀಡುವ ಮೂಲಕ ಪಾಠ ಕಲಿಸಿದ್ದಾರೆ.

ಪೊಲೀಸರಿಂದ ಗುಂಡೇಟು ತಿಂದಿರುವ ಆರ್‌.ಟಿ.ನಗರ ನಿವಾಸಿ ಮೊಹಮದ್‌ ಅಶ್ರಫ್ಖಾನ್‌ ಎಂಬಾತನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಜತೆ ಸರಣಿ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಗುರುವಾರ ನಸುಕಿನಲ್ಲಿ ತನ್ನ ಸ್ನೇಹಿತರ ಜತೆ ಬೈಕ್‌ಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಗೆ ಬಂದ ಆರೋಪಿ ಮೊಹಮದ್‌ ಅಶ್ರಫ್, ಸುಲಿಗೆಗಾಗಿ ಹೊಂಚುಹಾಕಿ ಕುಳಿತಿದ್ದ. ಮುಂಜಾನೆ 4 ಗಂಟೆ ಸುಮಾರಿಗೆ ದೇವನಹಳ್ಳಿ ನಿವಾಸಿ ನಾಗರಾಜ್‌ ಎಂಬುವವರು ತರಕಾರಿ ತರಲು ಟಾಟಾ ಏಸ್‌ ವಾಹನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು.

ಈ ವೇಳೆ ಕನ್ನಮಂಗಲ ಗೇಟ್‌ ಸಮೀಪ ನಾಗರಾಜ್‌ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಕು ತೋರಿಸಿ 12 ಸಾವಿರ ರೂ. ನಗದು ಕಿತ್ತುಕೊಂಡಿದ್ದಾರೆ. ಬಳಿಕ ಮೊಬೈಲ್‌ ಕಿತ್ತುಕೊಳ್ಳಲು ಯತ್ನಿಸಿದಾಗ ಅವರಿಂದ ತಪ್ಪಿಸಿಕೊಂಡು ಓಡಿದ ನಾಗರಾಜ್‌, ಅಲ್ಲಿದ್ದ ಪೊದೆಗಳಲ್ಲಿ ಅವಿತುಕೊಂಡು ತನ್ನ ಮಾವನಿಗೆ ದೂರವಾಣಿ ಕರೆ ಮಾಡಿದ್ದಾರೆ. ಮಾವ ಕಂಟ್ರೋಲ್‌ ರೂಮ್‌ಗೆ ಮಾಹಿತಿ ನೀಡಿದ್ದಾರೆ.

ಈ ಮಾಹಿತಿ ಆಧರಿಸಿ ಏರ್‌ಪೋರ್ಟ್‌ ಠಾಣೆ ಹೊಯ್ಸಳ ಸಿಬ್ಬಂದಿ ದುಷ್ಕರ್ಮಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಬೆಳವಣಿಗೆಗಳ ಮಧ್ಯೆಯೇ ಅಶ್ರಪ್‌ ಹಾಗೂ ಆತನ ಸಹಚರರು ಅದೇ ಹೆದ್ದಾರಿಯಲ್ಲಿ ಕಾರು ಚಾಲಕ ಸೆರಿ ಐವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಅವರಿಂದ ಮೊಬೈಲ್‌ ಫೋನ್‌, ಹಣ, 2 ಬೈಕ್‌ ಕಳವು ಮಾಡಿದ್ದಾರೆ. 

ಈ ಮಾಹಿತಿ ಆಧರಿಸಿದ ಚಿಕ್ಕಜಾಲ ಠಾಣೆ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಹೆದ್ದಾರಿಯಲ್ಲಿ ನಾಕಾಬಂಧಿ ಅಳವಡಿಸಿದ್ದರು. ಬೆಳಗ್ಗೆ 8 ಗಂಟೆ ಸುಮಾರಿಗೆ ಭಾರತಿ ನಗರದ ವಿಐಟಿ ಕಾಲೇಜಿನ ಮುಂಭಾಗ ಬೈಕ್‌ನಲ್ಲಿ ಬಂದ ಆರೋಪಿ ಅಶ್ರಫ್ಖಾನ್‌ ಹಾಗೂ ಆತನ ಸಹಚರರನ್ನು ಚಿಕ್ಕಚಾಲ ಪಿಎಸ್‌ಐ ಪ್ರವೀಣ್‌ ಕುಮಾರ್‌ ನೇತೃತ್ವದ ತಂಡ ತಡೆದಿದೆ.

ಪೊಲೀಸರನ್ನು ಕಂಡ ಕೂಡಲೇ ಬೈಕ್‌ ತಿರುಗಿಸಿಕೊಂಡು ಪರಾರಿಯಾಗಲು ಯತ್ನಿಸಿದ ಅಶ್ರಫ್ನನ್ನು ಹಿಡಿಯಲು ಹೋದ ಪೇದೆ ಲೋಕೇಶ್‌ ಮೇಲೆ ಆತ ಲಾಂಗ್‌ನಿಂದ ಹಲ್ಲೆ ನಡೆಸಿದ್ದು, ಪೇದೆ ಕೈಗೆ ಗಾಯವಾಗಿದೆ. ಈ ವೇಳೆ ಶರಣಾಗುವಂತೆ ಸೂಚಿಸಿದ ಪಿಎಸ್‌ಐ ಪ್ರವೀಣ್‌ಕುಮಾರ್‌, ಗಾಳಿಯಲ್ಲಿ ಗುಂಡು ಹಾರಿಸಿದರೂ ಶರಣಾಗದ ಆರೋಪಿ, ಪಿಎಸ್‌ಐ ಮೇಲೇ ಹಲ್ಲೆಗೆ ಮುಂದಾಗಿದ್ದಾನೆ.

ಈ ವೇಳೆ ಪ್ರಾಣರಕ್ಷಣೆಗಾಗಿ, ಪಿಎಸ್‌ಐ, ಅಶ್ರಫ್ ಎಡಗಾಲಿನ ಪಾದಕ್ಕೆ ಗುಂಡು ಹೊಡೆದು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಆರೋಪಿ ಅಶ್ರಫ್ಖಾನ್‌ ಹಾಗೂ ಆತನ ಸ್ನೇಹಿತರು ನಡೆಸಿದ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿಕ್ಕಚಾಲ ಠಾಣೆಯಲ್ಲಿ 3 ಹಾಗೂ ಏರ್‌ಪೋರ್ಟ್‌ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಎಂದು ಅಧಿಕಾರಿ ಹೇಳಿದರು. ಆರೋಪಿ ಮೊಹಮದ್‌ ಅಶ್ರಫ್ ಚಾಳಿಬಿದ್ದ ಸುಲಿಗೆಕೋರನೇ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಆತನ ಸಹಚರರ ಬಂಧನದ ಬಳಿಕ ಮತ್ತಷ್ಟು ಮಾಹಿತಿ ಹೊರಬೀಳಲಿದೆ ಎಂದು ಅಧಿಕಾರಿ ತಿಳಿಸಿದರು.

ಈ ವರ್ಷದ 23ನೇ ಶೂಟೌಟ್‌: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಚಾಳಿಬಿದ್ದ ಆರೋಪಿಗಳಿಗೆ ನಗರ ಪೊಲೀಸರು ಗುಂಡೇಟಿನ ರುಚಿ ತೋರಿಸಿ ಜೈಲಿನ ಹಾದಿ ಹಿಡಿಸುತ್ತಿದ್ದಾರೆ. ಇದೇ ವರ್ಷ ಎಂಟು ಪೊಲೀಸ್‌ ವಿಭಾಗಗಳಿಂದ 23 ಶೂಟೌಟ್‌ ಪ್ರಕರಣಗಳು ನಡೆದಿದ್ದು, ಕುಖ್ಯಾತ ರೌಡಿಶೀಟರ್‌ ಸೈಕಲ್‌ ರವಿ, ನಟೋರಿಯಸ್‌ ಸರಚೋರ ಅಚ್ಯುತ್‌ಕುಮಾರ್‌, ಬವೇರಿಯಾ ಗ್ಯಾಂಗ್‌ನ ರಾಮ್‌ಸಿಂಗ್‌, ಸಿರಪುರ್‌ ಶ್ರೀನಿವಾಸ್‌ ಸೇರಿ 20ಕ್ಕೂ ಹೆಚ್ಚು ರೌಡಿಗಳು ಗುಂಡೇಟು ತಿಂದಿದ್ದಾರೆ.

ಟಾಪ್ ನ್ಯೂಸ್

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Sathish-Kumpala

Hubballi: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ ವಾಪಸ್‌: ದ. ಕನ್ನಡ ಜಿಲ್ಲಾ ಬಿಜೆಪಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌

Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌

Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!

Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.