![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Dec 2, 2018, 6:00 AM IST
ನವದೆಹಲಿ: ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ, ಮುಸ್ಲಿಂ ಧರ್ಮಕ್ಕೆ ಸೇರಿದ ತನ್ನ ಆಪ್ತ ಸ್ನೇಹಿತೆಯೊಬ್ಬರಿಗೆ ತನ್ನ ಕಿಡ್ನಿಯನ್ನೇ ದಾನ ಮಾಡಲು ಸಿಖ್ ಧರ್ಮದ ಯುವತಿಯೊಬ್ಬಳು ಮುಂದೆ ಬಂದಿದ್ದು, ಇದಕ್ಕೆ ತನ್ನ ಕುಟುಂಬ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಆಕೆಯೀಗ ನ್ಯಾಯಾಲಯದ ಮೊರೆ ಹೋಗಿದ್ದಾಳೆ.
ಜಮ್ಮುವಿನ ಸಮ್ರಿನ್ ಅಕ್ತರ್(22) ಹಾಗೂ ಉಧಮ್ಪುರದ ಮನೊತ್ ಸಿಂಗ್ ಕೊಹ್ಲಿ(23) ಎಂಬಿಬ್ಬರು ಕಳೆದ ನಾಲ್ಕು ವರ್ಷಗಳಿಂದ ಸ್ನೇಹಿತೆಯರು. ಇತ್ತೀಚೆಗೆ, ಕಿಡ್ನಿ ವೈಫಲ್ಯದಿಂದ ಜಮ್ಮುವಿನ ಸಮ್ರಿನ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಈ ವಿಚಾರವನ್ನು ಬೇರೆಯವರಿಂದ ತಿಳಿದು ಆಸ್ಪತ್ರೆಗೆ ಬಂದ ಮನೊತ್, ಸಮ್ರಿನ್ಗೆ ತನ್ನ ಕಿಡ್ನಿ ನೀಡಲು ಮುಂದೆ ಬಂದಿದ್ದಾರೆ. ಇದಕ್ಕೆ ತಮ್ಮ ಸಮ ರ್ಥನೆ ಯನ್ನೂ ನೀಡಿರುವ ಅವರು, “”ನನ್ನ ಕೆಲವು ಕಷ್ಟದ ಸನ್ನಿವೇಶದಲ್ಲಿ ಅಪಾರ ನೆರವು ನೀಡಿದ್ದ ಸಮ್ರಿನ್ಗೆ ತಾನು ಈ ಮಾನವೀಯ ರೀತಿಯಲ್ಲಿ ಋಣ ತೀರಿಸುತ್ತಿದ್ದೇನೆ” ಎಂದಿದ್ದಾರೆ.
ಆದರೆ, ಇದನ್ನು ಮನೊತ್ ಮನೆಯವರೇ ವಿರೋಧಿಸಿರುವುದರಿಂದ ವೈದ್ಯರು ಶಸ್ತ್ರಚಿಕಿತ್ಸೆಗೆ ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ, ಮನೊತ್ ನ್ಯಾಯಾಲಯದ ಮೊರೆ ಹೋಗಿದ್ದು, “ಸ್ವ ಇಚ್ಛೆಯಿಂದಲೇ ಮೂತ್ರಪಿಂಡ ದಾನಕ್ಕೆ ಮುಂದಾಗಿದ್ದು, ವೈದ್ಯರು ಹಿಂದೇಟು ಹಾಕುತ್ತಿರುವುದರಿಂದ ಶಸ್ತ್ರಚಿಕಿತ್ಸೆ ವಿಳಂಬವಾಗುತ್ತಿದೆ. ಇದನ್ನು ತಪ್ಪಿಸಿ ಸಮ್ರಿನ್ಳನ್ನು ಉಳಿಸಲು ಸಹಾಯ ಮಾಡಬೇಕು’ ಎಂದು ಮನವಿ ಸಲ್ಲಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.