
ಬಾಗಲಕೋಟೆ ಎಸ್ಪಿ ನಿವಾಸದ ಎದುರೇ ಪೇದೆ ಆತ್ಮಹತ್ಯೆ
Team Udayavani, Dec 2, 2018, 6:10 AM IST

ಬಾಗಲಕೋಟೆ: ನವನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿವಾಸದ ಎದುರೇ ಪೊಲೀಸ್ ಪೇದೆಯೊಬ್ಬ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ ಗ್ರಾಮದ ಮಂಜುನಾಥ ಹರಿಜನ (28) ಎಂದು ಗುರುತಿಸಲಾಗಿದೆ.
2012ನೇ ಬ್ಯಾಚ್ನ ಡಿಎಆರ್ ಪೊಲೀಸ್ ಪೇದೆ ಆಗಿರುವ ಮಂಜುನಾಥ, ಮೊದಲು ದಾವಣಗೆರೆಯಲ್ಲಿ ಸೇವೆ ಸಲ್ಲಿಸಿ, ಒಂದೂವರೆ ವರ್ಷದ ಹಿಂದೆ ಬಾಗಲಕೋಟೆಗೆ ವರ್ಗವಾಗಿ ಬಂದಿದ್ದರು. ಎಸ್ಪಿ ಸಿ.ಬಿ.ರಿಷ್ಯಂತ ಅವರ ಸರ್ಕಾರಿ ನಿವಾಸಕ್ಕೆ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ ರಾತ್ರಿ ಎಂದಿನಂತೆ ಸೇವೆಗೆ ಬಂದಿದ್ದು, ಶನಿವಾರ ಬೆಳಗ್ಗೆ ಸುಮಾರು 3 ಗಂಟೆಯ ಹೊತ್ತಿಗೆ ತನಗೆ ಇಲಾಖೆ ನೀಡಿದ್ದ 303 ರೈಫಲ್ನಿಂದಲೇ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ಒಂದು ಗುಂಡು ಗಾಳಿಯಲ್ಲಿ ಹಾರಿಸಿದ್ದು, 2 ಮತ್ತು 3ನೇ ಗುಂಡು ಮಿಸ್ ಆಗಿವೆ ಎನ್ನಲಾಗಿದೆ. 4ನೇ ಗುಂಡು ಕುತ್ತಿಗೆಗೆ ಹಾರಿಸಿಕೊಂಡು ಹೋಗಿದೆ. ಗುಂಡು ಸಿಡಿದ ರಭಸಕ್ಕೆ ಕುತ್ತಿಗೆಯಿಂದ ತಲೆಯ ಹಿಂಭಾಗದವರೆಗೆ ಸೀಳಿಕೊಂಡು ಹೊರ ನುಗ್ಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಬೆಲಾಸ್ಟಿಕ್ ನುರಿತ ತಜ್ಞ ಕಿರಣ ನೇತೃತ್ವದ ತಂಡ, ಬೆಳಗಾವಿಯ ವಿಧಿ ವಿಜ್ಞಾನಿಗಳ ವಿಶೇಷ ತಂಡ ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ಕುರಿತು ತನಿಖೆ ಮುಂದುವರಿದಿದೆ.
ಸಾವಿಗೆ ಚಿಕ್ಕಪ್ಪಂದಿರೇ ಕಾರಣ:
ಈ ಮಧ್ಯೆ, ಶವ ಪರೀಕ್ಷೆ ವೇಳೆ ಪೇದೆಯ ಜೇಬಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಬರೆದ ಡೆತ್ನೋಟ್ ಪತ್ತೆಯಾಗಿದ್ದು, ಚಿಕ್ಕಪ್ಪಂದಿರು ಜೀವ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಅದರಲ್ಲಿ ತಿಳಿಸಿದ್ದಾರೆ. ಪೊಲೀಸ್ ಇಲಾಖೆ, ಸಿಬ್ಬಂದಿ ವರ್ಗ ಎಲ್ಲ ರೀತಿಯಿಂದಲೂ ನನಗೆ ಸಹಕಾರ ನೀಡಿದ್ದಾರೆ. ನನ್ನ ಕುಟುಂಬ, ನನ್ನನ್ನು ಚೆನ್ನಾಗಿ ಬೆಳೆಸಿದ್ದರು. ಸಾಕಿ ಸಲುಹಿದ ತಾಯಿ ಮತ್ತು ಅಜ್ಜಿಗೆ ಕ್ಷಮೆ ಕೋರುತ್ತೇನೆ. ಮುಖ್ಯವಾಗಿ ನನ್ನನ್ನು ಶನಿಯಾಗಿ ಕಾಡಿದ್ದು ಚಿಕ್ಕಪ್ಪಂದಿರಾದ ಹನಮಪ್ಪ ಮತ್ತು ಮರಿಯಪ್ಪ ಮಾದರ. ನನ್ನ ತಂದೆಯ ಆಸ್ತಿಯನ್ನು ತಾವೇ ವ್ಯಾಮೋಹಿಸುವ ಉದ್ದೇಶದಿಂದ ನನಗೆ ಜೀವ ಬೆದರಿಕೆ ಹಾಕಿದ್ದರು. ಆದ್ದರಿಂದ ನಾನು ಆತ್ಮಹತ್ಯೆಗೆ ಶರಣಾಗಿದ್ದೇನೆ. ನನಗೆ ಶನಿಯಾಗಿ ಕಾಡಿದ್ದು ಇವರೇ. ನನ್ನ ಸಾವಿಗೆ ಇವರಿಬ್ಬರೇ ಕಾರಣ ಎಂದು ಬರೆದಿದ್ದಾರೆ.
ಪ್ರಕರಣದ ತನಿಖೆಗೆ ಅತ್ಯುತ್ತಮ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ. ಬೆಳಗಾವಿಯ ಫಾರೆನ್ಸಿಕ್ ತಂತ್ರಜ್ಞರ ತಂಡ, ಶ್ವಾನ ದಳ, ಬಾಂಬ್ ಪತ್ತೆ ತಂಡ ಕೂಡ ಬಂದಿವೆ.
– ಸಿ.ಬಿ. ರಿಷ್ಯಂತ, ಎಸ್ಪಿ, ಬಾಗಲಕೋಟೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.