ಮಾನ್ವಿತಾಗೆ ಮಾನ್ಯತೆ


Team Udayavani, Dec 16, 2018, 6:00 AM IST

46.jpg

ಟಗರು ಚಿತ್ರದ ನಂತರ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡ ಹುಡುಗಿ ಮಾನ್ವಿತಾ ಕಾಮತ್‌, ಮುಂಬರುವ ಹಲವು ಸ್ಟಾರ್‌ ನಟರ ಚಿತ್ರಗಳಿಗೆ ನಾಯಕಿಯಾಗುತ್ತಾರೆ, ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗುತ್ತಾರೆ ಎಂದು ಸಿನಿ ಪ್ರಿಯರು ಭಾವಿಸಿದ್ದರು. ಇನ್ನು ಮಾನ್ವಿತಾ ಕನ್ನಡದಲ್ಲಿ ಹಲವು ಚಿತ್ರಗಳ ಆಫ‌ರ್ ಬರುತ್ತಿದ್ದು, ಇದರ ಜೊತೆಗೆ ಕೂಡ ತೆಲುಗಿನ ರಾಮ್‌ಗೊಪಾಲ್‌ ವರ್ಮ(ಆರ್‌ಜಿವಿ) ಚಿತ್ರದಲ್ಲಿ ಅಭಿನಯಿಸುವ ಅವಕಾಶ ಬಂದಿರುವುದಾಗಿ ಘೋಷಿಸಿಕೊಂಡಿದ್ದರು. ಆದರೆ, ನಂತರ ಅದೇನಾಯಿತೋ ಏನೋ, ಮಾನ್ವಿತಾ ಅಭಿನಯದ ಯಾವ ಚಿತ್ರಗಳೂ ಸೆಟ್ಟೇರಲೇ ಇಲ್ಲ. ಸುಮಾರು ಒಂದೂವರೆ ವರ್ಷಗಳ ಹಿಂದೆ ಮಾನ್ವಿತಾ ಅಭಿನಯಿಸಿದ್ದ ತಾರಕಾಸುರ ಚಿತ್ರ ಕಳೆದ ತಿಂಗಳು ತೆರೆಕಂಡಿದ್ದರೂ ಆ ಚಿತ್ರದಿಂದ ಮಾನ್ವಿತಾಗೆ ಹೆಚ್ಚೇನು ಲಾಭವಾಗಲಿಲ್ಲ. ಇನ್ನು ಆರ್‌ಜಿವಿ ಚಿತ್ರ ಯಾವಾಗ ಶುರುವಾಗುತ್ತದೆ ಎನ್ನುವುದಕ್ಕೂ ಮಾನ್ವಿತಾ ಬಳಿಯೂ ಉತ್ತರವಿಲ್ಲ.  ಇವೆಲ್ಲದರ ನಡುವೆ ಮಾನ್ವಿತಾ ನಾಯಕಿಯಾಗಿರುವ ಮತ್ತೂಂದು ಚಿತ್ರದ ಬಗ್ಗೆ ಸುದ್ದಿ ಹೊರ ಬಿದ್ದಿದೆ. ನಟ ರಾಮ್‌ಕುಮಾರ್‌ ಪುತ್ರ ಧೀರನ್‌ ರಾಮ್‌ಕುಮಾರ್‌ ಅಭಿನಯದ ದಾರಿ ತಪ್ಪಿದ ಮಗ  ಚಿತ್ರದಲ್ಲಿ ಮಾನ್ವಿತಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎಂಬುದು ಸದ್ಯದ ಸುದ್ದಿ. ಇನ್ನು ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದ್ದು, ಎಲ್ಲ ಅಂದು ಕೊಂಡಂತೆ ನಡೆದರೆ ಮುಂದಿನ ಜನವರಿ ಎರಡನೇ ವಾರ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ. 

ಈಗಾಗಲೇ ಮಾನ್ವಿತಾ ಮರಾಠಿ ಸಿನಿಮಾವೊಂದರಲ್ಲೂ ನಟಿಸುತ್ತಿದ್ದಾರೆ. ಆ ಚಿತ್ರಕ್ಕಾಗಿ ಮಾನ್ವಿತಾ ಮರಾಠಿ ಕೂಡ ಕಲಿಯುತ್ತಿದ್ದಾರಂತೆ. ಇನ್ನು ತಮ್ಮ ಕೆರಿಯರ್‌ ಬಗ್ಗೆ ಮಾತನಾಡುವ ಮಾನ್ವಿತಾ, “ನಾನು ಯಾವ ಚಿತ್ರಕ್ಕೂ ಕಾಯುವುದಿಲ್ಲ. ಯಾರೋ ಬಂದು ಅವಕಾಶ ಕೊಡ್ತಾರೆ ಅಂತಾನೂ ನಂಬುವುದಿಲ್ಲ. ಯಾರೋ ಬಂದುಬಿಟ್ಟು, ಸಿನಿಮಾ ಮಾಡಿ, ಭವಿಷ್ಯ ರೂಪಿಸುತ್ತಾರೆ, ನನ್ನ ಉದ್ಧಾರ ಮಾಡಿಬಿಡುತ್ತಾರೆ ಅಂತ ನಂಬಿಲ್ಲ. ನನ್ನನ್ನು ನಾನು ನಂಬಿದ್ದೇನೆ. ನನ್ನ ಕೆಲಸ, ಶ್ರದ್ಧೆ ನಂಬಿದ್ದೇನೆ. ಸಿನಿಮಾ ಜರ್ನಿ ಸಖತ್‌ ಖುಷಿ ಕೊಟ್ಟಿದೆ. ನನ್ನ ಕೆಲಸದಲ್ಲಿ ಹಾನೆಸ್ಟ್‌ ಇಲ್ಲ ಅಂತ ನನಗೇ ಅನ್ನಿಸಿಬಿಟ್ಟರೆ, ನಾನು ಕೆಲಸ ನಿಲ್ಲಿಸಿಬಿಡ್ತೀನಿ. ಆದರೆ, ನಾನು ಯಾವುದೇ ಕೆಲಸ ಮಾಡಿದರೂ, ಅಲ್ಲಿ ಶ್ರದ್ಧೆ ಮತ್ತು ಶ್ರಮ ಇದ್ದೇ ಇರುತ್ತದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

2

Short Stories: ಸಣ್ಕತೆ ಸಾಮ್ರಾಜ್ಯ: ಪುಟ್‌ ಪುಟ್‌ ಕತೆ, ಪುಟಾಣಿ ಕತೆ…

ಹಸಿರು ವನಸಿರಿ ಸಂಡೂರಿನ ಸಿರಿ

ಹಸಿರು ವನಸಿರಿ ಸಂಡೂರಿನ ಸಿರಿ

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.