![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 16, 2018, 11:16 AM IST
ಸೇಡಂ: ಶ್ರೀಸಿಮೆಂಟ್ ಕಾರ್ಖಾನೆಯಲ್ಲಿ ಶುಕ್ರವಾರ ನಡೆದ ಬೆಲ್ಟ್ ದುರಂತಕ್ಕೆ ಕಾರಣರಾದ ಕಾರ್ಖಾನೆ ಅಧಿಕಾರಿಗಳನ್ನು ಬಂಧಿಸಬೇಕು ಮತ್ತು ಗಾಯಗೊಂಡವರ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರವೇ (ನಾರಾಯಣಗೌಡ) ಕಾರ್ಯಕರ್ತರು ಕಾರ್ಖಾನೆ ಗೇಟ್ ಬಂದ್ ಮಾಡಿ ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಮಹೇಶ ಕಾಶಿ ಕಾರ್ಖಾನೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದ್ದು, ಪ್ರತಿ ಬಾರಿಯೂ ಕಾರ್ಮಿಕರೇ ಬಲಿಯಾಗುತ್ತಿದ್ದಾರೆ. ಅವರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕಾರ್ಮಿಕರು ಮೃತಪಟ್ಟರೂ ಕಿಂಚಿತ್ತೂ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿಕೊಳ್ಳದೇ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆಪಾದಿಸಿದರು.
ಕೂಡಲೇ ಘಟನೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಎಂಟು ದಿನಗಳ ಒಳಗಾಗಿ ಕಾರ್ಖಾನೆ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು. ನಂತರ ಸ್ಥಳದಲ್ಲೇ ಇದ್ದ ಸಿಪಿಐ ಶಂಕರಗೌಡ ಪಾಟೀಲ, ಪಿಎಸ್ಐ ಸುಶೀಲಕುಮಾರ ಹಾಗೂ ಕಾರ್ಖಾನೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ತಾಲೂಕು ಅಧ್ಯಕ್ಷ ಅಂಬರೀಶ ಊಡಗಿ, ವಿಜಯಕುಮಾರ ಕುಲಕರ್ಣಿ, ಇಲಿಯಾಸ್ ಪಟೇಲ, ಅನೀಲಕುಮಾರ ಹಳಿಮನಿ, ಸತೀಶ ದುದನಿ, ಶಿವಪ್ಪ ಜುಲ್ಪಿ, ಜನಾರ್ಧನರೆಡ್ಡಿ ತುಳೇರ್, ರವಿ ರಾಠೊಡ, ಆನಂದಕುಮಾರ, ಮಲ್ಲಿಕಾರ್ಜುನ, ಶಿವಾಜಿ, ಹಣಮಂತ, ಸಂತೋಷ ನಾಮವಾರ, ರಾಹುಲ ಪಾಟೀಲ ದುದನಿ, ಸಂತೋಷ ಕುರಕುಂಟಾ, ಮಹ್ಮದ ತೈಬರ್, ಮಹಾಂತೇಶ ಊಡಗಿ, ರಾಘವೇಂದ್ರ ಕುರಕುಂಟಾ, ಕೈಲಾಸಲಿಂಗ ಪಾಟೀಲ, ಶರಣು ಚಂದಾಪುರ ಇನ್ನಿತರರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.