ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ: ಶನಿ ಮಹಾಪೂಜೆ
Team Udayavani, Dec 16, 2018, 4:43 PM IST
ಮುಂಬಯಿ: ನಗರದ ಫೋರ್ಟ್ ಪ್ರದೇಶದ ಮೋದಿ ಸ್ಟ್ರೀಟ್ನಲ್ಲಿ ಕಳೆದ ಸುಮಾರು ಏಳುವರೆ ದಶಕಗಳಿಂದ ಸೇವಾ ನಿರತವಾಗಿರುವ ಸ್ವರ್ಗೀಯ ಕೃಷ್ಣಪ್ಪ ಕೆ. ಕೋಟ್ಯಾನ್ ಮತ್ತು ನಾರಾಯಣ ಬಿ. ಸಾಲ್ಯಾನ್ ಅವರ ಮಾರ್ಗದರ್ಶನದಲ್ಲಿ ರೂಪುಗೊಂಡ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 74 ನೇ ವಾರ್ಷಿಕ ಶನಿ ಮಹಾಪೂಜೆಯನ್ನು ಧಾರ್ಮಿಕ ಕೈಂಕರ್ಯಗಳೊಂದಿಗೆ ವಿಧಿವತ್ತಾಗಿ ನೆರವೇರಿಸಿ ಸೇವಾ ಸಮಿತಿಯ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಶನಿವಾರ ಫೋರ್ಟ್ದ ಮಿಂಟ್ ರಸ್ತೆಯ ಖಾಂಜಿ ಕೇತ್ಸಿà ಸಭಾಗೃಹದಲ್ಲಿ ಬೆಳಗ್ಗೆ ಹರೀಶ್ ಶಾಂತಿ ಹೆಜ್ಮಾಡಿ ಅವರ ಪೌರೋಹಿತ್ಯದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ನೆರವೇರಿಸಿ ಶ್ರೀ ಶನಿದೇವರ ಕಲಶ ಪ್ರತಿಷ್ಠಾಪನೆಗೈದು ತೀರ್ಥ ಪ್ರಸಾದ ವಿತರಿಸಿ ಅನುಗ್ರಹಿಸಿದರು. ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭಂಡಾರಿ ಮತ್ತು ರಕ್ಷಿತಾ ವಿಶ್ವನಾಥ್ ಹಾಗೂ ಕೋಶಾಧಿಕಾರಿ ಶರತ್ ಜಿ. ಪೂಜಾರಿ ಮತ್ತು ವಿನಿತಾ ಎಸ್. ಪೂಜಾರಿ ದಂಪತಿಗಳು ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.
ಶ್ರೀ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಮತ್ತು ವಿದ್ಯಾದಾಯಿನಿ ಭಜನಾ ಮಂಡಳಿ ಫೋರ್ಟ್ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಶನಿಗ್ರಂಥ ಪಾರಾಯಣ ಹಾಗೂ ಅನ್ನಸಂತರ್ಪಣೆ, ರಾತ್ರಿ ಶ್ರೀ ಶನಿದೇವರಿಗೆ ಮಹಾ ಮಂಗಳಾರತಿ, ತೀರ್ಥಪ್ರಸಾದ ಮತ್ತು ಅನ್ನಸಂತರ್ಪಣೆ ನೆರವೇರಿತು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ ಅಧ್ಯಕ್ಷ ಜೆ. ಜೆ. ಕೋಟ್ಯಾನ್, ಉಪಾಧ್ಯಕ್ಷರುಗಳಾದ ರವಿ ಎಲ್.ಬಂಗೇರ ಮತ್ತು ಜನಾರ್ಧನ ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್ ಸುವರ್ಣ, ಜೊತೆ ಕೋಶಾಧಿಕಾರಿಗಳಾದ ಪ್ರಶಾಂತ ಕರ್ಕೇರ ಮತ್ತು ಅಕ್ಷಯ್ ಸುವರ್ಣ, ಹಿರಿಯ ಸದಸ್ಯರು, ಸಲಹೆಗಾರರಾದ ಬಿ. ಬಿ. ಕೋಟ್ಯಾನ್, ಸದಾನಂದ ಸುವರ್ಣ, ಮೋಹನ್ ಡಿ. ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಮಂದಿರದ ಆರ್ಚಕರು, ಭುವಾಜಿಗಳು ಸೇರಿದಂತೆ ವಿಶೇಷ ಆಮಂತ್ರಿತ ಸದಸ್ಯರು, ದಾನಿಗಳು, ಭಕ್ತರು ಪಾಲ್ಗೊಂಡು ಶ್ರೀ ಶನಿದೇವರ ಕೃಪೆಗೆ ಪಾತ್ರರಾದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.