KGF;ನಿನ್ನೆ ತಡೆ ಕೋರಿ, ಇವತ್ತು ಯಾಕೆ ಅರ್ಜಿ ವಾಪಸ್ ಪಡೆಯುತ್ತಿದ್ದೀರಿ
Team Udayavani, Dec 21, 2018, 4:41 PM IST
ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿರುವ ಕೆಜಿಎಫ್ ಸಿನಿಮಾ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಏತನ್ಮಧ್ಯೆ ಕೆಜಿಎಫ್ ಚಿತ್ರ ಬಿಡುಗಡೆ ಮಾಡದಂತೆ ತಡೆಯಾಜ್ಞೆ ಕೋರಿ ನಗರದ 10ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ದೂರುದಾರ ವೆಂಕಟೇಶ್ ಶುಕ್ರವಾರ ವಾಪಸ್ ಪಡೆದಿದ್ದಾರೆ.
ಕೆಜಿಎಫ್ ಸಿನಿಮಾ ಕೋಲಾರದ ಕುಖ್ಯಾತ ರೌಡಿ ತಂಗಂ ಜೀವನ್ನಾಧರಿಸಿದ್ದು, ಇದು ತನ್ನ ಕಥೆ ಎಂಬುದಾಗಿ ಆರೋಪಿಸಿ ಕೆಜಿಎಫ್ ಚಿತ್ರ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಕೋರಿ ವೆಂಕಟೇಶ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ 10ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ಪಂಚಾಕ್ಷರಿ ಅವರು ಮಧ್ಯಂತರ ತಡೆ ನೀಡಿ, ಜನವರಿ 7ಕ್ಕೆ ವಿಚಾರಣೆ ಮುಂದೂಡಿದ್ದರು.
ನಿನ್ನೆ ಅರ್ಜಿ ಸಲ್ಲಿಸಿ, ಇಂದು ಯಾಕೆ ವಾಪಸ್ ಪಡೆಯುತ್ತಿದ್ದೀರಿ?
ಕೆಜಿಎಫ್ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಿರುವ ಅರ್ಜಿಯನ್ನು ವಾಪಸ್ ಪಡೆಯುತ್ತಿರುವುದಾಗಿ ದೂರುದಾರ ವೆಂಕಟೇಶ್ ಅವರ ಪರ ವಕೀಲರು ನ್ಯಾಯಾಧೀಶರಲ್ಲಿ ಶುಕ್ರವಾರ 10ನೇ ಸೆಷನ್ಸ್ ಕೋರ್ಟ್ ನಲ್ಲಿ ಮನವಿ ಮಾಡಿಕೊಂಡಾಗ, ನಿನ್ನೆ ತಡೆಯಾಜ್ಞೆ ಕೋರಿ ಇವತ್ತು ಯಾಕೆ ವಾಪಸ್ ಪಡೆಯುತ್ತಿದ್ದೀರಿ? ಚಿತ್ರ ತಂಡದ ಜೊತೆ ಮಾತನಾಡಿದ್ದೀರಾ ಎಂದು ಪ್ರಶ್ನಿಸಿದ್ದರು. ಅದಕ್ಕೆ ಅವರು ಹೌದು ಮಾತುಕತೆ ನಡೆಸಿದ್ದೇನೆ, ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದಾಗ..ನ್ಯಾಯಾಧೀಶರು ಸಮ್ಮತಿ ಸೂಚಿಸಿರುವುದಾಗಿ ವರದಿ ತಿಳಿಸಿದೆ.
ಏತನ್ಮಧ್ಯೆ ಯಶ್ ಅಭಿನಯದ ಕೆಜಿಎಫ್ ಸಿನಿಮಾವನ್ನು ಶುಕ್ರವಾರ ಬೆಳ್ಳಂಬೆಳಗ್ಗೆ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸಿದ್ದ ಯಶ್ ಅಭಿಮಾನಿಗಳು, ದೂರುದಾರ ವೆಂಕಟೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದರು. ಕೆಜಿಎಫ್ ಸಿನಿಮಾಕ್ಕೂ ಕೋಲಾರದ ರೌಡಿ ತಂಗಂ ಕಥೆಗೂ ಯಾವುದೇ ಸಂಬಂಧವಿಲ್ಲ. ಅನಾವಶ್ಯಕ ಗೊಂದಲ ಹುಟ್ಟಿಸುತ್ತಿರುವುದೇಕೆ? ಬೇಕಿದ್ದರೆ ಸಿನಿಮಾ ನೋಡಲಿ, ಗೊತ್ತಾಗುತ್ತೆ ಎಂದು ತಿರುಗೇಟು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.