![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 22, 2018, 6:00 AM IST
ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್) ಡಿ.21 ರಿಂದ ಜ.9 ರವರೆಗಿನ 20 ದಿನಗಳು ರಾಜ್ಯಾದ್ಯಂತ “ನಂದಿನಿ ಸಿಹಿ ಉತ್ಸವ”ವನ್ನು ಹಮ್ಮಿಕೊಂಡಿದೆ. ಸಿಹಿ ತಿನಿಸುಗಳ ವಿನಿಮಯ ಮಾಡಿಕೊಳ್ಳುವ ಮೂಲಕ ಕ್ರಿಸ್ಮಸ್ ಹಾಗೂ ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಕೆಎಂಎಫ್ ಈ ಉತ್ಸವವನ್ನು ಆಯೋಜಿಸಿದೆ.
ಶುಕ್ರವಾರ ಬೆಂಗಳೂರಿನ ಕೋರಮಂಗಲ ಬಿಡಿಎ ಕಾಂಪ್ಲೆಕ್ಸ್ನಲ್ಲಿರುವ ನಂದಿನಿ ಪಾರ್ಲರ್ನಲ್ಲಿ ಕೆಎಂಎಫ್ ಮಾರುಕಟ್ಟೆ ನಿರ್ದೇಶಕ ಎಂ.ಟಿ. ಕುಲಕರ್ಣಿ ಅವರು ನಂದಿನಿ ಸಿಹಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು. ಈ ಉತ್ಸವದಲ್ಲಿ ಮೈಸೂರು ಪಾಕ್, ನಂದಿನಿ ಪೇಡ, ಧಾರವಾಡ ಪೇಡ, ಕೇಸರ್ ಪೇಡ, ಏಲಕ್ಕಿ ಪೇಡ, ಬಾದಾಮ್ ಬರ್ಫಿ, ಕ್ಯಾಶು ಬರ್ಫಿ, ಡ್ರೈಪ್ರೂರ್ಟ್ಸ್ ಬರ್ಫಿ, ಕೊಕೋನಟ್ ಬರ್ಫಿ, ಚಾಕೋಲೆಟ್ ಬರ್ಫಿ, ಕುಂದಾ, ಜಾಮೂನ್, ರಸಗುಲ್ಲಾ ಇತ್ಯಾದಿ 20ಕ್ಕೂ ಹೆಚ್ಚು ಹಾಲಿನ ಸಿಹಿ ಉತ್ಪನ್ನಗಳು
ದೊರೆಯಲಿವೆ. ಬಹಳಷ್ಟು ಗ್ರಾಹಕರಲ್ಲಿ ನಂದಿನಿ ಎಂದರೆ ಕೇವಲ ಹಾಲು, ಮೊಸರು ಮಾತ್ರ ಎಂಬ ಭಾವನೆಯಿದೆ. ಅದನ್ನು ಈ ಉತ್ಸವ ಆಯೋಜಿಸುವ ಮೂಲಕ ಹೋಗಲಾಡಿಸುವ ಉದ್ದೇಶ ಹೊಂದಿದ್ದೇವೆ. ಅಲ್ಲದೆ, ಈ ಅವಧಿಯಲ್ಲಿ ಎಲ್ಲ ಸಿಹಿ ಉತ್ಪನ್ನಗಳ ಗರಿಷ್ಠ ಮಾರಾಟದ ಮೇಲೆ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು. ಈ ರಿಯಾಯಿತಿ ರಾಜ್ಯದ ಎಲ್ಲ ನಂದಿನಿ ಪಾರ್ಲರ್ಗಳು,
ಮಳಿಗೆಗಳು, ಕ್ಷೀರ ಕೇಂದ್ರಗಳು, ಸೂಪರ್ ಮಾರ್ಕೆಟ್ ಗಳಿಗೂ ಅನ್ವಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಆಡಳಿತ ವಿಭಾಗದ ನಿರ್ದೇಶಕ ಸುರೇಶ್ಕುಮಾರ್, ವಿತ್ತ ವಿಭಾಗದ ನಿರ್ದೇಶಕ ರಮೇಶ್ ಕನ್ನೂರು, ಮಾರುಕಟ್ಟೆ ಹೆಚ್ಚುವರಿ ನಿರ್ದೇಶಕ ರಘುನಂದನ್ ಹಾಗೂ ಕೆಎಂಎಫ್ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.