ಆಪರೇಷನ್‌ ಐಸಿಸ್‌ 10 ಉಗ್ರರ ಬಂಧನ


Team Udayavani, Dec 27, 2018, 6:00 AM IST

ban27121801medn.jpg

ನವದೆಹಲಿ: ಹೊಸ ವರ್ಷದ ವೇಳೆ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ವಿವಿಧೆಡೆ ಭಾರೀ ಸ್ಫೋಟ ನಡೆಸಿ ಮಾರಣಹೋಮಕ್ಕೆ ಸಂಚು ಹೂಡಿದ್ದ ಶಂಕಿತ 10 ಮರಿ ಐಸಿಸ್‌ ಉಗ್ರರನ್ನು ಎನ್‌ಐಎ ಬಂಧಿಸಿದೆ. 

ಉತ್ತರ ಭಾರತದಾದ್ಯಂತ 17 ಕಡೆಗಳಲ್ಲಿ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ ಇವರೆಲ್ಲರನ್ನೂ ವಿಚಾರಣೆಗೊಳಪಡಿಸಿ ಸೆರೆ ಹಿಡಿದಿದೆ. ಇವರೆಲ್ಲರೂ, ಐಸಿಸ್‌ ಉಗ್ರರಿಂದ ಸ್ಫೂರ್ತಿಗೊಂಡು ನಾಲ್ಕೈದು ತಿಂಗಳು ಹಿಂದಷ್ಟೇ ರೂಪುಗೊಂಡಿದ್ದ ಹರ್ಕತ್‌ ಉಲ್‌ ಹರ್ಬ್ ಎ ಇಸ್ಲಾಂ ಎಂಬ ಉಗ್ರ ಸಂಘಟನೆಗೆ ಸೇರಿದವರು ಎಂದು ಎನ್‌ಐಎ ಹೇಳಿದೆ. ಜತೆಗೆ ಐಸಿಸ್‌ ಜತೆಗಿನ ನಂಟಿನ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.

ಟಾರ್ಗೆಟ್‌ ರಾಜಧಾನಿ
ಉತ್ತರ ಭಾರತ ಅದರಲ್ಲೂ ವಿಶೇಷವಾಗಿ ರಾಷ್ಟ್ರ ರಾಜಧಾನಿ ದೆಹಲಿಯೇ ಈ ಸಂಘಟನೆಯ ಟಾರ್ಗೆಟ್‌. ಸ್ಥಳೀಯ ಆರ್‌ಎಸ್‌ಎಸ್‌ ಕಚೇರಿ, ದೆಹಲಿ ಪೊಲೀಸ್‌ ಪ್ರಧಾನ ಕಚೇರಿ, ರಾಜಕಾರಣಿಗಳು, ಗಣ್ಯವ್ಯಕ್ತಿಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ಮಾಡುತ್ತಿದ್ದರು. ಜನನಿಬಿಡ ಪ್ರದೇಶಗಳಲ್ಲಿ ಬಾಂಬ್‌ ಸ್ಫೋಟಗಳನ್ನು ನಡೆಸಿ ಅನೇಕ ಸಾವು-ನೋವು ಉಂಟುಮಾಡುವುದೂ ಇವರ ಗುರಿಯಾಗಿತ್ತು. 

ಯಾರಿವರು?
ಬಂಧಿತರೆಲ್ಲರೂ 20ರಿಂದ 30 ವರ್ಷದೊಳಗಿನ ಯುವಕರಾಗಿದ್ದು, ಎಲ್ಲರೂ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಇವರೆಲ್ಲರನ್ನೂ ಮೂಲಭೂತವಾದಿಗಳನ್ನಾಗಿ ಪರಿವರ್ತಿಸಲಾಗಿದೆ. ಒಟ್ಟು 16 ಜನರನ್ನು ವಿಚಾರಣೆಗಾಗಿ ವಶಪಡಿಸಿಕೊಳ್ಳಲಾಗಿದ್ದು, ಇವರಲ್ಲಿ 10 ಜನರನ್ನು ಬಂಧಿಸಲಾಗಿದೆ.

ಸ್ಫೋಟಕ, ಶಸ್ತ್ರಾಸ್ತ್ರ, ನಗದು ಜಪ್ತಿ
ಬಂಧಿತರಿಂದ ಭಾರೀ ಸ್ಫೋಟಕ ಸಾಮಗ್ರಿಗಳು, 12 ಪಿಸ್ತೂಲುಗಳು, ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು, ದೇಶೀಯವಾಗಿ ನಿರ್ಮಿಸಿರುವ ರಾಕೆಟ್‌ ಲಾಂಚರ್‌ಗಳು, 25 ಕೆಜಿ ಪೊಟ್ಯಾಶಿಯಂ ನೈಟ್ರೇಟ್‌, ಪೊಟ್ಯಾಶಿಯಂ ಕ್ಲೋರೇಟ್‌, ಸಲ#ರ್‌ ಪೇಸ್ಟ್‌ ಮತ್ತು ಸಕ್ಕರೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ರಾಸಾಯನಿಕಗಳನ್ನು ಬಾಂಬ್‌ಗಳ ತಯಾರಿಗಾಗಿ ಬಳಕೆ ಮಾಡಲಾಗುತ್ತಿತ್ತು. ಜತೆಗೆ, 7.5 ಲಕ್ಷ ರೂ. ನಗದು, ಅಂದಾಜು 100 ಮೊಬೈಲ್‌ ಫೋನ್‌ಗಳು, 120 ಅಲಾರ್ಮ್ ಕ್ಲಾಕ್‌ಗಳು, 135 ಸಿಮ್‌ ಕಾರ್ಡ್‌ಗಳು,  ಲ್ಯಾಪ್‌ ಟಾಪ್‌ ಗಳು ಹಾಗೂ ಮೆಮೊರಿ ಕಾರ್ಡುಗಳನ್ನು ಜಪ್ತಿ ಮಾಡಲಾಗಿದೆ. 

ಯಾರಿದರ ರೂವಾರಿ?
 ಈ ಸಂಘಟನೆಯ ನೇತೃತ್ವವನ್ನು ಮುಫ್ತಿ ಸೊಹೈಲ್‌ ಎಂಬಾತ ವಹಿಸಿಕೊಂಡಿದ್ದು, ಈತ ದೆಹಲಿಯಲ್ಲಿದ್ದುಕೊಂಡು ಈ ಸಂಘಟನೆಯನ್ನು ನಿರ್ವಹಿಸುತ್ತಿದ್ದ. ಈತ ಉತ್ತರ ಪ್ರದೇಶದ ಅನ್ರೋಹಾದಲ್ಲಿರುವ ಮಸೀದಿಯಲ್ಲಿ ಧರ್ಮಬೋಧಕನೂ ಆಗಿದ್ದಾನೆ. ಈತ ವಿದೇಶದಲ್ಲಿರುವ ವಿಧ್ವಂಸಕಾರಿ ವ್ಯಕ್ತಿಯೊಬ್ಬನೊಂದಿಗೆ ನೇರ ಸಂಪರ್ಕದಲ್ಲಿದ್ದ. ಆತನನ್ನೂ ಸದ್ಯದಲ್ಲೇ ಪತ್ತೆ ಹಚ್ಚಲಾಗುತ್ತದೆ ಎಂದು ಮಿತ್ತಲ್‌ ತಿಳಿಸಿದ್ದಾರೆ. 

ದಾಳಿ ನಡೆದಿದ್ದು ಹೇಗೆ? 
ನಾಲ್ಕೈದು ತಿಂಗಳುಗಳ ಹಿಂದಷ್ಟೇ ರೂಪುಗೊಂಡಿದ್ದ ಈ ಸಂಘಟನೆಯ ಚಲನವಲನಗಳು ಅನುಮಾನಾಸ್ಪದವಾಗಿದ್ದರಿಂದ ಇದರ ಮೇಲೆ ಎನ್‌ಐಎ ನಿಗಾ ವಹಿಸಿತ್ತು. ಈ ಸಂಘಟನೆಯು ವಿಧ್ವಂಸಕ ಕೃತ್ಯಗಳಿಗೆ ಸಜ್ಜಾಗಿದೆ ಎಂಬ ಸುಳಿವು ಸಿಗುತ್ತಲೇ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳದ ಸಹಾಯದಿಂದ ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ 17ಕ್ಕೂ ಹೆಚ್ಚು ಕಡೆ ಇವರಿಗಾಗಿ ಹುಡುಕಾಟ ನಡೆಸಲಾಗಿತ್ತು. ದೆಹಲಿಯ ಸೀಲಾಂಪುರ್‌, ಉತ್ತರ ಪ್ರದೇಶದ ಅನ್ರೋರಾ, ಹಾಪುರ್‌, ಮೀರತ್‌, ಲಕ್ನೋಗಳಲ್ಲಿ ಶೋಧ ನಡೆಸಲಾಗಿತ್ತು. ಇದರ ಫ‌ಲವಾಗಿ, ಸಂಘಟನೆಯ 10 ಸದಸ್ಯರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಪಶ್ಚಿಮ ಭಾಗದ ಅನ್ರೋಹಾದಲ್ಲೇ ಸಂಘಟನೆಯ ಐವರನ್ನು ಸೆರೆ ಹಿಡಿಯಲಾಗಿದೆ ಎಂದು ಎನ್‌ಐಎ ಮುಖ್ಯಸ್ಥರು ವಿವರಿಸಿದ್ದಾರೆ. 

ದೆಹಲಿಯಲ್ಲಿ ಐವರ ಬಂಧನ
ಕಾರ್ಯಾಚರಣೆಗೆ ಸಂಬಂಧಿಸಿದಂತೆ, ದೆಹಲಿಯ ಈಶಾನ್ಯ ಭಾಗದಲ್ಲಿ ನೆಲೆಸಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿ ಪೊಲೀಸರ ವಿಶೇಷ ದಳದ ನೆರವಿನಿಂದ ನಡೆಸಲಾದ ದಾಳಿಯಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೂ ಸೇರಿದ್ದಾನೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.