ಗಡಿ ನುಸುಳಲು ಯತ್ನಿಸಿದ್ದ ಪಾಕ್ ಸೈನಿಕರನ್ನು ಹೊಡೆದುರುಳಿಸಿದ ಸೇನೆ
Team Udayavani, Dec 31, 2018, 8:06 AM IST
ನವದೆಹಲಿ:ಭಾರತದ ಗಡಿಯೊಳಗೆ ಕಳ್ಳಾಟಿಕೆಯಿಂದ ನುಸುಳಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದ ಶಂಕಿತ ಪಾಕಿಸ್ತಾನ ಗಡಿ ಕಾವಲು ಪಡೆಯ(ಬಿಎಟಿ) ಸಂಚನ್ನು ಭಾರತೀಯ ಸೇನೆ ಯಶಸ್ವಿಯಾಗಿ ವಿಫಲಗೊಳಿಸಿರುವ ಘಟನೆ ಕಾಶ್ಮೀರದ ನೌಗಾಮ್ ಸೆಕ್ಟರ್ ನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪಾಕ್ ಸೈನಿಕರನ್ನು ಹೊಡೆದುರುಳಿಸಲಾಗಿದೆ ಎಂದು ಸೋಮವಾರ ಭಾರತೀಯ ಸೇನೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಜಮ್ಮು-ಕಾಶ್ಮೀರದ ನೌಗಾಮ್ ಸೆಕ್ಟರ್ ಸಮೀಪದ ಕಡಿದಾದ ಕಾಡು ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನ ಬಾರ್ಡರ್ ಆ್ಯಕ್ಷನ್ ಟೀಮ್ ನ ಇಬ್ಬರು ಒಳ ನುಸುಳಿ ಬಂದಿದ್ದರು. ನೌಗಾಮ್ ಸೆಕ್ಟರ್ ಮೇಲೆ ದಾಳಿ ಉದ್ದೇಶದಿಂದ ಅವರು ಅತಿಕ್ರಮ ಪ್ರವೇಶ ಮಾಡಿರುವುದಾಗಿ ವರದಿ ತಿಳಿಸಿದೆ.
ಇಬ್ಬರು ಸೈನಿಕರು ಪಾಕಿಸ್ತಾನಿ ಎಂದು ಶಂಕಿಸಲಾಗಿದೆ. ಈ ನುಸುಳುಕೋರರು ಪಾಕಿಸ್ತಾನಿ ಸೈನಿಕರ ಸಮವಸ್ತ್ರ ಧರಿಸಿದ್ದರು. ಅವರಿಂದ ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳನ್ನು ಗಮನಿಸಿದರೆ, ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸುವುದು ಅವರ ಉದ್ದೇಶವಾಗಿತ್ತು ಎಂಬುದು ಸ್ಪಷ್ಟ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.