ಜ.12ರಿಂದ 7ದಿನ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ


Team Udayavani, Jan 6, 2019, 6:01 AM IST

m1-12rinda.jpg

ಮೈಸೂರು: ಪ್ರತಿ ವರ್ಷದಂತೆ ಈ ಬಾರಿಯು ರಂಗಾಯಣವು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಹಮ್ಮಿಕೊಂಡಿದೆ. ಜ.12ರಿಂದ 18ರವರೆಗೆ 18ನೇ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ.

ಈ ಬಾರಿ ಲಿಂಗ ಸಮಾನತೆಯ ಆಶಯದೊಂದಿಗೆ ನಾಟಕೋತ್ಸವ ನಡೆಸುತ್ತಿದ್ದು, ಲಿಂಗ ಸಮಾನತೆಗೆ ದನಿಗೂಡಿಸುವ ನಾಟಕಗಳು, ಸಿನಿಮಾ ಪ್ರದರ್ಶನ, ವಿಚಾರ ಸಂಕಿರಣ, ಜನಪದ ನೃತ್ಯ ಮತ್ತು ಚಿತ್ರ ಪ್ರದರ್ಶನ, ಜಾನಪದ ಹಾಡುಗಳು ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

ಉತ್ಸವದಲ್ಲಿ ನಾನಾ ರಾಜ್ಯದ ವಿವಿಧ 12 ಭಾಷೆಗಳ ನಾಟಕ, ರಾಜ್ಯದ ಬೇರೆ ಜಿಲ್ಲೆಗಳಿಂದ ಆರು ಕನ್ನಡ ನಾಟಕಗಳು, ಸಾಕ್ಷ್ಯಾಚಿತ್ರ ಒಳಗಂಡಂತೆ ಪ್ರತಿದಿನ ಮೂರು ಸಿನಿಮಾಗಳಂತೆ ಒಟ್ಟು 24 ಸಿನಿಮಾಗಳ ಪ್ರದರ್ಶನ, ಬೇರೆ ಪ್ರದೇಶದ ಸಾಧಕರು, ರಂಗಕರ್ಮಿಗಳು ಲಿಂಗ ಸಮಾನತೆಯ ವಿಷಯ ಮಂಡಿಸಲಿದ್ದಾರೆ.

70 ಮಳಿಗೆ: ಏಳು ದಿನಗಳ ನಾಟಕೋತ್ಸವದಲ್ಲಿ 70 ಮಳಿಗೆಗಳಲ್ಲಿ ಪುಸ್ತಕ ಪ್ರದರ್ಶನ-ಮಾರಾಟ, ಕರಕುಶಲ ಹಾಗೂ ಗುಡಿ ಕೈಗಾರಿಕೆಗಳ ವಸ್ತು ಪ್ರದರ್ಶನ, ಮಾರಾಟ ನಡೆಯಲಿದೆ. ಜತೆಗೆ ದೇಶಿ ಉಡುಪು, ದೇಶಿ ಆಹಾರ ಪದ್ಧತಿ ಪ್ರದರ್ಶನ ಮತ್ತು ಆಹಾರ ಮೇಳವು ಇರಲಿದೆ.

ರಂಗಾಯಣದ ಭೂಮಿಗೀತ ಆವರಣದಲ್ಲಿ ಆಯೋಜಿಸಿದ್ದ ಬಹುರೂಪಿ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ನಾಟಕೋತ್ಸವದ ಬಗ್ಗೆ ಮಾಹಿತಿ ನೀಡಿದ ರಂಗಾಯಣ ನಿರ್ದೇಶಕಿ ಭಾಗಿರಥೀ ಬಾಯಿ ಕದಂ, ಜ.12ರಂದು ಸಂಜೆ 6ಕ್ಕೆ ರಂಗಾಯಣದ ವನರಂಗದಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನ ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಎನ್‌ಎಸ್‌ಡಿಯ ಮಾಜಿ ನಿರ್ದೇಶಕಿ ಕೀರ್ತಿ ಜೈನ್‌ ಭಾಗವಹಿಸಲಿದ್ದಾರೆ. ಅದೇ ದಿನ ಬೆಳಗ್ಗೆ 10ಕ್ಕೆ ನಟ, ರಂಗಕರ್ಮಿ ರಮೇಶ್‌ ಭಟ್‌ ಬಹುರೂಪಿ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಪ್ರತಿದಿನ ಕಿರು ರಂಗಮಂದಿರದಲ್ಲಿ ಸಂಜೆ 6ಕ್ಕೆ, ಭೂಮಿಗೀತದಲ್ಲಿ ಸಂಜೆ 6.30ಕ್ಕೆ,

ವನರಂಗದಲ್ಲಿ ಸಂಜೆ 7ಕ್ಕೆ ಕಲಾಮಂದಿರದಲ್ಲಿ ರಾತ್ರಿ 8ಕ್ಕೆ ವಿವಿಧ ಭಾಷೆಯ ನಾಟಕಗಳು ಪ್ರದರ್ಶನಗೊಳ್ಳಲಿದೆ. ಕಿಂದರಿಜೋಗಿ ಆವರಣದಲ್ಲಿ ಪ್ರತಿದಿನ ಸಂಜೆ 5.30ಕ್ಕೆ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದಿಂದ ವಿವಿಧ ರಾಜ್ಯಗಳ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಲಿಂಗ ಸಮಾನತೆ ಥೀಮ್‌: ಬಹುರೂಪಿಯ ಸಿನಿಮಾ ಸಂಚಾಲಕ ಮ್ಯಾನ್‌ ಮನು ಮಾತನಾಡಿ, ಪ್ರಪಂಚದಲ್ಲಿ ಯಾವ್ಯಾವ ರೀತಿಯಲ್ಲಿ ಲಿಂಗ ಸಮಾನತೆ ಇದೆ. ಅದರ ವಿರುದ್ಧ ನಡೆದ ಹೋರಾಟಗಳು, ಸಲಿಂಗ ಕಾಮ ಇವೆಲ್ಲವನ್ನು ಒಳಗೊಂಡ ಸಿನಿಮಾಗಳನ್ನು ಬಹುರೂಪಿ ಚಲನಚಿತ್ರೋತ್ಸವಕ್ಕೆ ಆಯ್ಕೆ ಮಾಡಿದ್ದೇವೆ. ಇದರಲ್ಲಿ ಸಾಕ್ಷ್ಯಚಿತ್ರವು ಒಳಗೊಂಡಿವೆ ಎಂದರು.

ಹೆಚ್ಚುವರಿ  ಜಿಲ್ಲಾಧಿಕಾರಿ ಎನ್‌.ಯೋಗೀಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಪ್ಪ ಇತರರಿದ್ದರು.

30 ರೂ. ಟಿಕೆಟ್‌ ದರ ಹೆಚ್ಚಳ: ರಂಗಾಯಣದ ಜಂಟಿ ನಿರ್ದೇಶಕ ವಿ.ಎಸ್‌.ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ,  ಈ ಬಾರಿಯ ಬಹುರೂಪಿಯ ಎಲ್ಲಾ ನಾಟಕಗಳಿಗೂ 30 ರೂ. ಏರಿಕೆ ಮಾಡಿದ್ದು, ಟಿಕೆಟ್‌ ದರ 80 ರೂ.ಗಳಿಗೆ ನಿಗದಿ ಪಡಿಸಲಾಗಿದೆ. ಬಹುರೂಪಿ ನಂತರ ರಂಗಾಯಣದ ವಾರಾಂತ್ಯ ನಾಟಕಗಳಿಗೆ ಇದೇ ದರವನ್ನು ನಿಗದಿಪಡಿಸಲು ರಂಗಾಯಣದ ಕಲಾವಿದರೊಂದಿಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

17, 18ಕ್ಕೆ ಲಿಂಗ ಸಮಾನತೆ ವಿಚಾರ ಸಂಕಿರಣ: ರಂಗಾಯಣದಲ್ಲಿ ಹಮ್ಮಿಕೊಂಡಿರುವ ಬಹುರೂಪಿ ನಾಟಕೋತ್ಸವ ಅಂಗವಾಗಿ ಜ.17,18 ರಂದು ಲಿಂಗ ಸಮಾನತೆ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಜ.17 ರಂದು ಬೆಳಗ್ಗೆ 10.30ಕ್ಕೆ ಭೂಮಿಗೀತದಲ್ಲಿ ಕತೆಗಾರ್ತಿ ವೈದೇಹಿ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ.

ವಕೀಲ ಸಿ.ಎಸ್‌.ದ್ವಾರಕಾನಾಥ್‌ ಲಿಂಗ ಸಮಾನತೆ ಮತ್ತು ಸಂವಿಧಾನದ ಕುರಿತು ಆಶಯ ನೂಡಿಗಳನ್ನಾಡಲಿದ್ದಾರೆ. ಸಮಾಜಿಕ ಕಾರ್ಯಕರ್ತೆ ಎ.ರೇವತಿ ಲಿಂಗ (ಎ) ಸಮಾನತೆ ಕುರಿತು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಸಮಾಜವಾದಿ ಪ.ಮಲ್ಲೇಶ್‌ ಅಧ್ಯಕ್ಷತೆವಹಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಅನುವಾದಕಿ ಪ್ರೊ.ಎಂ.ಎಸ್‌.ಆಶಾದೇವಿ ಲಿಂಗ ರಾಜಕಾರಣ, “ಅನುಭಾವ ಪಂಥಗಳಲ್ಲಿ ಲಿಂಗ ಸಮಾಜತೆ ಕುರಿತು ಸಂಶೋಧಕ ಪ್ರೊ.ರಹಮತ್‌ ತರೀಕರೆ ವಿಷಯ ಮಂಡಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಮೈಸೂರು ಗುರುರಾಜ ತಂಡದಿದ ಜಾನಪದ ಗೀತೆ ಗಾಯನ ಇರಲಿದೆ. ಜ.18 ರಂದು ಬೆಳಗ್ಗೆ 10ಕ್ಕೆ 2ನೇ ದಿನದ ಗೋಷ್ಠಿಗಳು ನಡೆಯಲಿವೆ.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.