ವಿಜಯ ಬ್ಯಾಂಕ್‌ ವಿಲೀನಕ್ಕೆ ಕಾಂಗ್ರೆಸ್‌ ತೀವ್ರ ವಿರೋಧ


Team Udayavani, Jan 7, 2019, 5:59 AM IST

vijaya.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಬ್ಯಾಂಕ್‌ಗಳಲ್ಲೊಂದಾಗಿರುವ ವಿಜಯ ಬ್ಯಾಂಕನ್ನು ಬ್ಯಾಂಕ್‌ ಆಫ್‌ ಬರೋಡಾದ ಜತೆ ವಿಲೀನಗೊಳಿಸುವ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಜ.8ರಂದು ವಿಧಾನಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಜ.9ರಂದು ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ನೇತೃತ್ವದಲ್ಲಿ ಮಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ರವಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐವನ್‌ ಡಿ’ಸೋಜಾ, ಜಿಲ್ಲೆಯಲ್ಲಿ ಹುಟ್ಟಿ ಬೆಳೆದು, ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ ದಕ್ಷ ನಿರ್ವಹಣೆಯ ಮೂಲಕ ಅತ್ಯುತ್ತಮ ಸಾಧನೆ ಮಾಡುತ್ತಿರುವ ಜನಸ್ನೇಹಿ ಹಾಗೂ ರೈತರು, ಗ್ರಾಮೀಣ ಭಾಗದ ಜನರ ಪರವಾಗಿರುವ ವಿಜಯ ಬ್ಯಾಂಕ್‌ನ್ನು ನಷ್ಟದಲ್ಲಿ ನಡೆಯುತ್ತಿರುವ ಬ್ಯಾಂಕ್‌ ಆಫ್‌ ಬರೋಡಾದೊಂದಿಗೆ ವಿಲೀನ ಮಾಡುತ್ತಿರುವುದು ಕೇಂದ್ರ ಸರಕಾರ ಜಿಲ್ಲೆಗೆ, ಜನರಿಗೆ ಮಾಡುತ್ತಿರುವ ಅನ್ಯಾಯ. ಇದರ ವಿರುದ್ಧ ಜಿಲ್ಲೆಯ ಸಂಸದರು ಲೋಕಸಭೆಯಲ್ಲಿ ಧ್ವನಿಯೆತ್ತಿಲ್ಲ. ಬಿಜೆಪಿ ಶಾಸಕರು ಮಾತನಾಡುತ್ತಿಲ್ಲ. ಈ ಧೋರಣೆಗಳನ್ನು ಪ್ರತಿಭಟಿಸಿ ಜ.8ರಂದು ಪುರಭವನದ ಬಳಿಯ ಮಹಾತ್ಮಾ ಗಾಂಧೀಜಿ ಪ್ರತಿಮೆಯ ಬಳಿ ಉಪವಾಸ ಸತ್ಯಾಗ್ರಹ ನಡೆಸಲಿದ್ದೇನೆ ಎಂದರು.

ಉಪವಾಸ ಸತ್ಯಾಗ್ರಹ ಬೆಳಗ್ಗೆ 10ಕ್ಕೆ ಪ್ರಾರಂಭವಾಗಿ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಜಿಲ್ಲೆಯ ಕಾಂಗ್ರೆಸ್‌ ನಾಯಕರು ಭಾಗವಹಿಸುವರು. ಜ.10ರಂದು ಜಿಲ್ಲೆಯಲ್ಲಿರುವ ವಿಜಯ ಬ್ಯಾಂಕ್‌ನ ಎಲ್ಲ 79 ಶಾಖೆಗಳ ಮುಂದೆ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಯಲಿದೆ. ಜ್ಯೋತಿ ಟಾಕೀಸ್‌ ಬಳಿ ಇರುವ ವಿಜಯ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಮುಂಭಾಗದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇನೆ ಎಂದರು.

ಜ.9: ಮಂಗಳೂರು ಬಂದ್‌
ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಪ್ರತ್ಯೇಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮಿಥುನ್‌ ರೈ, ಲಾಭದಲ್ಲಿ ಮುನ್ನಡೆಯುತ್ತಿರುವ ವಿಜಯ ಬ್ಯಾಂಕನ್ನು 2017-18ನೇ ಸಾಲಿನ ಮೊದಲ ತ್ತೈಮಾಸಿಕದಲ್ಲಿ 3,102 ಕೋ.ರೂ. ನಷ್ಟ ಅನುಭವಿಸಿರುವ ಬ್ಯಾಂಕ್‌ ಆಫ್‌ ಬರೋಡಾದೊಂದಿಗೆ ವಿಲೀನ ಮಾಡುವ ಮೋದಿ ಸರಕಾರದ ನಿರ್ಧಾರ ಜಿಲ್ಲೆಗೆ ಮಾಡಿರುವ ಅನ್ಯಾಯ. ಇದು ದೇಶದ ಆರ್ಥಿಕ ವ್ಯವಸ್ಥೆಗೆ ವಿಜಯ ಬ್ಯಾಂಕ್‌ ನೀಡಿರುವ ಕೊಡುಗೆಯನ್ನು ಅಳಿಸಿ ಹಾಕುವ ಹುನ್ನಾರ. ಇದರ ವಿರುದ್ಧ ಪಕ್ಷಭೇದ‌ ಮರೆತು ಧ್ವನಿ ಎತ್ತುವ ಮೂಲಕ ಬ್ಯಾಂಕಿನ ಅಸ್ತಿತ್ವ ಮತ್ತು ಹೆಸರನ್ನು ಉಳಿಸಲು ಹೋರಾಟ ಮಾಡ ಬೇಕಿದೆ. ಅದಕ್ಕಾಗಿ ಜ.9ರಂದು ನಗರದಲ್ಲಿ ಹರತಾಳಕ್ಕೆ ಯುವ ಕಾಂಗ್ರೆಸ್‌ ಕರೆ ನೀಡುತ್ತಿದೆ ಎಂದರು.
ಅನೇಕ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಬ್ಯಾಂಕಿನ ಎಲ್ಲ ಗ್ರಾಹಕರು, ಸಿಬಂದಿ ವರ್ಗ ಬೆಂಬಲ ನೀಡಬೇಕು. ಸಂಸದರು ಹಾಗೂ ಬಿಜೆಪಿ ಶಾಸಕರು ಇದರಲ್ಲಿ ಭಾಗವಹಿಸಬೇಕು ಯುವ ಕಾಂಗ್ರೆಸ್‌ ಆಹ್ವಾನ ನೀಡುತ್ತಿದೆ ಎಂದವರು ಹೇಳಿದರು. 

ಸಂಸದ ನಳಿನ್‌ ಈ ವಿಲಯನ ಪ್ರಕ್ರಿಯೆಯ ವಿರುದ್ಧ ಧ್ವನಿ ಎತ್ತದೆ ಮೌನ ವಹಿಸಿರುವುದರ ಮರ್ಮ ಏನು, ಲಾಭದಲ್ಲಿರುವ ವಿಜಯ ಬ್ಯಾಂಕ್‌ನ  ಹೆಸರನ್ನು ಅಳಿಸಿ ತೀವ್ರ ನಷ್ಟದಲ್ಲಿರುವ ಬ್ಯಾಂಕ್‌ ಬರೋಡಾದ ಹೆಸರನ್ನು ಉಳಿಸುವ ಉದ್ದೇಶ ಏನು ಎಂದವರು ಪ್ರಶ್ನಿಸಿದರು. ಸಂತೋಷ್‌ ಶೆಟ್ಟಿ, ವಕ್ತಾರ ಹಾಗೂ ಕಾರ್ಪೊರೇಟರ್‌ ಎ.ಸಿ. ವಿನಯರಾಜ್‌, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರವೀಣ್‌ಚಂದ್ರ ಆಳ್ವ, ಮುಖಂಡರಾದ ನಜೀರ್‌  ಬಜಾಲ್‌, ರಮಾನಾಥ ಪೂಜಾರಿ, ಸುರೇಂದ್ರ ಕಂಬಳಿ, ನೀರಜ್‌ಪಾಲ್‌, ನಾಗೇಂದ್ರ ಕುಮಾರ್‌, ಸುಹೈಲ್‌ ಕಂದಕ್‌, ಭಾಸ್ಕರ ರಾವ್‌, ಮನೋರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.