ಇಸ್ಕಾನ್‌ ಶ್ರೀಕೃಷ್ಣ ಬಲರಾಮ ರಥಯಾತ್ರೆ


Team Udayavani, Jan 7, 2019, 6:04 AM IST

m4-jayanagara.jpg

ಮೈಸೂರು: ನಗರದ ಜಯನಗರದಲ್ಲಿರುವ ಇಸ್ಕಾನ್‌ ಸಂಸ್ಥೆಯ 21ನೇ ವಾರ್ಷಿಕ ರಥಯಾತ್ರೆಯು ಅದ್ಧೂರಿಯಾಗಿ ಜರುಗಿತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಶಾಸಕ ಎಲ್‌.ನಾಗೇಂದ್ರ, ಮಾಜಿ ಶಾಸಕ ಗೋ.ಮಧು ಸೂದನ್‌, ಇಸ್ಕಾನ್‌ ಸಂಸ್ಥೆ ಅಧ್ಯಕ್ಷ ಮಧುಪಂಡಿತ ದಾಸ್‌ ರಥಯಾತ್ರೆಗೆ ಚಾಲನೆ ನೀಡಿದರು. 

ಚೆನ್ನೆನ ಇಸ್ಕಾನ್‌ ಅಧ್ಯಕ್ಷ ಸ್ತೋಕ ಕೃಷ್ಣಸ್ವಾಮಿ ಮಾತನಾಡಿ, 500 ವರ್ಷಗಳ ಹಿಂದೆ ಚೈತನ್ಯ ಮಹಾಪ್ರಭುಗಳು ಕೃಷ್ಣನ ನಾಮಸಂದೇಶ, ಕೀರ್ತನೆಯ ಉದ್ದೇಶವನ್ನು ಸಾರುವುದಕ್ಕೆ ಈ ರಥಯಾತ್ರೆಯು ಪ್ರಾರಂಭಗೊಂಡಿತು ಎಂದು ರಥಯಾತ್ರೆಯ ಉದ್ದೇಶವನ್ನು ವಿವರಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಗೋ.ಮಧುಸೂದನ್‌ ಮಾತನಾಡಿ, ಕೃಷ್ಣನ ಲೆಕ್ಕ ಎಂಬ ಮಾತನ್ನು ಸುಲಭವಾಗಿ ಉಪಯೋಗಿಸುವ ನಾವು ಕೃಷ್ಣನ ಜೀವನವನ್ನು ನೋಡಬೇಕು. ಪ್ರಜೆಗಳನ್ನು ಭರಿಸುವುದೇ ನಿಜವಾದ ಧರ್ಮ. ಮನಸ್ಸು, ಬಾಯಿ, ಕೆಲಸ ಮೂರರಲ್ಲೂ ಏಕತೆಯನ್ನು ನೋಡುವುದೇ ನಿಜವಾದ ಹಾದಿ ಎಂದು ಹೇಳಿದರು.

ನಿಜವಾದ ಜೀವನ ಧರ್ಮ ಅನುಸರಿಸಬೇಕಾದರೆ ಕೃಷ್ಣನ ಜೀವನವನ್ನು ನೋಡಿ ಅನುಸರಿಸಬೇಕು. 2019ರ ಭಾರತದ ಧರ್ಮ ಯುದ್ಧಕ್ಕಾಗಿಯೇ ಕೃಷ್ಣ ರಥದಲ್ಲಿ ಕುಳಿತಿದ್ದಾನೆ ಎಂದು ತಮ್ಮ ಭಾವನೆ ಹೊರ ಹಾಕಿದರು.

ಮಧುಪಂಡಿತ ದಾಸ್‌ ಮಾತನಾಡಿ, ಕಲಿಯುಗದಲ್ಲಿ ಕೃಷ್ಣನು ಹರೇಕೃಷ್ಣ ಮಹಾಮಂತ್ರದ ಮೂಲಕ ಅವತರಿಸಿದ್ದಾನೆ. ಈ ಮಂತ್ರವು ಚೈತನ್ಯ ಮಹಾಪ್ರಭುಗಳು ಕೊಟ್ಟ ಸುಲಭದ ಆಯುಧ ಕೃಷ್ಣ ಈ ಮಹಾಮಂತ್ರದ ಮೂಲಕ ನಮ್ಮ ಬಳಿ ಸಾರುತ್ತಾನೆ. ಈ ಸುಲಭದ ಹಾದಿಯನ್ನು ಪ್ರಪಂಚಕ್ಕೆ ಪರಿಚಯಿಸಿದ ಶ್ರೀಪ್ರಭುಪಾದರನ್ನು ಹೊಗಳಿದರು. 

ರಥಯಾತ್ರೆ ಉತ್ಸವವು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟು ದೊಡ್ಡ ಗಡಿಯಾರ, ಗಾಂಧಿವೃತ್ತ, ಸಯ್ನಾಜಿರಾವ್‌ ರಸ್ತೆ, ಚಿಕ್ಕಗಡಿಯಾರ, ದೇವರಾಜ ಅರಸು ರಸ್ತೆ, ನಾರಾಯಣಶಾಸಿ ರಸ್ತೆ, ಚಾಮರಾಜ ಜೊಡಿರಸ್ತೆ, ರಾಮಸ್ವಾಮಿ ವೃತ್ತ, ಜೆಎಲ್‌ಬಿ ರಸ್ತೆ, ಆರ್‌ಟಿಓ ವೃತ್ತ, ನ್ಯೂ ಕಾಂತರಾಜ ಅರಸು ರಸ್ತೆ, ಜಯನಗರ ಎರಡನೇ ಮುಖ್ಯರಸ್ತೆಯ ಮೂಲಕ 18ನೇ ಕ್ರಾಸ್‌ನಲ್ಲಿರುವ ಇಸ್ಕಾನ್‌ ದೇವಾಲಯವನ್ನು ತಲುಪಿತು.

ರಥಯಾತ್ರೆಯಲ್ಲಿ ಅನೇಕ ಸಾಂಸ್ಕೃತಿಕ ಆಕರ್ಷಣೆಗಳು, ಮಂಗಳವಾದ್ಯ ಸಹಿತ ಇಸ್ಕಾನ್‌ ಭಕ್ತರಿಂದ ಸಂಕೀರ್ತನೆ ನಡೆಯಿತು. ಶ್ರೀಕೃಷ್ಣಬಲರಾಮರ ವಿಗ್ರಹವನ್ನು ಕೂರಿಸಿರುವ ಅದ್ಭುತವಾದ 35 ಅಡಿ ಎತ್ತರದ ರಥ ಹಾಗೂ ಮೂವತ್ತು ಸಾವಿರಕ್ಕೂ ಹೆಚ್ಚು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಗಿತ್ತು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.