ಉತ್ತರಾಖಂಡ BJP ನಾಯಕನ 13 ಉದ್ಯಮ ಸಂಸ್ಥೆಗಳ ಮೇಲೆ ಐಟಿ ದಾಳಿ
Team Udayavani, Jan 12, 2019, 11:07 AM IST
ಡೆಹರಾಡೂನ್ : ಹಿರಿಯ ಬಿಜೆಪಿ ನಾಯಕ ಅನಿಲ್ ಗೋಯಲ್ ಮತ್ತು ಅವರ ಕುಟುಂಬದವರು ಉತ್ತರಾಖಂಡ ಮತ್ತು ಹರಿಯಾಣದಲ್ಲಿ ಹೊಂದಿರುವ ಸುಮಾರು 13 ಉದ್ಯಮ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗೋಯಲ್ ಅವರ ಕ್ವಾಲಿಟಿ ಹಾರ್ಡ್ ವೇರ್, ಉಮಂಗ್ ಸ್ಯಾರೀಸ್ ಮತ್ತು ಅಲೆಕ್ಸಿಯಾ ಪ್ಯಾನೆಲ್ಸ್ (ಡೆಹರಾಡೂನ್ನಲ್ಲಿನ ಸಂಸ್ಥೆಗಳು) ಮತ್ತು ರೂರ್ಕಿಯಲ್ಲಿನ ಕ್ವಾಂಟಮ್ ಯುನಿವರ್ಸಿಟಿ, ಹರಿಯಾಣದ ಯಮುನಾ ನಗರದಲ್ಲಿರುವ ಪಂಜಾಬ್ ಪ್ಲೆ„ ವುಡ್ ಇಂಡಸ್ಟ್ರೀಸ್ ಸೇರಿದಂತೆ ಒಟ್ಟು 13 ಉದ್ಯಮ ಸಂಸ್ಥೆಗಳು ಹಾಗೂ ಅವುಗಳ ಆಸ್ತಿಪಾಸ್ತಿಗಳ ಮೇಲೆ ಐಟಿ ದಾಳಿ ನಡೆದಿದೆ ಎಂದು ಐಟಿ ತನಿಖಾ ಆಯುಕ್ತ ಅಮರೇಂದ್ರ ಕುಮಾರ್ ತಿಳಿಸಿದ್ದಾರೆ.
ಐಟಿ ದಾಳಿಯಲ್ಲಿ ಗೋಯಲ್ ಅವರ ಉದ್ಯಮ ಸಂಸ್ಥೆಗಳು ನಡೆಸಿವೆ ಎನ್ನಲಾದ ಅನೇಕ ಹಣಕಾಸು ಅಕ್ರಮಗಳ ದಾಖಲೆ ಪತ್ರಗಳು ಪತ್ತೆಯಾಗಿದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದವರು ಹೇಳಿದ್ದಾರೆ.
ಗೋಯಲ್ ಅವರು 2016ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿಯ ಹಿರಿಯ ಉನ್ನತ ನಾಯಕರಿಗೆ ನಿಕಟರಾಗಿರುವ ಗೋಯಲ್ ಅವರು ಈಚೆಗೆ ನಡೆದಿದ್ದ ಡೆಹರಾಡೂನ್ ಮೇಯರ್ ಪದಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಹಾಗಿದ್ದರೂ ಪ್ರದೇಶ್ ಬಿಜೆಪಿ ಮಾಧ್ಯಮ ಪ್ರಭಾರಿ ದೇವೇಂದ್ರ ಭಾಸಿನ್ ಅವರು “ಗೋಯಲ್ ಅವರು ಪ್ರಕೃತ ಪಕ್ಷದಲ್ಲಿ ಯಾವುದೇ ಪದಭಾರ ಹೊಂದಿಲ್ಲ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.