ಕೊರೆವ ಚಳಿ: ಭರ್ಜರಿ ಗೇರು ಫ‌ಸಲಿನ ನಿರೀಕ್ಷೆ


Team Udayavani, Jan 15, 2019, 5:39 AM IST

15-january-5.jpg

ಬಡಗನ್ನೂರು : ಈ ಬಾರಿ ಚಳಿ ಸ್ವಲ್ಪ ಜೋರಾಗಿಯೇ ಇದೆ. ಮುಂಜಾನೆಯ ಕೊರೆವ ಚಳಿ ದೇಹವನ್ನೇ ನಡುಗಿಸುತ್ತಿದೆ. ಕಳೆದ ಎರಡು ವಾರಗಳಿಂದ ಚಳಿ ಅಧಿಕವಾಗಿದೆ. ಚಳಿ ಇದ್ದರೆ ಇಳುವರಿ ಅಧಿಕವಾಗುತ್ತದೆ. ಫ‌ಲ ವಸ್ತುಗಳ ಬೆಳೆಯೂ ಅಧಿಕವಾಗುತ್ತದೆ ಎನ್ನುವ ಆಶಾಭಾವನೆ ಕೃಷಿಕರಲ್ಲಿದೆ. ಹಾಗಾಗಿ ಈ ಬಾರಿಯ ಕೊರೆವ ಚಳಿ ಗೇರು ಸಹಿತ ಇತರ ಬೆಳೆಗಳಿಗೆ ಮಾತ್ರ ಟಾನಿಕ್‌ನಂತಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿ ಸ್ವಲ್ಪ ಹೆಚ್ಚೇ ಇದೆ. ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಗಿಡ, ಮರಗಳು ಹೂ ಬಿಟ್ಟು ಫ‌ಲ ನೀಡುವ ಮುನ್ಸೂಚನೆ ಕೊಡುತ್ತಿವೆ. ಬೆಳಗ್ಗಿನ ಜಾವ ಬೀಸುವ ಗಾಳಿ ಪರಾಗ ಕ್ರಿಯೆಗೂ ನೆರವಾಗುತ್ತದೆ. ಆದರೆ ಚಳಿಗಾಲದಲ್ಲಿ ಮೋಡದ ವಾತಾವರಣ ಮೂಡಿದ ಕೂಡಲೇ ಮಾವು, ಗೇರು ಮರಗಳಲ್ಲಿ ಅರಳಿದ ಹೂವುಗಳು ಮುರುಟಿ ಹೋಗುವ ಅಪಾಯವೂ ಇದೆ. ಇದರಿಂದ ಇಳುವರಿ ಕೂಡ ಕುಸಿಯುತ್ತದೆ. ಆದರೆ ಈ ಬಾರಿ ಇಲ್ಲಿಯವರೆಗೂ ಅಂತಹ ಸಮಸ್ಯೆ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆದ್ದರಿಂದ ಗೇರು ಕೃಷಿಕನ ಮೊಗದಲ್ಲಿ ನಗುವಿನ ಅಲೆ ಮೂಡಿದೆ.

ಮಾವು, ಹಲಸು ಅತ್ಯಧಿಕ ಇಳುವರಿ
ಚಳಿಯ ಕಾರಣಕ್ಕೆ ಈ ಬಾರಿ ಮಾವು ಮತ್ತು ಹಲಸು ಹೆಚ್ಚು ಇಳುವರಿ ಕೊಡುವ ಸಾಧ್ಯತೆ ಇದೆ. ಬೆಳಗ್ಗೆ ಚಳಿ ಇದ್ದು, ಸೂರ್ಯ ನೆತ್ತಿಗೇರುತ್ತಿದ್ದಂತೆಯೇ ತಂಪು ಗಾಳಿ ಬೀಸುವ ಪ್ರಕ್ರಿಯೆ ಇದೆ. ಇದರಿಂದ ಸಾಧಾರಣ ಎಲ್ಲ ಜಾತಿಯ ಹಣ್ಣಿನ ಮರಗಳು ಚಿಗುರಲು ಕಾರಣವಾಗುತ್ತದೆ. ಮರಗಳು ಚಿಗುರಿದರೆ ಹೂ ಬಿಡುವುದು ನಿಶ್ಚಿತ ಎನ್ನುವುದು ರೈತರ ನಂಬಿಕೆ. ಕಳೆದ ಬಾರಿ ಚಳಿ ಇಲ್ಲದ ಕಾರಣ ಫ‌ಲವಸ್ತುಗಳ ಇಳುವರಿಯೂ ಕಡಿಮೆಯಾಗಿತ್ತು. ಕಾಟು ಮಾವು, ಹಾಗೂ ವಾಣಿಜ್ಯ ಬೆಳೆಗಳಾದ ಕಾಳುಮೆಣಸು ಈ ಬಾರಿ ಹೆಚ್ಚು ಇಳುವರಿ ಕೊಡುವ ಸಾಧ್ಯತೆ ನಿಚ್ಚಳವಾಗಿದೆ.

ಗೇರು ಕೃಷಿಗೆ ಕಾಡುವ ಟೀ ಸೊಳ್ಳೆ
ಚಳಿ ಇದ್ದು ಮೋಡ ಮುಸುಕಿದ ತಕ್ಷಣ ಟೀ ಜಾತಿಯ ಸೊಳ್ಳೆಯ ಸಂತಾನೋತ್ಪತ್ತಿಗೆ ಅನುಕೂಲಕರ ಸನ್ನಿವೇಶವನ್ನು ಉಂಟುಮಾಡುತ್ತದೆ. ಇಡೀ ಗೇರು ಮರಕ್ಕೆ ವ್ಯಾಪಿಸುವ ಈ ಸೊಳ್ಳೆಯು ಹೂವಿನ ಕಾಂಡದ ರಸ ಹೀರುತ್ತದೆ. ಇದರಿಂದಾಗಿ ಇಡೀ ಹೂ ಗೊಂಚಲು ಒಣಗಿ ಹೋಗುತ್ತದೆ. ಮೋಡದ ವಾತಾವರಣದಲ್ಲಿ ತೇವಾಂಶ ಹೆಚ್ಚಿರುವುದರಿಂದ ಶಿಲೀಂದ್ರ ವ್ಯಾಪಿಸುವುದು ಸಾಧ್ಯವಾಗುತ್ತದೆ ಎಂದು ಕೃಷಿ ವಿಜ್ಞಾನಿಗಳು ಹೇಳುತ್ತಾರೆ.

ಕೀಟ ಬಾಧೆ ಕಡಿಮೆ
ಮುಂಜಾವಿನಲ್ಲಿ ಬೀಸುವ ತಂಪಾದ ಗಾಳಿ ಮತ್ತು ಹಿತವಾದ ಚಳಿ, ಹಗಲಿನಲ್ಲಿ ಬಿರು ಬಿಸಿಲು ಇವು ಗೇರು ಫ‌ಸಲಿಗೆ ಉತ್ತಮವಾದ ವಾತಾವರಣವಾಗಿದೆ. ಪರಾಗಸ್ಪರ್ಶ ಕ್ರಿಯೆಯೂ ಇಂತಹ ಹವಾಮಾನದಲ್ಲಿಯೇ ಹೆಚ್ಚಾಗಿ ನಡೆಯುತ್ತದೆ. ಸದ್ಯಕ್ಕೆ ಜಿÇ್ಲೆಯ ಹೆಚ್ಚಿನ ಕಡೆ ಇಂತಹ ವಾತಾವರಣ ಇದೆ. ಈ ವಾತಾವರಣದಿಂದ ಕೀಟ ಬಾಧೆ ಕೂಡ ಕಡಿಮೆ ಇರುತ್ತದೆ. ಆದ್ದರಿಂದ ಫ‌ಸಲು ಉತ್ತಮ ಬರಲು ಸಾಧ್ಯ ಎಂದು ಎನ್ನುತ್ತಾರೆ ಪ್ರಗತಿಪರ ಗೇರು ಕೃಷಿಕ ಸತೀಶ್‌ ರೈ ಕರ್ನೂರು ಅವರು.

ಮೋಡ ಬಂದರೆ ನಷ್ಟ!
ಚಳಿಯ ವಾತಾವರಣದ ಮಧ್ಯೆ ಮೋಡ ಕವಿದ ವಾತಾವರಣ ಕಂಡು ಬಂದಲ್ಲಿ ಅರಳಿದ ಹೂವು ಕಮರಿ ಹೋಗುತ್ತದೆ. ಇದರಿಂದ ಬಹುತೇಕ ಕಾಡು ಉತ್ಪನ್ನಗಳು, ವಾಣಿಜ್ಯ ಬೆಳೆಗಳು ಹಾನಿಗೀಡಾಗುತ್ತವೆ. ಈ ಬಾರಿ ಇದುವರೆಗೂ ಆ ರೀತಿಯ ವಾತಾವರಣ ಕಂಡುಬಂದಿಲ್ಲವಾದ್ದರಿಂದ ಬಹುತೇಕ ಹೂ ಬಿಟ್ಟ ಮರಗಳು ಸಿಂಗಾರಗೊಂಡಂತೆ ಗೋಚರಿಸುತ್ತಿದೆ.

ಈ ಬಾರಿ ಬಂಪರ್‌!
ಚಳಿಯ ವಾತಾವರಣದಿಂದ ತೋಟಗಾರಿಕಾ ಬೆಳೆಗಳು, ಕಾಡು ಹಣ್ಣು ಹಂಪಲುಗಳು ಈ ಬಾರಿ ಬಂಪರ್‌ ಬೆಳೆ ಕೊಡುವ ಸಾಧ್ಯತೆ ಇದೆ. ಚಳಿಯ ಜತೆ ತಂಪು ಗಾಳಿ ಉತ್ತಮ ವಾತಾವರಣ ಸೃಷ್ಟಿಸಿದೆ. ಪೃಕೃತಿಗೆ ಇದರಿಂದ ತುಂಬಾ ಉಪಯೋಗವಾಗಲಿದೆ. ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೇಳೆ ಬೀಸುವ ತಂಪು ಗಾಳಿ ಪೃಕೃತಿಗೆ ದೊರೆಯುವ ದೊಡ್ಡ ಮಟ್ಟದ ಸಂಪತ್ತಾಗಿದೆ. 
ನಯೀಮ್‌ ಹುಸೇನ್‌
 ಸಹಾಯಕ ಕೃಷಿ ನಿರ್ದೇಶಕರು, ಪುತ್ತೂರು

ಫ‌ಸಲಿಗೆ ಒಳ್ಳೆಯದು
ನನ್ನಲ್ಲಿ 6 ಎಕರೆಯಲ್ಲಿ ಸುಮಾರು 1,200 ಗೇರು ಗಿಡ ಇದೆ. ವರ್ಷದಲ್ಲಿ ಸರಾಸರಿ 25 ಕ್ವಿಂಟಾಲ್‌ ಗೇರು ಬೀಜ ಪಡೆಯುತ್ತೇನೆ. ಈಗಾಗಲೇ ಫ‌ಸಲು ಬರಲು ಆರಂಭವಾಗಿದೆ. ಚಳಿಯ ವಾತಾವರಣ ಗೇರು ಫ‌ಸಲಿಗೆ ಒಳ್ಳೆಯದು. ಗೇರು ತೋಟವನ್ನುಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯ. ಬರಡುಭೂಮಿಯಲ್ಲೂ ಗೇರು ಕೃಷಿ ಮಾಡಿದರೆ ಉತ್ತಮ ಲಾಭ ಪಡೆಯಬಹುದು.
– ಶಶಿಕುಮಾರ್‌ ರೈ ಕರ್ನೂರು
 ಗೇರು ಕೃಷಿಕ

•ದಿನೇಶ್‌ ಬಡಗನ್ನೂರು

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.