ಮಲಾಡ್‌ ಕನ್ನಡ ಸಂಘದ ವಾರ್ಷಿಕ ವಿಹಾರಕೂಟ


Team Udayavani, Jan 17, 2019, 12:30 PM IST

1501mum01.jpg

ಮುಂಬಯಿ: ಮಲಾಡ್‌ ಕನ್ನಡ ಸಂಘದ ವಾರ್ಷಿಕ ವಿಹಾರ ಕೂಟವು ಜ. 13 ರಂದು ಮಾರ್ವೆ ಮಡ್‌ರೋಡ್‌ನ‌ ದೇಶ್ಪಾಂಡೆ ವಿಲ್ಹಾ ಇಲ್ಲಿ ವಿವಿಧ ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳೊಂದಿಗೆ ಜರಗಿತು.

ದಿನವಿಡೀ ಜರಗಿದ ವಿವಿಧ ವಿವಿಧ ಆಟೋಟ ಸ್ಪರ್ಧೆ ಹಾಗೂ ವಿವಿಧ ಮನೋರಂಜನೆ, ಊಟೋಪಚಾರದ ಆನಂತರ ಸಂಜೆ ಸ್ಥಳೀಯ ಗಣ್ಯರ ಉಪಸ್ಥಿತಿಯೊಂದಿಗೆ ಮಲಾಡ್‌ ಕನ್ನಡ ಸಂಘದ ಅಧ್ಯಕ್ಷ ಹರೀಶ್‌ ಎನ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಿಹಾರಕೂಟದ ಸದಸ್ಯರಿಗೆ ಅಭಿನಂದನ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸದಸ್ಯರಿಗೆ, ಮಕ್ಕಳಿಗೆ ಬಹುಮಾನ ವಿತರಣ ಕಾರ್ಯಕ್ರಮ ನಡೆಯಿತು.

ಸದಸ್ಯರನ್ನು ಉದ್ಧೇಶಿಸಿ ಮಾತನಾಡಿದ ಅಧ್ಯಕ್ಷ ಹರೀಶ್‌ ಎನ್‌. ಶೆಟ್ಟಿ ಅವರು, ಸದಸ್ಯರಿಗೆ, ಮಕ್ಕಳಿಗೆ, ಮಹಾನಗರದ ಯಾಂತ್ರಿಕ ಜೀವನದಲ್ಲಿ ವಿರಾಮಮಕ್ಕಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ  ಎಲ್ಲರೂ ಒಂದಾಗಿ ಸಂತೋಷದಿಂದ ಪ್ರಶಾಂತ ವಾತಾವರಣದಲ್ಲಿ ಕಾಲ ಕಳೆದಿದ್ದಾರೆ. ಮಕ್ಕಳು ಹಲವಾರು ಹಿರಿಯ ಸದಸ್ಯರು, ಯುವಕರನ್ನು ಮೀರಿಸುವಂತಹ ವಿವಿಧ ಕ್ರೀಡೆಯಲ್ಲಿ ಭಾಗವಹಿಸಿದ್ದಾರೆ. ಇದೊಂದು, ಪ್ರೀತಿ, ಸೌಹಾರ್ಧತೆಯ ಕೂಟ. ಸಂಘದ ಕಾರ್ಯಕ್ರಮಗಳಲ್ಲಿ  ಇನ್ನು ಹೆಚ್ಚಿನ ಪ್ರೋತ್ಸಾಹ, ಉತ್ಸಾಹದಿಂದ ಭಾಗವಹಿಸಬೇಕು. ಮಲಾಡ್‌ ಪ್ರದೇಶಕ ವಿಶಾಲ ಪ್ರದೇಶದಲ್ಲಿ ತುಳು-ಕನ್ನಡಿಗರ ನೋವು-ನಲಿವಿಗಾಗಿ ಸದಾ ಸ್ಪಂದಿಸುತ್ತಿರುವ ಮಲಾಡ್‌ ಕನ್ನಡ ಸಂಘಕ್ಕೆ ಇನ್ನಷ್ಟು ಸದಸ್ಯರು ಜೊತೆಗೂಡಿ ಸಹಾಯ ಹಸ್ತ ನೀಡುವ ಮೂಲಕ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕವಾಗಿ ದುಡಿಯುವ ಸಂಸ್ಥೆಗೆ ಬೆನ್ನೆಲುಬಾಗಬೇಕು ಎಂದು ಹೇಳಿ ವಿಹಾರಕೂಟಕ್ಕೆ ಸಹಕಾರ ನೀಡಿ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉದ್ಯಮಿ, ಗಾಣಿಗ ಸಮಾಜದ ಉಪಾಧ್ಯಕ್ಷ ಬಿ. ವಿ. ರಾವ್‌ ಅವರು ಮಾತನಾಡಿ, ವಿಹಾರಕೂಟವು ಯಾಂತ್ರಿಕ ಜೀವನದಲ್ಲಿ ಸಂತೋಷ, ವಿನಿಮಯ ಸಮಯ. ಪ್ರತಿನಿತ್ಯ ಜೀವನದ ಅಡಚಣೆಯಲ್ಲಿ ಮನುಷ್ಯ ಮಾನಸಿಕವಾಗಿ ಅಸಹಾಯಕತೆಯಲ್ಲಿ ಇಂತಹ ವಿಹಾರ ಕೂಟಗಳು ನೆಮ್ಮದಿಯ ಜೊತೆಗೆ ನಮ್ಮ ಸಮಸ್ಯೆಗಳನ್ನೂ ವಿನಿಮಯಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಇದೊಂದು ಶುಭ ಸಂದರ್ಭ. ಮಲಾಡ್‌ ಕನ್ನಡ ಸಂಘದ ಪ್ರತಿಯೊಂದು ಕಾರ್ಯಕ್ರಮವು ವೈವಿಧ್ಯತೆಯಿಂದ ಕೂಡಿದ್ದು, ಒಂದು ಜನಾಕರ್ಷಣೆಯ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದರು.

ಸ್ಥಳೀಯ ಉದ್ಯಮಿ, ಸಮಾಜ ಸೇವಕರಾದ ಜೋಸೆಫ್‌ ರೊಡ್ರಿಗಸ್‌ ಮತ್ತು ಏರ್‌ ಇಂಡಿಯಾ ನಿವೃತ್ತ ಎಂಜಿನೀಯರ್‌ ಮರಿಮುತ್ತು ಅವರು ಉಪಸ್ಥಿತರಿದ್ದು ಮಲಾಡ್‌ ಕನ್ನಡ ಸಂಘದ ಕಾರ್ಯಸಾಧನೆಯನ್ನು ಶ್ಲಾಘಿಸಿ ಶುಭಹಾರೈಸಿದರು.

ಗೌರವ ಕಾರ್ಯದರ್ಶಿ ಶಂಕರ ಡಿ. ಪೂಜಾರಿ ಅವರು ಸ್ವಾಗತಿಸಿ ಮಾತನಾಡಿ, ಸಾಂಘಿಕವಾಗಿ ಹಾಗೂ ಅನ್ಯೋನ್ಯತೆ, ಸೌಹಾರ್ಧಯುತವಾಗಿ ಬದುಕನ್ನು ನಮ್ಮದಾಗಿಸಿಕೊಳ್ಳಬೇಕು. ಮಲಾಡ್‌ ಕನ್ನಡ ಸಂಘದಿಂದ ದಾನಿಗಳಿಂದ ದೊರೆಯುವ ಸೌಲಭ್ಯವನ್ನು ತನ್ನದಾಗಿಸಿಕೊಳ್ಳುವ ಮೂಲಕ ಸಂಘದ ಪ್ರತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಂಘದ ಕೀರ್ತಿ ಪತಾಕೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ನಾವೆಲ್ಲರು ಸಹಕರಿಸಬೇಕು ಎಂದು ನುಡಿದು ವಂದಿಸಿದರು.

ಯುವ ವಿಭಾಗದ ಮಾಜಿ ಕಾರ್ಯಾಧ್ಯಕ್ಷ ಸೂರಪ್ಪ ಕುಂದರ್‌ ವಿವಿಧ ಮನೋರಂಜನ, ಕ್ರೀಡಾ ಕಾರ್ಯಕ್ರಮದಲ್ಲಿ ಸಹಕರಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ಶಾಂಭವಿ ಬಿ. ಶೆಟ್ಟಿ ಬಹುಮಾನ ವಿಜೇತರ ಯಾದಿಯನ್ನು ಓದಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಬಾಲಕೃಷ್ಣ ಬಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರತಿ ಬಾಲಚಂದ್ರ ರಾವ್‌, ಗೌರವ ಕೋಶಾಧಿಕಾರಿ ಪ್ರಕಾಶ್‌ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಪೂಜಾರಿ, ಜತೆ ಕೋಶಾಧಿಕಾರಿ ಶಂಕರ ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅನಿತಾ ಎಸ್‌. ಪೂಜಾರಿ ಉಪಸ್ಥಿತರಿದ್ದರು. ಯುವ ವಿಭಾಗದ ಕಾರ್ಯದರ್ಶಿ ಶಂಕರ ಎಚ್‌. ಪೂಜಾರಿ ಮತ್ತು ಸದಸ್ಯರು ವಿಹಾರಕೂಟದ ಯಶಸ್ಸಿಗೆ ಸಹಕರಿಸಿದರು. 

ತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.