ಉಡುಪಿ ಜಿಲ್ಲೆ: 6 ಮಂಗಗಳ ಶವ ಪತ್ತೆ 


Team Udayavani, Jan 20, 2019, 4:11 AM IST

kyas.jpg

ಉಡುಪಿ/ಕುಂದಾಪುರ/ಸಿದ್ದಾಪುರ: ಜಿಲ್ಲೆಯಲ್ಲಿ ಶನಿವಾರ ಒಟ್ಟು ಆರು ಮಂಗಗಳ ಮೃತ ದೇಹ ಪತ್ತೆಯಾಗಿದೆ.
ಕುಂದಾಪುರ ತಾಲೂಕಿನ ಬೆಳ್ವೆ, ಮಡಾಮಕ್ಕಿ, ವಂಡ್ಸೆ, ನಾಡ, ಸಿದ್ದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕೆಂಜೂರು, ಕಾರ್ಕಳ ತಾಲೂಕಿನ ಕಡ್ತಲ ದೊಡೇರಂಗಡಿಯಲ್ಲಿ ಮಂಗಗಳ ಮೃತ ದೇಹಗಳು ಪತ್ತೆಯಾದವು. ಇದರಲ್ಲಿ ಮಡಾಮಕ್ಕಿ ಮತ್ತು ಕಡ್ತಲದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಎರಡು ಕೊಳೆತ ಸ್ಥಿತಿಯಲ್ಲಿತ್ತು. ಸಿದ್ದಾಪುರ, ವಂಡ್ಸೆ ಪ್ರದೇಶದಲ್ಲಿ ಈಗಾಗಲೇ ಸಿಕ್ಕಿದ ಮಂಗಗಳಿಗೆ ಕಾಯಿಲೆ ಇರುವುದು ದೃಢಪಟ್ಟ ಕಾರಣ ಮತ್ತೆ ಪರೀಕ್ಷೆಗೆ ಕಳುಹಿಸಿಲ್ಲ. 

ಜ್ವರ ಬಂದ ಮೂವರ ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇವರಾರಿಗೂ ಮಂಗನ ಕಾಯಿಲೆ ಇಲ್ಲ ಎಂದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಕಮಲಶಿಲೆ ದೇವಸ್ಥಾನದಿಂದ 25,000 ರೂ. ಮೌಲ್ಯದ ಡಿಎಂಪಿ ತೈಲಕ್ಕೆ ಬೇಡಿಕೆ ಬಂದಿದೆ.

ಕೆಎಂಸಿ: ಮತ್ತೆ ಮೂವರು ದಾಖಲು
ಉಡುಪಿ: ಶಂಕಿತ ಮಂಗನಕಾಯಿಲೆ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ ಮೂವರು ಶನಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ ಕೆಎಂಸಿಯಲ್ಲಿ 101 ಮಂದಿ ಶಂಕಿತ ಮಂಗನ ಕಾಯಿಲೆ ಚಿಕಿತ್ಸೆಗೆ ದಾಖಲಾಗಿ 65 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.

ಕಡಬ: ಮತ್ತೆ 3 ಶವ ಪತ್ತೆ
ಕಡಬ ಕುಟ್ರಾಪ್ಪಾಡಿ ಗ್ರಾಮದಲ್ಲಿ ಇನ್ನೂ 3 ಮಂಗಗಳ ಶವಗಳು ಪತ್ತೆಯಾಗಿವೆ. ಈ ವರೆಗೆ ತಾಲೂಕಿನಲ್ಲಿ ಒಟ್ಟು 5 ಶವಗಳು ಪತ್ತೆಯಾಗುವುದರೊಂದಿಗೆ ಜನರಲ್ಲಿ ಮಂಗನಕಾಯಿಲೆಯ ಭೀತಿ ಮನೆಮಾಡಿದೆ.ರಾಮಕುಂಜ ಗ್ರಾ.ಪಂ. ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ ಆದಂ ಅವರಿಗೆ ಸೇರಿದ ತೋಟದಲ್ಲಿ ಜ. 16ರಂದು 1 ಮಂಗನ ಶವ ಪತ್ತೆಯಾಗಿತ್ತು. ಅದಕ್ಕೂ ಮೊದಲು ಕುಟ್ರಾಪ್ಪಾಡಿ ಗ್ರಾಮದ ಉಳಿಪ್ಪು ಅರಣ್ಯ ಪ್ರದೇಶದಲ್ಲಿ ಸಂಪೂರ್ಣ ಕೊಳೆತುಹೋಗಿದ್ದ ಶವ ಪತ್ತೆಯಾಗಿತ್ತು. ಆದ್ದರಿಂದ  ಶವದ ಭಾಗಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲು ಸಾಧ್ಯವಾಗಿರಲಿಲ್ಲ.  ಈ ಮಧ್ಯೆ ವಾರದ ಹಿಂದೆ ಕುಟ್ರಾಪ್ಪಾಡಿ ಗ್ರಾಮದ ಕುಂಟೋಡಿ ಜಯಚಂದ್ರ ರೈ ಅವರಿಗೆ ಸೇರಿದ ತೋಟದಲ್ಲಿ ಪತ್ತೆಯಾಗಿದ್ದ ಮಂಗನ ಶವವನ್ನು ಸ್ಥಳೀಯರು ಮಣ್ಣಿನಲ್ಲಿ ಹೂತು ಬಳಿಕ ಕಡಬ ಸರಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿಯ ಕ್ಯಾಸನೂರು ಕಾಡಿನ ಕಾಯಿಲೆ (ಕೆಎಫ್‌ಡಿ) ಘಟಕದ ವೈದ್ಯಾಧಿಕಾರಿಗಳು ಪರಿಸರದಲ್ಲಿ ಕಂಡುಬಂದ ಉಣುಗುಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.ಕುಟ್ರಾಪ್ಪಾಡಿ ಗ್ರಾಮದ ಉರುಂಬಿಯ ಶೇಖರ ಗೌಡ ಅವರ ತೋಟದಲ್ಲಿ ಮತ್ತು ಮೀನಾಡಿಯಲ್ಲಿ  ಹಲವು ದಿನಗಳ ಹಿಂದೆ ಮಂಗ ಸತ್ತಿರುವ ವಿಚಾರ ಶನಿವಾರ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.