ಮತ್ತೆ 9 ಮಂದಿಗೆ ಮಂಗನಕಾಯಿಲೆ:ಡಿಎಚ್‌ಒ,ಉಪ ನಿರ್ದೇಶಕ ಅಮಾನತು


Team Udayavani, Jan 23, 2019, 1:05 AM IST

mangan-kaile.jpg

ಸಾಗರ: ಮಹಾಮಾರಿ ಮಂಗನಕಾಯಿಲೆ ಉಲ್ಬಣ ಗೊಳ್ಳುತ್ತಲೇ ಇದ್ದು, ಮಂಗಳವಾರ ಮತ್ತೆ ಎಂಟು ಮಂದಿ ಜ್ವರಕ್ಕೆ ತುತ್ತಾಗಿದ್ದಾರೆ. ನಾಲ್ವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಗಳ ಸಾವಿನ ಸರಣಿಯೂ ಮುಂದುವರಿದಿದೆ.

ಅರಳಗೋಡು ಸುತ್ತಮುತ್ತಲಿನ 8 ಜನ ಜ್ವರಪೀಡಿತರಾಗಿದ್ದು, ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಇವರಲ್ಲಿ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕಳುಹಿಸಿಕೊಡಲಾಗಿದೆ. ಅಲ್ಲದೆ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀನಗರದ ರಾಮಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕೆಎಂಸಿಗೆ ದಾಖಲಿಸಲು ಶಿಫಾರಸು ಮಾಡಲಾಗಿದೆ.

ಹಿರೆನೆಲ್ಲೂರು ಮತ್ತು ಎಂ.ಎಲ್‌. ಹಳ್ಳಿಗಳಲ್ಲಿ ರಾಮಪ್ಪ ಅವರ ಜಮೀನು ಇದ್ದು, ಒಕ್ಕಲು ಮಾಡಲು ಹೋದಾಗ ಉಣುಗು ಕಚ್ಚಿರಬಹುದೆಂದು ಶಂಕಿಸಲಾಗಿದೆ. ಅವರ ರಕ್ತದ ಮಾದರಿಯನ್ನು ಪುಣೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಇನ್ನು ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲಾವಿದ ಲಕ್ಷ್ಮೀನಾರಾಯಣ ಸಂಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಅಲ್ಲಿಂದ ಚೇತರಿಸಿಕೊಂಡ ನಾಲ್ವರನ್ನು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಶ್ರೀಧರಾಶ್ರಮದ ಬಳಿ ಮೃತ ಮಂಗ: ವರದಪುರದ ಶ್ರೀಧರಾಶ್ರಮದ ಆವರಣದಲ್ಲಿ ಮಂಗಳವಾರ ಮಂಗವೊಂದು ಮೃತಪಟ್ಟಿದ್ದು ಇನ್ನೊಂದು ಮಂಗ ಅಸ್ವಸ್ಥ ಸ್ಥಿತಿಯಲ್ಲಿ ಆಶ್ರಮದ ಗೋಶಾಲೆಯ ಸಮೀಪಕಾಣಿಸಿಕೊಂಡಿದೆ. ಸೋಮವಾರವೇ ಅಸ್ವಸ್ಥ ಸ್ಥಿತಿಯಲ್ಲಿ ಕಂಡಿದ್ದ ಮಂಗ ಮಂಗಳವಾರ ಸತ್ತಿದ್ದು, ಮೇಲ್ನೋಟಕ್ಕೆ ಕೆಎಫ್‌ಡಿ ಶಂಕೆ ವ್ಯಕ್ತವಾಗಿದೆ. ಪಶು ಇಲಾಖೆಯ ಸಹಾ ಯಕ ನಿರ್ದೇಶಕ ಡಾ| ಎನ್‌.ಎಚ್‌. ಶ್ರೀಪಾದರಾವ್‌ ನೇತೃತ್ವದಲ್ಲಿ ಪೋಸ್ಟ್‌ಮಾರ್ಟಂ ನಡೆಸಿ ಅಂಗಾಂಶಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

 ಬೈಂದೂರಲ್ಲಿ ಮತ್ತೆ ಎರಡು ಶವ ಪತ್ತೆ ಬೈಂದೂರಿನ ಮಾರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ಎರಡು ಮಂಗಗಳ ಶವ ದೊರೆತಿದೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಉಡುಪಿ ಜಿಲ್ಲೆಯ ಗಡಿಭಾಗಗಳಾದ ಶಿರೂರು, ಸಿದ್ದಾಪುರ ಮುಂತಾದ ಕಡೆ ಮಂಗಗಳ ಕಾಯಿಲೆ ಇರುವುದು ಈಗಾಗಲೇ ಆರೋಗ್ಯ ಇಲಾಖೆಯಿಂದ ದೃಢಪಟ್ಟಿದೆ.

ಡಿಎಚ್‌ಒ, ಉಪ ನಿರ್ದೇಶಕ ಅಮಾನತು

ಶಿವಮೊಗ್ಗ: ಮಂಗನ ಕಾಯಿಲೆ (ಕೆಎಫ್‌ಡಿ) ಹರಡದಂತೆ ಮುಂಜಾಗ್ರತೆ ವಹಿಸುವಲ್ಲಿ ವಿಫಲರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ (ಡಿಎಚ್‌ಒ) ಡಾ| ಬಿ.ಸಿ.ವೆಂಕಟೇಶ್‌ ಮತ್ತು ಪರಿಮಾಣ ಕ್ರಿಮಿ ಸಂಶೋಧನಾ ಕೇಂದ್ರದ ಉಪನಿರ್ದೇಶಕ ಡಾ| ರವಿಕುಮಾರ್‌ ಅವರನ್ನು ಅಮಾನತುಗೊಳಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಆಯುಕ್ತ ಪಂಕಜ್‌ಕುಮಾರ್‌ ಪಾಂಡೆ ಅವರು ಕರ್ತವ್ಯ ಲೋಪ ಆರೋಪದಡಿ ಇವರಿಬ್ಬರನ್ನೂ ಅಮಾನತುಗೊಳಿಸಿ ಮಂಗಳವಾರ ಆದೇಶ
ಹೊರಡಿಸಿದ್ದಾರೆ. 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.