ಬೆಂ.ಕೇಂದ್ರದಿಂದ ಪ್ರಿಯಾಂಕಾ ಸ್ಪರ್ಧೆಗೆ ಆಗ್ರಹ


Team Udayavani, Jan 24, 2019, 6:36 AM IST

ba-kendra.jpg

ಬೆಂಗಳೂರು: ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿರುವುದು ರಾಜ್ಯ ಕಾಂಗ್ರೆಸ್ಸಿಗರಲ್ಲಿ ಹೊಸ ಹುರುಪು ತಂದಿದೆ. ಕರ್ನಾಟಕದಲ್ಲಿ ಅವರನ್ನು ಸ್ಟಾರ್‌ ಪ್ರಚಾರಕರನ್ನಾಗಿಸಿದರೆ ಹೆಚ್ಚು ಲೋಕಸಭೆ ಸೀಟು ಗೆಲ್ಲಬಹುದು ಎಂಬ ಲೆಕ್ಕಾಚಾರ ಈಗ ಆರಂಭವಾಗಿದೆ.

ಈ ಬೆನ್ನಲ್ಲೇ ಕರ್ನಾಟಕದಿಂದ ಅದರಲ್ಲೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಅವರು ಕಣಕ್ಕಿಳಿಯಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಇದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಲಾಭವಾಗುತ್ತದೆ ಎಂಬುದು ರಾಜ್ಯ ಕಾಂಗ್ರೆಸ್‌ ನಾಯಕರ ಅಂಬೋಣ.

ಪ್ರಿಯಾಂಕಾ ಗಾಂಧಿಯವರಿಗೆ ಬೆಂಗಳೂರಿನಿಂದ ಸ್ಪರ್ಧಿಸಲು ರಾಜ್ಯ ನಾಯಕರು ಆಹ್ವಾನ ನೀಡಬೇಕು ಎಂಬ ಬೇಡಿಕೆಯನ್ನು ಬೆಂಗಳೂರು ನಗರ ಜಿಲ್ಲಾ ಘಟಕ ಮುಂದಿಟ್ಟಿದೆ. ಅಲ್ಲದೆ, ಜ.25ರಂದು ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಘಟಕದಿಂದ ಅಧಿಕೃತವಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆಗೆ ಹೆಸರು ಪ್ರಸ್ತಾಪ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. 

ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿಯಾಗಿ ನಿಲ್ಲಬಲ್ಲ ಸಾಮರ್ಥ್ಯ ಹಾಗೂ ಛಾತಿ ಪ್ರಿಯಾಂಕಾ ಗಾಂಧಿಯವರಿಗೆ ಇದೆ ಎಂಬ ಭಾವನೆ ಕಾಂಗ್ರೆಸ್‌ ನಾಯಕರು ಹಾಗೂ ತಳ ಮಟ್ಟದ ಕಾರ್ಯಕರ್ತರವರೆಗಿದೆ. ಅಲ್ಲದೆ, ಪ್ರಿಯಾಂಕಾ ಅವರ ಅಜ್ಜಿ ದಿವಂಗತ ಇಂದಿರಾ ಗಾಂಧಿಯನ್ನು ಹೋಲುವ ಮುಖ ಚರ್ಯೆ ಹೊಂದಿರುವುದರಿಂದ ಜನರಿಗೆ ಹೆಚ್ಚು ಹತ್ತಿರವಾಗುತ್ತಾರೆ ಎನ್ನುವ ವಿಶ್ವಾಸ ರಾಜ್ಯ ನಾಯಕರದ್ದಾಗಿದೆ. 

ಅಲ್ಲದೇ ಇಂದಿರಾ ಗಾಂಧಿಯವರು ಚಿಕ್ಕಮಗಳೂರು ಜಿಲ್ಲೆಯಿಂದಲೇ ಸ್ಪರ್ಧೆ ಮಾಡಿ ರಾಜಕೀಯ ಮರು ಹುಟ್ಟು ಪಡೆದುಕೊಂಡಿದ್ದರು ಹಾಗೂ ಸೋನಿಯಾ ಗಾಂಧಿಯವರೂ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ನೆಹರು ಕುಟುಂಬಕ್ಕೂ, ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ.

ಹೀಗಾಗಿ ಪ್ರಿಯಾಂಕಾ ಗಾಂಧಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ದೊಡ್ಡ ಹುಮ್ಮಸ್ಸು ಬರಲಿದೆ ಎಂಬ ಅಭಿಪ್ರಾಯ ರಾಜ್ಯ ಮಹಿಳಾ ನಾಯಕಿಯರಲ್ಲಿ ಮೂಡಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಬೇಕೆಂಬ ಬೇಡಿಕೆ ಇದೆ. ಆದರೆ, ಪ್ರಿಯಾಂಕಾ ಹೆಸರು ಪ್ರಸ್ತಾಪವಾಗುತ್ತಿರುವುದರಿಂದ ಹೈಕಮಾಂಡ್‌ ನಿರ್ಧಾರದ ಮೇಲೆ ಟಿಕೆಟ್‌ ಆಕಾಂಕ್ಷಿಗಳ ಭವಿಷ್ಯ ನಿರ್ಧಾರವಾಗಲಿದೆ. 

ಪ್ರಿಯಾಂಕಾ ಗಾಂಧಿಯವರನ್ನು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಕರೆತರಬೇಕೆಂದು ಈಗಾಗಲೆ ಜಿಲ್ಲಾ ಮಹಿಳಾ ಘಟಕದಲ್ಲಿ ತೀರ್ಮಾನಿಸಲಾಗಿದ್ದು, ಲೋಕಸಭಾ ಕ್ಷೇತ್ರ ಉಸ್ತುವಾರಿ ಸೂರ್ಯನಾರಾಯಣ ಅವರಿಗೂ ತಿಳಿಸಲಾಗಿದೆ. ಜ.25 ರಂದು ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಪಕ್ಷದ ನಾಯಕರ ಎದುರು ಅಧಿಕೃತವಾಗಿ ಬೇಡಿಕೆ ಇಡಲಿದ್ದೇವೆ.
-ವೈ.ವಿನೋದಾ, ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷೆ 

ಪ್ರಿಯಾಂಕಾ ಗಾಂಧಿಯವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವುದರಿಂದ ನಮಗೆಲ್ಲ ದೊಡ್ಡ ಶಕ್ತಿ ಬಂದ ಹಾಗಾಗಿದೆ. ಮಹಿಳೆಯರಲ್ಲಿ ಹೊಸ ಉತ್ಸಾಹ ಮೂಡಿದೆ. ಅವರು ರಾಜ್ಯದ ಯಾವುದಾದರೂ  ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ, ಮುಕ್ತವಾಗಿ ಸ್ವಾಗತಿಸುತ್ತೇವೆ. ಅದರಿಂದ ರಾಜ್ಯಕ್ಕಷ್ಟೇ ಅಲ್ಲ. ದೇಶದಲ್ಲಿಯೇ ಕಾಂಗ್ರೆಸ್‌ಗೆ ದೊಡ್ಡ ಬಲ ಬಂದಂತಾಗುತ್ತದೆ.
-ಡಾ.ಪುಷ್ಪಾ ಅಮರನಾಥ್‌, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.