ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ


Team Udayavani, Jan 27, 2019, 12:30 AM IST

water.jpg

ಬೆಂಗಳೂರು: ಬರ ಪೀಡಿತ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು 14ನೇ ಹಣಕಾಸು ಆಯೋಗದ ಅನುದಾನವನ್ನು ಆದ್ಯತೆ ಮೇಲೆ ಹೆಚ್ಚಿನ ರೀತಿಯಲ್ಲಿ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ವಿಶೇಷ ಅನುಮತಿ ಕೊಟ್ಟಿದೆ.

ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆಯಾಗಿ ಬಿಡುಗಡೆಯಾಗಿರುವ 14ನೇ ಹಣಕಾಸು ಆಯೋಗದ ಅನುದಾನವನ್ನು ಸ್ಥಳೀಯ ಅಗತ್ಯತೆಗೆ ಅನುಸಾರವಾಗಿ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗಾಗಿ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಅಧಿಕವಾಗಿ ಬಳಸಿಕೊಳ್ಳಲು ಪ್ರಸಕ್ತ ಸಾಲಿಗೆ ವಿಶೇಷ ಅನುಮತಿ ನೀಡಲಾಗಿದೆ. ಆದ್ದರಿಂದ ಕುಡಿಯುವ ನೀರಿನ ಕಾಮಗಾರಿಗಳಿಗೆ ನಿರ್ಬಂಧ ವಿಧಿಸುವ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯು ಎಲ್ಲ ಗ್ರಾಪಂಗಳಿಗೆ ಸುತ್ತೋಲೆ ಹೊರಡಿಸಿದೆ.

ಹಣಕಾಸು ಆಯೋಗದ ಅನುದಾನ ಕೇಂದ್ರ ಸರ್ಕಾರದಿಂದ ನೇರವಾಗಿ ಗ್ರಾಪಂಗಳಿಗೆ ಹಂಚಿಕೆಯಾಗಿ ಬಿಡುಗಡೆಯಾಗುತ್ತದೆ. ಆ ಅನುದಾನ ಬಳಸಿಕೊಳ್ಳಲು ನಿರ್ದಿಷ್ಟ ಮಾರ್ಗಸೂಚಿಗಳಿರುತ್ತವೆ. ಅದರಂತೆ ಒಟ್ಟು ಅನುದಾನದಲ್ಲಿ ಶೇ.90ರಷ್ಟು ಅನುದಾನವನ್ನು ಮೂಲಭೂತ ಅನುದಾನವಾಗಿ ಆಸ್ತಿ ಸೃಜನೆ ಕಾಮಗಾರಿಗಳಿಗೆ ಮೀಸಲಿಟ್ಟು, ಉಳಿದ ಶೇ.10ರಷ್ಟು ಅನುದಾನವನ್ನು ಕಾರ್ಯಾಚರಣೆ ಮತ್ತು ನಿರ್ವಹಣಾ ಕಾಮಗಾರಿಗಳಿಗೆ ಉಪಯೋಗಿಸಬಹುದು.

ಅದರಂತೆ ಆಸ್ತಿ ಸೃಜನೆ ಕಾಮಗಾರಿಗಳಿಗೆ ಬಳಸುವ ಶೇ.90ರಷ್ಟು ಅನುದಾನದಲ್ಲಿ ನೈರ್ಮಲ್ಯ ಕಾಮಗಾರಿ, ಘನ ತ್ಯಾಜ್ಯ, ಬೀದಿ ದೀಪ ನಿರ್ವಹಣೆ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ತಲಾ ಶೇ.10, ಸಮುದಾಯ ಆಸ್ತಿಗಳ ನಿರ್ವಹಣೆ, ಗ್ರಾಪಂ ರಸ್ತೆಗಳ ನಿರ್ವಹಣೆ, ಪಾದಚಾರಿ ರಸ್ತೆಗಳ ನಿರ್ಮಾಣ ಮತ್ತು ನಿರ್ವಹಣೆ, ಮಳೆ ನೀರಿನ ಚರಂಡಿಗಳ ನಿರ್ಮಾಣಕ್ಕೆ ತಲಾ ಶೇ.15ರಷ್ಟು, ಸ್ಮಶಾನಗಳು ಮತ್ತು ಜೀವವೈವಿಧ್ಯತೆ ರಕ್ಷಣೆಗೆ ತಲಾ ಶೇ.5ರಷ್ಟು ಅನುದಾನ ಬಳಸಿಕೊಳ್ಳ ಬಹುದು. ಈ ಒಟ್ಟು ಅನುದಾನದಲ್ಲಿ ಶೇ.25ರಷ್ಟು ಅನುದಾನವನ್ನು ಎಸ್ಸಿ, ಎಸ್ಟಿ ವರ್ಗದ ಕಾಮಗಾರಿಗಳಿಗೆ ಮೀಸಲಿಡಬೇಕು. ಜೊತೆಗೆ ಶೇ.20ರಷ್ಟು ಅನು ದಾನವನ್ನು ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅವಕಾಶವಿದೆ. ಆದರೆ, ತೀವ್ರ ಬರದ ಹಿನ್ನೆಲೆಯಲ್ಲಿ ಮಾರ್ಗ ಸೂಚಿಗಳನ್ನು ಸಡಿಲ ಗೊಳಿಸಿರುವ ಸರ್ಕಾರ ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ಅನುದಾನವನ್ನು ಬಳಸಿ ಕೊಳ್ಳುವಂತೆ ಹೇಳಿದೆ.

2 ಸಾವಿರ ಕೋಟಿ: 14ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ 2018-19ನೇ ಸಾಲಿಗೆ ರಾಜ್ಯಕ್ಕೆ ಸುಮಾರು 2 ಸಾವಿರ ಕೋಟಿ ರೂ.ಅನುದಾನವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಈ ಅನುದಾನ ಎರಡು ಕಂತುಗಳಲ್ಲಿ ಈಗಾಗಲೇ ರಾಜ್ಯದ 6,020 ಗ್ರಾಪಂಗಳಿಗೆ ಹಂಚಿಕೆಯಾಗಿ, ಬಿಡುಗಡೆಯೂ ಆಗಿದೆ. ಪ್ರಸ್ತುತ ರಾಜ್ಯದ ಬಹುತೇಕ ತಾಲೂಕುಗಳು ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಹಣಕಾಸು ಆಯೋಗದ ಅನುದಾನವನ್ನು ಬಳಸಬೇಕಾದ ಬಾಬ್ತುಗಳ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಬಳಸಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಸರ್ಕಾರದಿಂದ 150 ಕೋಟಿ ರೂ.ಅನುದಾನ
ಇದಲ್ಲದೇ ಮೊದಲ ಸುತ್ತಿನಲ್ಲಿ ಬರಪೀಡಿತ ಎಂದು ಘೋಷಿಸಲಾದ 100 ತಾಲೂಕುಗಳಿಗೆ ತಲಾ 1 ಕೋಟಿ ರೂ.ಹಾಗೂ ನಂತರ ಬರಪೀಡಿತ ಎಂದು ಘೋಷಿಸಲಾದ 62 ತಾಲೂಕುಗಳಿಗೆ ತಲಾ 50 ಲಕ್ಷ ರೂ.ಗಳಂತೆ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಈಗಾಗಲೇ 150 ಕೋಟಿ ರೂ.ವಿಶೇಷ ಅನುದಾನ ಬಿಡುಗಡೆ ಮಾಡಿದೆ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.