![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Jan 29, 2019, 12:30 AM IST
ಹೊಸದಿಲ್ಲಿ: ಇತ್ತೀಚೆಗಷ್ಟೇ ಕ್ರಿಕೆಟ್ ನಿವೃತ್ತಿ ಪ್ರಕಟಿಸಿದ, 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಗೌತಮ್ ಗಂಭೀರ್ ಮುಂಬರುವ ಏಕದಿನ ವಿಶ್ವಕಪ್ ಪಂದ್ಯಾವಳಿಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದಾರೆ.
ಇದರಲ್ಲಿ ಒಂದೆಡರು ಅಚ್ಚರಿಗಳಿವೆ. ದ್ವಿತೀಯ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಅವರನ್ನು ಕೈಬಿಟ್ಟು ದಿನೇಶ್ ಕಾರ್ತಿಕ್ ಮೇಲೆ ಒಲವು ತೋರಿಸಿದ್ದಾರೆ. ಪ್ರಧಾನ ಸ್ಪಿನ್ನರ್ ಸ್ಥಾನಕ್ಕೆ ಆರ್. ಅಶ್ವಿನ್ ಅವರನ್ನು ಆಯ್ಕೆ ಮಾಡಿದ್ದಾರೆ. ಕಳೆದ ಏಶ್ಯ ಕಪ್ ಕ್ರಿಕೆಟ್ ಪಂದ್ಯಾವಳಿ ಬಳಿಕ ಅಶ್ವಿನ್ ಭಾರತದ ಏಕದಿನ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಸದಸ್ಯನಾಗಿರುವ ರವೀಂದ್ರ ಜಡೇಜ ಅವರಿಗೆ ಇಲ್ಲಿ ಸ್ಥಾನ ಲಭಿಸಿಲ್ಲ. ಟಿವಿ ಶೋ ವಿವಾದದ ಬಳಿಕ ಈಗ ಭಾರತ “ಎ’ ತಂಡದ ಪರ ಆಡುತ್ತಿರುವ ಕರ್ನಾಟಕದ ಕೆ.ಎಲ್. ರಾಹುಲ್ ಅವರಿಗೆ ಅವಕಾಶವಿತ್ತಿದ್ದಾರೆ.
ಗಂಭೀರ್ ತಂಡ: ರೋಹಿತ್ ಶರ್ಮ, ಶಿಖರ್ ಧವನ್, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ, ಅಂಬಾಟಿ ರಾಯುಡು, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಆರ್. ಅಶ್ವಿನ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.