ರಾಷ್ಟ್ರೀಯ ಸೈಕ್ಲಿಂಗ್‌ ಕೂಟದಲ್ಲಿ ಸೈಕ್ಲಿಸ್ಟ್‌ಗಳ ಪರದಾಟ


Team Udayavani, Jan 31, 2019, 12:55 AM IST

ban31011911medn.jpg

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಬುಧವಾರದಿಂದ ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ಆರಂಭವಾಗಿದೆ. ಇದರಲ್ಲಿ ಭಾಗವಹಿಸುತ್ತಿರುವ ಸೈಕ್ಲಿಸ್ಟ್‌ಗಳ ಸಂಕಷ್ಟವನ್ನು ಮಾತ್ರ ದೇವರೇ ಸರಿಪಡಿಸಬೇಕು! ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿನ ವೆಲೊಡ್ರೋಮ್‌ (ಸೈಕ್ಲಿಂಗ್‌ ಅಂಕಣ) ಬಳಿ ರಾಜಸ್ಥಾನ ಸೈಕ್ಲಿಸ್ಟ್‌ಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಒಂದು ಚಿಕ್ಕ ಹಾಲ್‌ನಲ್ಲಿ 30 ಸ್ಪರ್ಧಿಗಳು ತಂಗಿದ್ದಾರೆ. ಅವರಿಗೆಲ್ಲ ಹಾಸಿಕೊಳ್ಳಲು ಸರಿಯಾದ ಹಾಸಿಗೆಗಳಿಲ್ಲ. ನೀಡಿರುವ ಹಾಸಿಗೆಗಳಿಗೆ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಉಷ್ಣಾಂಶವನ್ನು ತಡೆಯುವ ಶಕ್ತಿಯಿಲ್ಲ…ಹೀಗೆಂದು ಆಂಗ್ಲ ದಿನಪತ್ರಿಕೆ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಅಚ್ಚರಿಯೆಂದರೆ ಮಾಡಿರುವ ವಸತಿ ವ್ಯವಸ್ಥೆಯಲ್ಲೂ ತಾರತಮ್ಯವಿದೆ. ಬೇರೆ ಬೇರೆ ತಂಡಗಳಲ್ಲಿರುವ ಅಂತಾರಾಷ್ಟ್ರೀಯ ಸೈಕ್ಲಿಸ್ಟ್‌ಗಳಿಗೆ ಹೋಟೆಲ್‌ನಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಮಹಾರಾಷ್ಟ್ರ ತಂಡದಲ್ಲಿ ಮಯೂರ್‌ ಪವಾರ್‌, ಅಭಿಷೇಕ್‌ ಖಾಸಿತ್‌ ಎಂಬ ಅಂತಾರಾಷ್ಟ್ರೀಯ ಚಿನ್ನ ಗೆದ್ದಿರುವ ಇಬ್ಬರು ಸೈಕ್ಲಿಸ್ಟ್‌ಗಳಿದ್ದಾರೆ. ಅವರಿಗೆ ಹೋಟೆಲ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೆ 22 ಮಂದಿಯಿರುವ ಅವರ ತಂಡದ ಇತರೆ ಸದಸ್ಯರಿಗೆ, ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿರುವ ಪುಟ್ಟ ಹಾಲ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಹಲವು ಅಂತಾರಾಷ್ಟ್ರೀಯ ತಾರೆಯರೇ ಇರುವ, ರೈಲ್ವೇಸ್‌, ಸರ್ವಿಸಸ್‌ನಂತಹ ತಂಡಗಳು ತಮ್ಮ ವಸತಿ ವ್ಯವಸ್ಥೆಯನ್ನು ತಾವೇ ಮಾಡಿಕೊಂಡಿವೆ. ಸೂಕ್ತ ವಸತಿ ವ್ಯವಸ್ಥೆಯಿಲ್ಲದ ಸ್ಪರ್ಧಿಗಳು ತಮ್ಮ ಭವಿಷ್ಯದ ಬಗೆಗಿನ ಭೀತಿಯಿಂದ ಆಕ್ಷೇಪ ಎತ್ತಲು ಹಿಂಜರಿಯುತ್ತಿದ್ದಾರೆ.

ಈ ಬಗ್ಗೆ ರಾಜಸ್ಥಾನ ಸೈಕ್ಲಿಂಗ್‌ ಸಂಸ್ಥೆಯನ್ನು ಪ್ರಶ್ನಿಸಿದರೆ, ಅದರ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ನಮಗಿರುವ 75 ಲಕ್ಷ ರೂ. ಹಣದಲ್ಲೇ ಎಲ್ಲವನ್ನೂ ನಡೆಸಬೇಕು. ಇದರಲ್ಲಿ ಹಲವಾರು ವರ್ಷಗಳಿಂದ ಬಳಸದೇ ಹಾಗೇ ಉಳಿದುಕೊಂಡಿರುವ ವೆಲೊಡ್ರೋಮನ್ನೂ ನವೀಕರಣ ಮಾಡಬೇಕು ಎಂದು ತಮ್ಮ ಪರಿಸ್ಥಿತಿ ಹೇಳಿಕೊಳ್ಳುತ್ತಾರೆ.

ಸೈಕಲ್‌ ಬಿಟ್ಟಿರಲು ಸಿದ್ಧವಿಲ್ಲ: ಇದೇ ವೇಳೆ ಇನ್ನೊಂದು ಸ್ವಾರಸ್ಯಕರ ಸಂಗತಿಯೆಂದರೆ, ಸೈಕ್ಲಿಸ್ಟ್‌ಗಳು ಹೋಟೆಲ್‌ಗ‌ಳಲ್ಲಿ ಉಳಿದುಕೊಳ್ಳಲು ಒಪ್ಪುವುದಿಲ್ಲವಂತೆ. ಹೋಟೆಲ್‌ಗ‌ಳು ಸೈಕಲ್‌ ಒಳತರಲು ಅವಕಾಶ ನೀಡುವುದಿಲ್ಲ. ಆದರೆ ಸೈಕ್ಲಿಸ್ಟ್‌ಗಳು ಒಂದು ನಿಮಿಷವೂ ಸೈಕಲ್‌ ಬಿಟ್ಟು ಇರಲು ಸಿದ್ಧರಿಲ್ಲ. ಹೀಗಿದ್ದರೆ ವ್ಯವಸ್ಥೆ ಮಾಡುವುದು ಹೇಗೆ? ಎಂದು ಅಧಿಕಾರಿಗಳು ಪ್ರಶ್ನಿಸುತ್ತಾರೆ. ಕೇಂದ್ರ ಕ್ರೀಡಾಮಂತ್ರಿ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌, ಕ್ರೀಡಾಪಟುಗಳೇ ನಮ್ಮ ಕೇಂದ್ರವಾಗಬೇಕು ಎಂದು ಆಶಿಸಿದ್ದಾರೆ. ಆದರೆ ಸದ್ಯದ ಸ್ಥಿತಿಯಲ್ಲಿ ಅಂತಹ ಪರಿಸ್ಥಿತಿಯಿಲ್ಲ ಎನ್ನುವುದು ಖೇದಕರ ಎಂದು ಕ್ರೀಡಾಭಿಮಾನಿಗಳು ಬೇಸರಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.