ಆ ಒಂದು ನೋಟು ಚಿತ್ರದಲ್ಲಿ ಬೇಂದ್ರೆ ಹಾಡು


Team Udayavani, Jan 31, 2019, 6:51 AM IST

aa-notu.jpg

ಕನ್ನಡದ ಅನೇಕ ಕವಿಗಳ ಕವನಗಳು ಭಾವಗೀತೆಗಳಾಗಿವೆ, ಚಲನಚಿತ್ರಗಳಲ್ಲೂ ಬಳಕೆಯಾಗಿವೆ. ಹಾಗೆ ನೋಡಿದರೆ, ವರಕವಿ ದ.ರಾ.ಬೇಂದ್ರೆ ಅವರ ‘ನೀ ಹಿಂಗ ನೋಡ ಬ್ಯಾಡ ನನ್ನ…’, ‘ಇಳಿದು ಬಾ ತಾಯೇ ಇಳಿದು ಬಾ..’ ‘ಉತ್ತರ ಧ್ರುವದಿಂ ದಕ್ಷಿಣ ಧ್ರುವಕು…’ ಎಂಬ ಗೀತೆಗಳು ಹಲವು ಚಿತ್ರಗಳಲ್ಲಿ ಬಳಕೆಯಾಗಿ ಸಾಕಷ್ಟು ಜನಪ್ರಿಯತೆಗೊಂಡಿವೆ.

ಈಗ ಅವರ ಮತ್ತೂಂದು ಹಾಡನ್ನು ಹೊಸಬರ ‘ಆ ಒಂದು ನೋಟು’ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ‘ಕುರುಡು ಕಾಂಚಾಣ..’ ಎಂಬ ಹಾಡನ್ನು ಬಳಸಿಕೊಳ್ಳಲಾಗಿದ್ದು, ಅದನ್ನು ಜ.31 (ಇಂದು) ದ.ರಾ.ಬೇಂದ್ರೆ ಅವರ 122 ನೇ ಜನ್ಮದಿನದ ಅಂಗವಾಗಿ ಚಿತ್ರತಂಡ ಮರುಸೃಷ್ಟಿಸಿರುವ ‘ಕುರುಡು ಕಾಂಚಾಣ..’ ಗೀತೆಯ ಲಿರಿಕಲ್‌ ವಿಡಿಯೋವನ್ನು ಲಹರಿ ಆಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.

1932 ರಲ್ಲಿ ‘ನಾದಲೀಲೆ’ ಕವನಸಂಕಲನದಲ್ಲಿ ಪ್ರಕಟಗೊಂಡ ಈ ಕವನ ನಂತರದ ದಿನಗಳಲ್ಲಿ ಸಿ.ಅಶ್ವತ್ಥ್ ಅವರ ಸಂಗೀತ ಸಂಯೋಜನೆಯಲ್ಲಿ ಹೊರಬಂದಿತ್ತು. ಈಗ ಅದೇ ಹಾಡನ್ನು ಕಲಾವತಿ ಪುತ್ರನ್‌ ಹಾಡಿದ್ದಾರೆ. ಹಣದ ಗುಣದ ಕುರಿತು ಬರೆದಿರುವ ಈ ಗೀತೆ ‘ಆ ಒಂದು ನೋಟು’ ಚಿತ್ರದ ಕಥೆಗೆ ಪೂರಕವಾಗಿದ್ದು, ಅದನ್ನು ಬಳಸಿಕೊಳ್ಳಲಾಗಿದೆ.

ಚಿತ್ರದಲ್ಲಿ 2000 ನೋಟಿನ ಕಥೆ ಇದೆ. ಮುಖ್ಯವಾದ ಭಾಗವೇ 2000 ನೋಟು. ಚಿತ್ರದಲ್ಲಿರುವ ಪ್ರತಿಯೊಂದು ಪಾತ್ರ ಕೂಡ ಆ ನೋಟಿನ ಸುತ್ತವೇ ಸುತ್ತುತ್ತವೆ. ಇದೊಂದು ಪ್ರಯೋಗಾತ್ಮಕ ಕಥೆ. ಅದಕ್ಕೊಂದಷ್ಟು ಕಮರ್ಷಿಯಲ್‌ ಅಂಶ ಬೆರೆಸಿ, ಹೊಸತನದೊಂದಿಗೆ ನಿರೂಪಣೆ ಮಾಡಿ ಚಿತ್ರ ಮಾಡಲಾಗಿದೆ. ಫ್ರೆಂಡ್ಸ್‌ ಫಿಲ್ಮ್ ಫ್ಯಾಕ್ಟರಿ ಸಂಸ್ಥೆಯಡಿ ಎಮ್‌.ಕೆ.ಜಗದೀಶ್‌ ಮತ್ತು ಜಿ. ಪ್ರೇಮನಾಥ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರತ್ನಾ ತನಯ್‌ ನಿರ್ದೇಶನ ಮಾಡಿದ್ದಾರೆ.

ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಇವರದೇ. ರವಿವರ್ಮ ಛಾಯಾಗ್ರಹಣ ಮಾಡಿದರೆ, ಅರ್ಜುನ್‌ ಕಿಟ್ಟು ಸಂಕಲನ ಮಾಡಿದ್ದಾರೆ. ವೀರ್‌ಸಮರ್ಥ್ ಹಿನ್ನಲೆ ಸಂಗೀತವಿದೆ. ಕೌಶಿಕ್‌ ಸಂಗೀತ ಚಿತ್ರಕ್ಕಿದ್ದು, ಕೆ.ಕಲ್ಯಾಣ್‌, ಹರೀಶ್‌ ಕೆ.ಗೌಡ ಗೀತೆ ರಚಿಸಿದ್ದಾರೆ.

ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಲರಾಜವಾಡಿ, ಗೌತಮ್‌, ಜಗದೀಶ್‌ ಎಂ.ಕೆ., ಅಕ್ಷತಾ ಪಾಂಡವಪುರ, ಆದಿತ್ಯ ಶೆಟ್ಟಿ, ಮೇಘಾ, ರವಿಶಂಕರ್‌, ಸಿಲ್ಲಿ ಲಲ್ಲಿ ಆನಂದ, ಜಯರಾಮ್‌, ಕಾಂತರಾಜ್‌ ನಟಿಸಿದ್ದಾರೆ. ಚಿತ್ರೀಕರಣ ಮುಗಿದಿದ್ದು, ಇದೀಗ ಹಿನ್ನಲೆ ಸಂಗೀತ ಹಾಗು ಡಿಐ ಕೆಲಸಗಳು ನಡೆಯುತ್ತಿವೆ. ಫೆಬ್ರ್ರವರಿಯಲ್ಲಿ ಆಡಿಯೋ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.