ಇನ್ನೂ ಜಾರಿಯಾಗದ ರೈತ ಬೆಳಕು ಯೋಜನೆ
Team Udayavani, Feb 3, 2019, 1:55 AM IST
ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ ಸಣ್ಣ ವರ್ಗದ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ ಎರಡು ಸಾವಿರ ರೂ.ನಂತೆ ವರ್ಷಕ್ಕೆ ಆರು ಸಾವಿರ ರೂ. ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಘೋಷಿಸಲಾಗಿದೆ. ಆದರೆ, ರಾಜ್ಯದಲ್ಲಿ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ನಲ್ಲಿ ಘೋಷಿಸಿದ್ದ ‘ರೈತ ಬೆಳಕು’ ಇನ್ನೂ ಜಾರಿಯೇ ಆಗಿಲ್ಲ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಹೊಸದಾಗಿ ಬಜೆಟ್ ಮಂಡಿಸಿದ ಎಚ್.ಡಿ.ಕುಮಾರಸ್ವಾಮಿ, ಹಿಂದಿನ ಸಿದ್ದರಾಮಯ್ಯ ಸರ್ಕಾರದ ಎಲ್ಲ ಯೋಜನೆ ಮುಂದುವರಿಸಲಾಗುವುದು ಎಂದು ಹೇಳಿದ್ದರು. ಆದರೆ, ಎಂಟು ತಿಂಗಳಾದರೂ ರೈತ ಬೆಳಕು ಯೋಜನೆ ಏನಾಯ್ತು ಎಂಬ ಮಾಹಿತಿಯೇ ಇಲ್ಲ.
ಖುಷ್ಕಿ ಭೂಮಿಯ ರೈತರ ಸಂಕಷ್ಟಗಳನ್ನು ನೇರವಾಗಿ ಪರಿಹರಿಸಲು ರೈತರಿಗೆ ನೇರ ಆದಾಯ ನೆರವು ನೀಡುವ ಉದ್ದೇಶದಿಂದ ‘ರೈತ ಬೆಳಕು’ ಯೋಜನೆ ಘೋಷಿಸಲಾಗಿತ್ತು. ಅದರಡಿ ಮಳೆ ಆಶ್ರಿತ ಬೆಳೆ ಬೆಳೆಯುವ ರೈತರಿಗೆ ಪ್ರತಿವರ್ಷ ಗರಿಷ್ಠ 10 ಸಾವಿರ ರೂ. ಮಿತಿಗೆ ಒಳಪಟ್ಟು ಪ್ರತಿ ಹೆಕ್ಟೇರ್ಗೆ 5 ಸಾವಿರ ರೂ. ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡುವುದು. 70 ಲಕ್ಷ ರೈತರು ಇದರ ಪ್ರಯೋಜನ ಪಡೆಯುವ ಅಂದಾಜು ಮಾಡಲಾಗಿತ್ತು.
ರೈತರ ಬೆಳಕು ಯೋಜನೆ ಜಾರಿಯಾಗದ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಈ ಯೋಜನೆ ಜಾರಿಯಾಗಿದ್ದರೆ ಕರ್ನಾಟಕದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ನಕಲು ಮಾಡಿದ್ದಾರೆಂದು ಬಿಜೆಪಿಯವರಿಗೆ ತಿರುಗೇಟು ನೀಡಬಹುದಿತ್ತು. ಇದೀಗ ನಮ್ಮದೇ ಸರ್ಕಾರದ ಯೋಜನೆಯ ನಕಲು ಎಂದು ನಾವು ಹೇಳಿದರೆ, ಬಿಜೆಪಿಯವರು ‘ನೀವು ಅನುಷ್ಠಾನ ಮಾಡಿದ್ದೀರಾ’ ಎಂದು ಕೇಳುತ್ತಾರೆ. ನಾವೂ ಭಾಗಿಯಾಗಿರುವ ಸಮ್ಮಿಶ್ರ ಸರ್ಕಾರ ಇದ್ದರೂ ರೈತ ಬೆಳಕು ಯೋಜನೆ ಜಾರಿ ಮಾಡದಿರುವುದು ಬೇಸರದ ಸಂಗತಿ ಎಂಬ ಮಾತುಗಳು ಕೇಳಿಬರುತ್ತಿವೆ.
ಯಾವುದೇ ಸಮಯದಲ್ಲಿ ಜಾರಿ
‘ರೈತ ಬೆಳಕು ಯೋಜನೆ ರದ್ದಾಗಿಲ್ಲ. ಸಿದ್ದರಾಮಯ್ಯ ಅವರು 2018-19 ಬಜೆಟ್ನಲ್ಲಿ ಘೋಷಿಸಿದ್ದ ಕಾರ್ಯಕ್ರಮಗಳು ಮುಂದುವರಿಸಲಾಗಿರುವುದರಿಂದ ಅಧಿಕೃತವಾಗಿ ಪ್ರಸ್ತಾವನೆ ರೂಪದಲ್ಲಿ ಹಣಕಾಸು ಇಲಾಖೆ ತಲುಪಿ ಹಣ ಬಿಡುಗಡೆ, ಫಲಾನುಭವಿಗಳ ಆಯ್ಕೆಯಾಗಬೇಕು. ಆ ಪ್ರಕ್ರಿಯೆ ಇನ್ನೂ ಆಗಿಲ್ಲ. ಸಿದ್ದರಾಮಯ್ಯ ಅವರು 3500 ಕೋಟಿ ರೂ. ನಿಗದಿ ಮಾಡಿದ್ದರು. ಹೀಗಾಗಿ, ಯೋಜನೆಯನ್ನು ಯಾವುದೇ ಸಮಯದಲ್ಲೂ ಜಾರಿ ಮಾಡಬಹುದಾಗಿದೆ’ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.