ಆದೇಶ ತಿರುಚಿದವರಿಗೆ ಶಿಕ್ಷೆಯಾಗಲಿ


Team Udayavani, Feb 3, 2019, 6:33 AM IST

adesha.jpg

ಬೆಂಗಳೂರು: ಪೌರಕಾರ್ಮಿಕರನ್ನು ಕಾಯಂಗೊಳಿಸುವ ಆದೇಶ ತಿರುಚಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು, ನಕಲಿ ದಾಖಲೆಗಳಿಂದ ಪೌರಕಾರ್ಮಿಕರಾದ ಮೇಲ್ಜಾತಿಯವರನ್ನು ಶಿಕ್ಷಿಸಬೇಕು, ದಲಿತರನ್ನೇ ಸಫಾಯಿ ಕರ್ಮಚಾರಿ ಆಯೋಗದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಬೇಕು ಎಂದು ಪೌರ ಕಾರ್ಮಿಕರ ಮುಖಂಡರು ಆಗ್ರಹಿಸಿದ್ದಾರೆ.

ನಗರದ ಗಾಂಧಿಭವನದಲ್ಲಿ ರಾಜ್ಯ ಪೌರಕಾರ್ಮಿಕರ ಸಂಘಟನೆ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಮುಖಂಡರು, ನಿಯಮಗಳಂತೆ ಪೌರಕಾರ್ಮಿಕರಿಗೆ ನೀಡಬೇಕಾದ ವೇತನ, ಭತ್ಯೆ, ಸ್ವತ್ಛತಾ ಕಾರ್ಯಕ್ಕೆ ಅಗತ್ಯ ಸಲಕರಣೆ, ರಜೆ, ಆರೋಗ್ಯ ತಪಾಸಣೆ ಸೌಲಭ್ಯಕ್ಕೆ ಒತ್ತಾಯಿಸುವ ಪೌರಕಾರ್ಮಿಕರ ಮೇಲೆ ದೂರು ದಾಖಲಿಸಲಾಗುತ್ತಿದ್ದು, ಸರ್ಕಾರ ಕೂಡಲೇ ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ದಲಿತ ವಿರೋಧಿ ಅಧಿಕಾರಿಗಳು ಒಂದೂವರೆ ವರ್ಷ ಕಳೆದರೂ ಆದೇಶ ಜಾರಿಗೊಳಿಸಿಲ್ಲ ಎಂದು ಆರೋಪಿಸಿದರು. ಮಾಜಿ ಸಚಿವ ಎಚ್‌.ಆಂಜನೇಯ ಮಾತನಾಡಿ, ಸಿದ್ದರಾಮಯ್ಯ ಅವರು, ಕಾಯಂಗೊಳಿಸುವ ನಿರ್ಧಾರ ಕೈಗೊಂಡಿದ್ದರು.

ಆದರೆ, ಅಧಿಕಾರಿಗಳು ಆದೇಶಗಳನ್ನು ತಿರುಚಿದ್ದು, ಪೌರಕಾರ್ಮಿಕರಿಗೆ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಜತೆಗೆ ಬಜೆಟ್‌ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಮನವಿ ಸ್ವೀಕರಿಸಲು ಸಭೆ ಕರೆಯುವಂತೆ ಕೋರಲಾಗುವುದು ಎಂದು ಹೇಳಿದರು. ಪೌರಕಾರ್ಮಿಕರ ಸಂಘಟನೆ ಅಧ್ಯಕ್ಷ ನಾರಾಯಣ, ಸಫಾಯಿ ಕರ್ಮಚಾರಿ ಆಯೊಗದ ಮಾಜಿ ಅಧ್ಯಕ್ಷ ಎಂ.ಆರ್‌.ವೆಂಕಟೇಶ್‌ ಹಾಗೂ ಪ್ರಮುಖರು ಹಾಜರಿದ್ದರು.

ಅಧಿಕಾರಿಗಳು ಪೌರಕಾರ್ಮಿಕರಿಗೆ ಗುರುತಿನ ಚೀಟಿ ನೀಡುತಯ್ತಿಲ್ಲ. ನೀನು ಪೌರಕಾರ್ಮಿಕ ಎಂಬುದಕ್ಕೆ ಸಾಕ್ಷಿ ಏನಿದೆ? ಎಂದು ದಬ್ಟಾಳಿಕೆ ಮಾಡುತ್ತಾರೆ. ಕೈಗವಸು, ಶೂ ಸೇರಿ ಸುರಕ್ಷಾ ಸಲಕರಣೆಗಳ ಖರಿದಿಯಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ.
-ಸುಭಾಷ್‌, ಹಾವೇರಿ

ನಾವು ಒಗ್ಗಟ್ಟಾಗದಿದ್ದರೆ ದಲಿತ ವಿರೋಧಿಗಳು ನಮ್ಮ ಮೇಲೆ ದೌರ್ಜನ್ಯ ಮುಂದುವರಿಸುತ್ತಲೇ ಇರುತ್ತಾರೆ. ಹೀಗಾಗಿ ಸಂಘಟನೆಗಳು ಯಾವುದೇ ಕಾರಣಕ್ಕೂ ಒಡೆಯಬಾರದು. ಒಗ್ಗಟ್ಟಿನಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು.
-ದುಗೇಶ್‌, ಚಿತ್ರದುರ್ಗ

ಸ್ವತ್ಛ ಸರ್ವೇಕ್ಷಣ್‌ನಲ್ಲಿ ಉತ್ತಮ ರ್‍ಯಾಂಕಿಂಗ್‌ ಪಡೆಯಬೇಕೆಂಬ ಉದ್ದೇಶದಿಂದ ಎರಡು ತಿಂಗಳಿಂದ ಪೌರಕಾರ್ಮಿಕರಿಗೆ ರಜೆ ನೀಡುತ್ತಿಲ್ಲ. ಪೌರಕಾರ್ಮಿಕ ಹುದ್ದೆಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವನ್ನು ನೇಮಿಸಿಕೊಳ್ಳುತ್ತಿದ್ದಾರೆ.
-ನಾಗರಾಜ್‌, ಕುಂದಾಪುರ

ಪೌರಕಾರ್ಮಿಕರ ಮೇಲೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಿದಕ್ಕೆ ಅಧಿಕಾರಿಗಳು ಸುಳ್ಳು ಪ್ರಕರಣ ದಾಖಲಿಸಿದ್ದು, ಮೂರು ತಿಂಗಳಿನಿಮದ ವೇತನ ನೀಡಿಲ್ಲ.
-ವಿಜಯ್‌, ಧಾರವಾಡ

ಪೌರಕಾರ್ಮಿಕರಲ್ಲದವರು ಕಾಯಂ ಪೌರಕಾರ್ಮಿಕರಾಗಿ ನೇಮಕವಾಗುತ್ತಿದ್ದಾರೆ. ಅದನ್ನು ಪ್ರಶ್ನಿಸಿದರೆ ಕೊಲೆ ಬೆದರಿಕೆ ಹಾಕುತ್ತಾರೆ. ಅದಕ್ಕೂ ಜಗ್ಗದಿದ್ದರೆ ಹಣದ ಅಮೀಷವೊಡ್ಡುತ್ತಾರೆ. ನಕಲಿ ಪೌರಕಾರ್ಮಿಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು.
-ಕೃಷ್ಣಪ್ಪ, ಪೌರಕಾರ್ಮಿಕ ಮುಖಂಡ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.