ಪ.ಬಂ. ರಾಜ್ಯಪಾಲರೊಂದಿಗೆ ರಾಜನಾಥ್ ಮಾತುಕತೆ : MHA ತೀವ್ರ ನಿಗಾ
Team Udayavani, Feb 4, 2019, 6:28 AM IST
ಹೊಸದಿಲ್ಲಿ : ಸಿಬಿಐ ವರ್ಸಸ್ ಮಮತಾ ಪ್ರಕರಣ ಬಿಸಿ ಏರುತ್ತಿರುವ ನಡುವೆಯೇ ಇಂದು ಸೋಮವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪಶ್ಚಿಮ ಬಂಗಾಲ ರಾಜ್ಯಪಾಲ ಕೇಸರಿ ನಾಥ ತ್ರಿಪಾಠಿ ಅವರೊಂದಿಗೆ ಮಾತನಾಡಿದ್ದಾರೆ. ಅಂತೆಯೇ ಕೇಂದ್ರ ಗೃಹ ಸಚಿವಾಲಯ ರಾಜ್ಯ ರಾಜಧಾನಿಯಲ್ಲಿನ ಪರಿಸ್ಥಿತಿ ಮೇಲೆ ತೀವ್ರ ನಿಗಾ ಇರಿಸಿದೆ.
ಬಹು ಕೋಟಿ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಕೋಲ್ಕತ ಪೊಲೀಸ್ ಕಮಿಷನರ್ ಇಲೆಕ್ಟ್ರಾನಿಕ್ ಸಾಕ್ಷ್ಯವನ್ನು ನಾಶ ಮಾಡಿದ್ದಾರೆ ಎಂಬ ಸಿಬಿಐ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುವುದಕ್ಕೆ ತಡೆ ಒಡ್ಡಲಾಯಿತೆಂಬ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ.ಬಂ. ರಾಜ್ಯಪಾಲರೊಡನೆ ಮಾತುಕತೆ ನಡೆಸಿರುವುದು ಪ್ರಮುಖ ರಾಜಕೀಯ ಬೆಳವಣಿಗೆ ಎಂದು ತಿಳಿಯಲಾಗಿದೆ.
ಸಿಬಿಐ ಅಧಿಕಾರಿಗಳು ನಿನ್ನೆ ಭಾನುವಾರ ಕೋಲ್ಕತದಲ್ಲಿ ತಮ್ಮ ತನಿಖಾ ಕರ್ತವ್ಯವನ್ನು ನಿರ್ವಹಿಸುವಾಗ ಅವರ ವೈಯಕ್ತಿಕ ಸುರಕ್ಷೆಗೆ ಸುರಕ್ಷೆಗೆ ಬೆದರಿಕೆ ಎದುರಾದ ಹಿನ್ನೆಲೆಯಲ್ಲಿ ಕೋಲ್ಕತದಲ್ಲಿನ ಸಿಬಿಐ ಕಾರ್ಯಾಲಯ ಮತ್ತು ಸಿಬಿಐ ಅಧಿಕಾರಿಗಳ ನಿವಾಸಗಬಿಗà ಭದ್ರತೆ ಒದಗಿಸಲು ಕೇಂದ್ರ ಪಡೆಗಳನ್ನು ನಿಯೋಜಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿತು.
ಕೋಲ್ಕತದಲ್ಲಿ ನಡೆದಿರುವ ವಿದ್ಯಮಾನಗಳು ದುರದೃಷ್ಟಕರ ಮತ್ತು ಅಭೂತಪೂರ್ವ ಎಂದು ರಾಜನಾಥ್ ಸಿಂಗ್, ರಾಜ್ಯಪಾಲರ ಜತೆಗಿನ ಮಾತುಕತೆಯಲ್ಲಿ ಹೇಳಿದರು.
ಇದಕ್ಕೆ ಉತ್ತರವಾಗಿ ರಾಜ್ಯಪಾಲ ತ್ರಿಪಾಠಿ ಅವರು ತಾನು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾ ನಿರ್ದೇಶಕರನ್ನು (ಡಿಜಿಪಿ) ಕರೆಸಿಕೊಂಡ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.