ಎಂಡೋ ಸಂತ್ರಸ್ತರಿಗೆ ಪ್ರತ್ಯೇಕ ಯೋಜನೆ : ಸಚಿವೆ ಶೈಲಜಾ


Team Udayavani, Feb 5, 2019, 12:40 AM IST

04ksde1.jpg

ಕಾಸರಗೋಡು: ಸಾಮಾಜಿಕ ನ್ಯಾಯ ಇಲಾಖೆ ವ್ಯಾಪ್ತಿಯಲ್ಲಿ ಎಂಡೋ ಸಲ್ಫಾನ್‌ ಸಂತ್ರಸ್ತರಿಗೆ ಪ್ರತ್ಯೇಕ ಯೋಜನೆ ಜಾರಿ ಗೊಳಿಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಭರವಸೆ ನೀಡಿದರು.

ಕಾಂಞಂಗಾಡಿನಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ “ಅಮ್ಮ ಮತ್ತು ಮಗು’ ಎಂಬ ಹೆಸರಿನ ಆಸ್ಪತ್ರೆಗೆ ಶಿಲಾನ್ಯಾಸ ನಡೆಸಿ, ತದನಂತರ ಕಾಂಞಂಗಾಡ್‌ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.

ಮುಳಿಯಾರಿನಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಪುನರ್ವಸತಿ ಈ ವರ್ಷವೇ ಪೂರ್ತಿಗೊಳ್ಳಲಿದೆ. 6 ಬಡ್ಸ್‌ ಶಾಲೆಗಳ ಉದ್ಘಾಟನೆ ಈ ವರ್ಷವೇ ನಡೆಯಲಿದೆ ಎಂದವರು ಹೇಳಿದರು.ಆದ್ರìಂ ಯೋಜನೆ ಮೂಲಕ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿ ಸುಧಾರಿಸಿದೆ. ಎಲ್ಲ ಪ್ರಾಥಮಿಕ ಕೇಂದ್ರಗಳೂ ಕುಟುಂಬ ಆರೋಗ್ಯ ಕೇಂದ್ರಗಳಾಗಿ ಚಟುವಟಿಕೆಗೆ ಸಿದ್ಧಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಯತ್ನಿಸುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ 7 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕುಟುಂಬ ಆರೋಗ್ಯ ಕೇಂದ್ರಗಳಾಗಿ ಭಡ್ತಿ ಪಡೆದಿವೆ. 22 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಶೀಘ್ರದಲ್ಲೇ ಕುಟುಂಬ ಆರೋಗ್ಯ ಕೇಂದ್ರಗಳಾಗಿ ಮಾರ್ಪಡುವ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾಂಞಂಗಾಡ್‌ ಜಿಲ್ಲಾ ಆಸ್ಪತ್ರೆಯಲ್ಲಿ ಲ್ಯಾಬ್‌ ಮಂಜೂರು ಮಾಡಲಾಗಿದೆ. ಇದರ ಚಟುವಟಿಕೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಜಾಗದ ಕೊರತೆಯಿದ್ದುದನ್ನು ಈಗಾಗಲೇ ಪರಿಹರಿಸಲಾಗಿದೆ. ಹೆರಿಗೆ ಚಿಕಿತ್ಸೆ ಸಂಬಂಧ “ಲಕ್ಷ Â’ ಯೋಜನೆ ಅಂಗವಾಗಿ ಕಾಂಞಂಗಾಡ್‌ ಜಿಲ್ಲಾ ಆಸ್ಪತ್ರೆ ಮತ್ತು ಕಾಸರಗೋಡು ಜನರಲ್‌ ಆಸ್ಪತ್ರೆಯಲ್ಲಿ ಒಂದು ಕೋಟಿ ರೂ.ನ ಯೋಜನೆ ಜಾರಿಗೊಳಿಸಲಾಗುವುದು ಎಂದರು.

ಜಿಲ್ಲೆಯ ಆರೋಗ್ಯ ವಲಯದಲ್ಲಿ 114 ಹುದ್ದೆಗಳಲ್ಲಿ ನೇಮಕಕ್ಕೆ ಅನುಮತಿ ನೀಡಲಾಗಿದೆ. ವೈದ್ಯರ ಸಹಿತ 36 ನೂತನ ಹುದ್ದೆಗಳಿಗೆ ನೇಮಕಾತಿ ಈಗಾಗಲೇ ನಡೆದಿದೆ. ಸಮೀಪ ವರ್ಷಗಳಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಬೃಹತ್‌ ಮಟ್ಟದ ಅಭಿವೃದ್ಧಿ ನಡೆದಿವೆ. ಈಗ ಮ್ಯಾಮೋಗ್ರಾಂ, ಟ್ರೋಮೋಕೇರ್‌, ಪಾಲಿಯೇಟಿವ್‌ ಸ್ಪೆಷಲ್‌ ಕೇರ್‌ ಇತ್ಯಾದಿಗಳ ಚಟುವಟಿಕೆಗಳು ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭವಾಗಿದೆ ಎಂದರು.

ಕಂದಾಯ ಸಚಿವ ಇ. ಚಂದ್ರಶೇಖರನ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌, ಪುಲ್ಲೂರು-ಪೆರಿಯ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾರದಾ ಎಸ್‌. ನಾಯರ್‌, ಕಾಂಞಂಗಾಡ್‌ ನಗರಸಭೆ ಉಪಾಧ್ಯಕ್ಷೆ ಎಸ್‌. ಸುಲೈಖಾ, ವಿವಿಧ ಕ್ಷೇತ್ರಗಳ ಗಣ್ಯರಾದ ಗೋವಿಂದನ್‌ ಪಳ್ಳಿಕಾಪಿಲ್‌, ಕೆ. ಮಹಮ್ಮದ್‌ ಕುಂಞಿ, ನೌಫಲ್‌ ಕಾಂಞಂಗಾಡ್‌, ಕುರ್ಯಾಕೋಸ್‌ ಪ್ಲಾಪರಂಬಿಲ್‌, ಅಬ್ರಾಹಂ ತೋಣಕ್ಕರ, ಜೋರ್ಜ್‌ ಪೈನಾಪಳ್ಳಿ, ಬಿನ್‌ ಟೆಕ್‌ ಅಬ್ದುಲ್ಲ ಮೊದಲಾದವರು ಉಪಸ್ಥಿತರಿದ್ದರು.
ಕಾಂಞಂಗಾಡು ನಗರಸಭೆ ಅಧ್ಯಕ್ಷ ವಿ.ವಿ. ರಮೇಶನ್‌ ಸ್ವಾಗತಿಸಿದರು. ಜಿಲ್ಲಾ ಪ್ರಭಾರ ವೈದ್ಯಾಧಿಕಾರಿ  ಎಂ.ವಿ. ರಾಮದಾಸ್‌ ವಂದಿಸಿದರು.

ಹಿಂದೆ ಎಂಡೋಸಲ್ಫಾನ್‌ ಸಂತ್ರಸ್ತರ 50 ಸಾವಿರ ರೂ. ವರೆಗಿನ ಸಾಲ ಮನ್ನಾ ಮಾಡಲಾಗಿತ್ತು. ಆದರೆ ಈಗ 3 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಲಾಗಿದೆ. ಮಳೆಗಾಲದ ರೋಗ, ಅಂಟುರೋಗ ಇತ್ಯಾದಿಗಳ ನಿಯಂತ್ರಣ ನಿಟ್ಟಿನಲ್ಲಿ ಆರೋಗ್ಯ ಜಾಗೃತಿ ಸೇನೆಯ ಚಟುವಟಿಕೆಗಳನ್ನು ಚುರುಕುಗೊಳಿಸಲಾಗಿದೆ. 20 ಮನೆಗಳಿಗೆ ಒಂದು ಸೇನೆ, 20 ಅಂಗಡಿಗಳಿಗೆ ಒಂದು ಸೆೇನೆ ಎಂಬ ರೀತಿ ಇವರನ್ನು ವಿನ್ಯಾಸಗೊಳಿಸಲಾಗಿದೆ. ಮುಂದಿನ ಮೂರು-ನಾಲ್ಕು ವರ್ಷಗಳಲ್ಲಿ ಇದರ ಫಲ ಕಂಡುಬರಲಿದೆ ಎಂದು ಸಚಿವೆ ಶೈಲಜಾ ನುಡಿದರು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.