ಮಣಿಪಾಲದಲ್ಲಿ ಧೂಳಿನ ಸಮಸ್ಯೆ


Team Udayavani, Feb 8, 2019, 1:00 AM IST

doolu.jpg

ಉಡುಪಿ: ಕಡಿಯಾಳಿಯಿಂದ ಪರ್ಕಳದವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಪರ್ಕಳದಿಂದ ಮಣಿಪಾಲದವರೆಗೆ ಧೂಳಿನ ಸಮಸ್ಯೆ ಇದಿರಾಗಿದೆ. ವಿಶೇಷವಾಗಿ ಮಣಿಪಾಲ ಬಸ್‌ ನಿಲ್ದಾಣ ಪರಿಸರದಲ್ಲಿ ಧೂಳಿನ ಸಮಸ್ಯೆ ವಿಪರೀತವಾಗಿದೆ.

ಮೊದಲೇ ಮಣಿಪಾಲಕ್ಕೆ ಆಗಮಿಸುವವರಲ್ಲಿ ಬಹುತೇಕರು ರೋಗಿಗಳು. ಧೂಳಿನ ಸಮಸ್ಯೆಯಿಂದ ರೋಗಿಗಳ ರೋಗ ಮತ್ತಷ್ಟು ಉಲ್ಬಣವಾಗುವ ಸಾಧ್ಯತೆ ಇದೆ. ವಾಹನ ಸವಾರರು ಈ ಬಗ್ಗೆ ದೂರಿಕೊಳ್ಳುತ್ತಿದ್ದಾರೆ.

ರಸ್ತೆ ಅಗಲಗೊಳ್ಳುವ ಕಾಮಗಾರಿಯಲ್ಲಿ ರಸ್ತೆ ಅಗೆತ, ಈಗಾಗಲೇ ಇರುವ ಹೊಂಡಗುಂಡಿಗಳು, ಹೊಸ ಕಾಂಕ್ರಿಟ್ ಕಾಮಗಾರಿ ಈ ಮೂರೂ ತರಹದ ಕಾಮಗಾರಿ ಪ್ರಕ್ರಿಯೆ ಧೂಳಿನ ಸಮಸ್ಯೆಗೆ ಕಾರಣಗಳಾಗಿವೆ. ಧೂಳು ಏಳದಂತೆ ಆಗಾಗ್ಗೆ ನೀರು ಸಿಂಪಡಿಸುವುದೇ ಇದಕ್ಕಿರುವ ಪರಿಹಾರವಾಗಿದೆ. ಬೆಳಗ್ಗೆ ಬೇಗ ಆಯಾ ಅಂಗಡಿ ಮಾಲಕರು ನೀರು ಸಿಂಪಡಿಸುತ್ತಾರೆ. ಆದರೆ ಅದು ಸಾಕಾಗುತ್ತಿಲ್ಲ. ಧೂಳಿನ ಸಮಸ್ಯೆ ತಾತ್ಕಾಲಿಕವಾದರೂ ಪ್ರಸ್ತುತ ವಾಹನ ಚಾಲಕರು, ಪಾದಚಾರಿಗಳು ಅನುಭವಿಸುವುದು ಕಷ್ಟಸಾಧ್ಯವಾಗಿದೆ. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಕೆಲವೊಮ್ಮೆ ದಾರಿ ಕಾಣದಷ್ಟು ಕಷ್ಟವಾಗುತ್ತಿದೆ. ಇದರಿಂದಾಗಿ ಬಹುತೇಕರು ಮುಖಕ್ಕೆ ಅಂಗವಸ್ತ್ರವನ್ನು ಕಟ್ಟಿಕೊಂಡು ತೆರಳುತ್ತಿದ್ದಾರೆ. ರಾ.ಹೆ. ಅಧಿಕಾರಿಗಳು ಗುತ್ತಿಗೆದಾರರಿಗೆ ಸ್ಪಷ್ಟ ನಿರ್ದೇಶನವನ್ನು ಕೊಡಬೇಕಾಗಿದೆ. ಗುತ್ತಿಗೆ ನಿರ್ವಹಿಸುವವರು ದಿನದಲ್ಲಿ ಮೂರು ಬಾರಿಯಾದರೂ ನೀರು ಸಿಂಪಡಿಸುವುದು ಅಗತ್ಯವಾಗಿದೆ ಎಂಬ ಅಭಿಪ್ರಾಯ ವಾಹನ ಚಾಲಕರದು.

ಪರ್ಕಳದಿಂದ ಕಡಿಯಾಳಿವರೆಗೆ 10 ಕಿ.ಮೀ. ಹೆದ್ದಾರಿಯನ್ನು 98.46 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ‘ನೀರು ಸಿಂಪಡನೆ ನಡೆಯುತ್ತಿದೆ. ಸಮಸ್ಯೆ ಮುಖ್ಯವಾಗಿ ರಸ್ತೆ ಬದಿಯ ಅಂಗಡಿಯವರಿಗೆ ಆಗುತ್ತಿದೆ. ಸಮಸ್ಯೆಯನ್ನು ಕಡಿಮೆ ಮಾಡಲು ಪ್ರಯತ್ನಿ ಸುತ್ತೇವೆ’ ಎಂದು ರಾ.ಹೆ. ಎಂಜಿನಿಯರ್‌ ಮಂಜುನಾಥ ನಾಯಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.