ಆನ್‌ಲೈನ್‌ ಉದ್ಯೋಗ, ತರಬೇತಿ: ವಂಚನೆ; ದೂರು


Team Udayavani, Feb 9, 2019, 12:30 AM IST

0802udsb1.jpg

ಉಡುಪಿ: ಆನ್‌ಲೈನ್‌ ಮೂಲಕ ಉದ್ಯೋಗ ಮತ್ತು ತರಬೇತಿ ನೀಡುವುದಾಗಿ ಹೇಳಿ ವಂಚಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಓರ್ವರು ಶುಕ್ರವಾರ ಜರಗಿದ ಪೊಲೀಸ್‌ ಫೋನ್‌-ಇನ್‌ನಲ್ಲಿ ಮನವಿ ಮಾಡಿದ್ದಾರೆ.

“ಆನ್‌ಲೈನ್‌ನಲ್ಲಿ ಡಾಟಾ ಎಂಟ್ರಿ ಬಗ್ಗೆ ಉದ್ಯೋಗ ನೀಡುತ್ತೇವೆ. ಅದಕ್ಕೆ ಬೇಕಾದ ತರಬೇತಿಯನ್ನು ಕೂಡ ಕೊಡುತ್ತೇವೆ. ತರಬೇತಿಗಾಗಿ ನಿರ್ದಿಷ್ಟ ಹಣ ಪಾವತಿ ಮಾಡಬೇಕು ಎಂದು ಹೇಳಿದ್ದರು. ಅದರಂತೆ 3,900 ರೂ. ಪಾವತಿಸಿದ್ದೇನೆ. ಅನಂತರ ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆದರೆ ತರಬೇತಿಯನ್ನಾಗಲಿ ಉದ್ಯೋಗವನ್ನಾಗಲಿ ನೀಡಿಲ್ಲ’ ಎಂದು ಕರೆ ಮಾಡಿದವರು ದೂರಿದರು. ಈ ಬಗ್ಗೆ ಸೆನ್‌ ಪೊಲೀಸರಿಗೆ ದೂರು ನೀಡುವಂತೆ ಪೊಲೀಸ್‌ ಅಧಿಕಾರಿಗಳು ಸೂಚಿಸಿದರು.

ಪಿಜಿಯಿಂದ ಸಮಸ್ಯೆ
ಮಹಿಳೆಯೋರ್ವರು ಕರೆ ಮಾಡಿ “ನಗರದ ಕಾಲೇಜೊಂದರ ಬಳಿ ಒಂದೇ ಕಟ್ಟಡದಲ್ಲಿ  ಹುಡುಗ ಮತ್ತು ಹುಡುಗಿಯರ ಪಿಜಿಗಳಿವೆ. ಕೆಲವು ಹುಡುಗರು ಬೈಕ್‌ನಲ್ಲಿ ಬಂದು ಹುಡುಗಿಯರನ್ನು ಬಿಟ್ಟು ಹೋಗುತ್ತಾರೆ. ಇದು ಪರಿಸರದಲ್ಲಿ ಮುಜುಗರ ಸೃಷ್ಟಿಸುತ್ತಿದೆ. ಅನೈತಿಕವಾಗಿ ನಡೆದುಕೊಳ್ಳುವ ಆತಂಕವೂ ಇದೆ’ ಎಂದು ಹೇಳಿದರು.

ಆರೋಗ್ಯ ಕೇಂದ್ರ ಬಂದ್‌
ಪಡುಕರೆ ಪ್ರಾಥಮಿಕ ಆರೋಗ್ಯ ಕೇಂದ್ರ 1 ವರ್ಷದಿಂದ ಬಂದ್‌ ಆಗಿದೆ. ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಲ್ಪೆ-ಪಡುಕರೆ ರಸ್ತೆಯಲ್ಲಿ ದಾರಿದೀಪ ಇಲ್ಲದೆ ಸಮಸ್ಯೆಯಾಗಿದೆ. ರಸ್ತೆ ಬದಿ ಹುಲ್ಲು ಬೆಳೆದು ತೊಂದರೆಯಾಗಿದೆ ಎಂದು ಸ್ಥಳೀಯರೋರ್ವರು ಕರೆ ಮಾಡಿ ಅಹವಾಲು ಸಲ್ಲಿಸಿದರು.

ವಿರುದ್ಧ ದಿಕ್ಕಿನಲ್ಲಿ ಬಂದ ವಾಹನಗಳ ವಶ
ರಾಷ್ಟ್ರೀಯ ಹೆದ್ದಾರಿ 66ರ ಸುಪ್ರೀಂ ಫೀಡ್ಸ್‌ ಬಳಿ, ಕೃಷ್ಣಾ ಮಿಲ್ಕ್ ಡೇರಿ, ಹ್ಯಾಂಗ್ಯೋ ಐಸ್‌ಕ್ರೀಂ ಮೊದಲಾದೆಡೆಗಳಿಂದ ಘನವಾಹನಗಳು ಕೂಡ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತವೆ ಎಂದು ಓರ್ವರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್‌ ಅಧಿಕಾರಿಗಳು “ಈ ರೀತಿ ಸಂಚರಿಸುವ ಕೆಲವು ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಮುಂದುವರಿಸಲಾಗುವುದು’ ಎಂದು ಹೇಳಿದರು.

ಎಸ್‌ಪಿ ಲಕ್ಷ್ಮಣ ಬ.ನಿಂಬರಗಿ ಮತ್ತು ಎಎಸ್‌ಪಿ ಕುಮಾರಚಂದ್ರ ಅವರು ಫೋನ್‌-ಇನ್‌ ಕಾರ್ಯಕ್ರಮ ನಡೆಸಿಕೊಟ್ಟರು. 

ಇತರ ದೂರು-ಕರೆಗಳು
– ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ಮೂಗಿಯೋರ್ವರಿಂದ ಸಮಸ್ಯೆಯಾಗಿದೆ.
– ಉಡುಪಿ ನಾರ್ತ್‌ ಶಾಲೆ ಸಮೀಪದ ಕಾಳಿಂಗ ಮರ್ದನ ರಸ್ತೆಯಲ್ಲಿ  ಪಾರ್ಕಿಂಗ್‌ ನಿಷೇಧಿಸಿ ಅಳವಡಿಸಿದ ಬ್ಯಾರಿಕೇಡ್‌ ತೆರವುಗೊಳಿಸಿರುವುದರಿಂದ ತೊಂದರೆಯಾಗಿದೆ.
– ಮಂದಾರ್ತಿ ಅಲ್ತಾರಿನಲ್ಲಿ  ಅಕ್ರಮ ಗಣಿಗಾರಿಕೆ ನಡೆಯುತ್ತಿದೆ.
– ಉಡುಪಿ ನಗರದ ಮಸೀದಿ ಬಳಿ ಪುಟ್‌ಪಾತ್‌ನಲ್ಲಿಯೇ ವ್ಯಾಪಾರ ನಡೆಯುತ್ತಿರುವುದರಿಂದ ಪಾದಚಾರಿಗಳು ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
– ಕೆರಾಡಿ ಪರಿಸರದ ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ.
– ಉಡುಪಿಯಿಂದ ಶಿರ್ವ-ಬೆಳ್ಮಣ್‌ ಕಡೆಗೆ ಹೋಗುವ ಬಸ್‌ಗಳು ಉದ್ಯಾವರ ಪೇಟೆಗೆ ಬಾರದೆ ಹೆದ್ದಾರಿಯಲ್ಲಿಯೇ ಸಂಚರಿಸುತ್ತಿರುವುದರಿಂದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ತೊಂದರೆಯಾಗಿದೆ.
– ಬ್ರಹ್ಮಾವರ ಆಕಾಶವಾಣಿ ಬಳಿ ರಸ್ತೆಯಲ್ಲಿ ಕಾರೊಂದು ಹಲವು ಸಮಯದಿಂದ ರಿಪೇರಿ ಸ್ಥಿತಿಯಲ್ಲಿಯೇ ಇದೆ.
– ಬ್ರಹ್ಮಾವರದ ಧರ್ಮಾವರ ಬಳಿ ಸರ್ವೀಸ್‌ ರಸ್ತೆಯಲ್ಲಿ ಎಕ್ಸ್‌ಪ್ರೆಸ್‌ ಬಸ್‌ಗಳ ಓಡಾಟದಿಂದ ತೊಂದರೆಯಾಗಿದೆ.
– ನಗರದ ಕೆಲವೆಡೆ ಬಸ್‌ ನಿಲುಗಡೆ ಇಲ್ಲದ ಸ್ಥಳಗಳಲ್ಲಿಯೂ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುತ್ತಿದೆ. 
– ಕಲ್ಸಂಕ ಹಾಗೂ ಕರಾವಳಿ ಜಂಕ್ಷನ್‌ಗಳಲ್ಲಿ ಸಿಗ್ನಲ್‌ ಲೈಟ್‌ ಅಳವಡಿಸಬೇಕು.
– ಕಾರ್ಕಳ ತಾಲೂಕಿನ ಗ್ರಾ.ಪಂ.ವೊಂದರ ಪಿಡಿಒ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. 
– ಅಲೆವೂರು ಕ್ರೈಸ್ಟ್‌ ಶಾಲೆಯ ಬಳಿ ಹಲವು ಸಮಯದಿಂದ ಬಸ್‌ವೊಂದು ನಿಂತಿದೆ. ಇದರಿಂದ ಸಂಚಾರಕ್ಕೆ ತೊಡಕಾಗಿದೆ.
– ಆದಿ ಉಡುಪಿ ಸಂತೆ ಮಾರುಕಟ್ಟೆ ಬಳಿ ಮಾರುಕಟ್ಟೆಯಿಂದ ಹೊರಗೆ ರಸ್ತೆ ಬದಿ ವ್ಯಾಪಾರ ನಡೆಸುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ.
– ಮಣಿಪಾಲದ ಕೆಲವು ಅಂಗಡಿಗಳಲ್ಲಿ ಅಕ್ರಮವಾಗಿ ಬೀಡಿ, ಸಿಗರೇಟುಗಳನ್ನು ಮಾರಾಟ ಮಾಡಲಾಗುತ್ತಿದೆ. 
– ಅಂಗವಿಕಲರಿಗೆ ಬಸ್‌ಗಳಲ್ಲಿ ಮೀಸಲಿಟ್ಟಿರುವ ಆಸನವನ್ನು ಅವರಿಗೆ ನೀಡುವಂತೆ ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.