ಬಾಲಕೃಷ್ಣ ನಾಯಕ್‌ಗೆ ಕಲ್ಕೂರ ಪ್ರಶಸ್ತಿ


Team Udayavani, Feb 15, 2019, 12:30 AM IST

1.jpg

ಉಪ್ಪೂರು ತೆಂಕಬೆಟ್ಟುವಿನ ಶ್ರೀ ವಿನಾಯಕ ಯಕ್ಷಗಾನ ಸಂಘ ಇದರ ಸ್ಥಾಪಕ ದಿ.ಯು. ಶಿವರಾಮ ಕಲ್ಕೂರ ಅವರ ಸ್ಮರಣಾರ್ಥ ಪ್ರಶಸ್ತಿಯನ್ನು ಯಕ್ಷಗಾನದ ಪ್ರಸಾದನ ಕಲೆಯಲ್ಲಿ ಪಳಗಿದ ಬ್ರಹ್ಮಾವರ ಹಂದಾಡಿಯ ಬಾಲಕೃಷ್ಣ ನಾಯಕ್‌ ಇವರಿಗೆ ಫೆ.16ರಂದು ಪ್ರದಾನ ಮಾಡಲಾಗುತ್ತಿದೆ. 

 ಕಲಾವಿದರಿಗೆ ಮೆರುಗು ನೀಡುವ ವಿವಿಧ ವೇಷಭೂಷಣಗಳನ್ನು ತಯಾರಿಸಿ ಪ್ರಸಾದನ ಕಲೆಯಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರು ಯಕ್ಷಗಾನ ಕ್ಷೇತ್ರದಲ್ಲಿ ಬಾಲಣ್ಣನೆಂದೇ ಖ್ಯಾತಿಯಾಗಿರುವ ಹಂದಾಡಿಯ ಬಾಲಕೃಷ್ಣ ನಾಯಕ್‌. ವೇಷಭೂಷಣ ತಯಾರಕ ಹಂದಾಡಿಯ ಸುಬ್ಬಣ್ಣ ಭಟ್‌ ಇವರ ಅಜಪುರ ಯಕ್ಷಗಾನ ಸಂಘದಲ್ಲಿ ವೇಷಭೂಷಣವನ್ನು ಕಲಿತರು. ಬಳಿಕ 1993ರಲ್ಲಿ ತಮ್ಮದೇ ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಪ್ರಸ್ತುತ ನೂರಾರು ಸಂಘ-ಸಂಸ್ಥೆಗಳಿಗೆ ಮುಖವರ್ಣಿಕೆ, ವೇಷಭೂಷಣ ಸರಬರಾಜು ಮಾಡುತ್ತಿದ್ದಾರೆ. 

ಮಂದಲೆ, ಕರ್ಣ ಕುಂಡಲ, ಕೇದಿಗೆ, ಕೊರಳು ಅಡ್ಡಿಗೆ, ಭುಜಕೀರ್ತಿ, ಎದೆಕಟ್ಟು, ಕೈಚಿನ್ನ, ತೋಳ್‌ ಚಿನ್ನ, ವೀರ ಕಸೆ, ಕಾಲ್‌ಕಡಗ, ಗೆಜ್ಜೆ ತಾವರೆ, ತುರಾಯಿ ಹೀಗೆ ಅನೇಕ ಪರಿಕರಗಳನ್ನು ಮನೆಯಲ್ಲಿಯೇ ತಯಾರಿಸಿ ಪ್ರಸಾದನ ಕಲೆಯಿಂದ ಯಕ್ಷಗಾನವನ್ನು ಆಕರ್ಷಕವಾಗಿ ಮಾಡಿದ್ದಾರೆ. ಯಕ್ಷಗಾನದ ವೇಷಭೂಷಣಗಳಲ್ಲಿಯೂ ಇಂದು ಆಧುನಿಕತೆಯನ್ನು ಕಾಣುತ್ತಿದ್ದರೂ, ಬಣ್ಣ ಹಚ್ಚುವ ಕಲೆಯಲ್ಲಿ ಏನೂ ಬದಲಾವಣೆಯಾಗಿಲ್ಲ ಎಂದು ಹೇಳುತ್ತಾರೆ. 

ಪ್ರಸಾದನ ಕಲೆಯಲ್ಲಿ ಪಳಗಿರುವ ನಾಯಕ್‌ ಅವರು ಈ ಕಲೆಯು ತನ್ನ ಮುಂದಿನ ಪೀಳಿಗೆಗೂ ಉಳಿಯಬೇಕು ಎನ್ನುವ ಸಲುವಾಗಿ ತಮ್ಮ ಮಕ್ಕಳಾದ ನಾಗಭೂಷಣ, ಮಿಥುನ್‌ ಮತ್ತು ಜಯಂತ್‌ ಅವರಲ್ಲಿಯೂ ಯಕ್ಷಗಾನದ ಪ್ರಸಾದನ ಕಲೆಯಲ್ಲಿ ಆಸಕ್ತಿ ಮೂಡಿಸಿ ಅವರೂ ಈ ಕಲೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿದ್ದಾರೆ.            

ರಾಘವೇಂದ್ರ ಭಟ್‌ ಮರ್ಣೆ

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.