ವಿಫ‌ಲ ಕಾರ್ಯಾಚರಣೆ:ಪೆರ್ಣಂಕಿಲದಲ್ಲಿ ಹೆಣ್ಣು ಚಿರತೆ ಸಾವು


Team Udayavani, Feb 16, 2019, 12:30 AM IST

chirathe01.jpg

ಮಣಿಪಾಲ: ಉಡುಪಿ ತಾಲೂಕಿನ ಪೆರ್ಣಂಕಿಲ ಸಮೀಪದ ಅಂಗಾರಕಟ್ಟೆ ಕೇನೆಕುಂಜದಲ್ಲಿ ಯಾರೋ ಇಟ್ಟಿದ್ದ ಉರುಳಿಗೆ 4 ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಸಿಲುಕಿದ್ದು, ಉರುಳು ಬಿಡಿಸಿ ಬಲೆಯಲ್ಲಿ  ಸೆರೆ ಹಿಡಿಯುವಷ್ಟರಲ್ಲಿ ಸಾವನ್ನಪ್ಪಿದ ಘಟನೆ ಫೆ. 15ರಂದು ಸಂಭವಿಸಿದೆ. 

ಉರುಳಿನಲ್ಲಿ ಚಿರತೆ ಸಿಲುಕಿರುವ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಬೆಳಗ್ಗೆ ಮಾಹಿತಿ ನೀಡಿದ್ದು ಅವರು ಖಾಸಗಿ ವಾಹನದಲ್ಲಿ ಬೋನನ್ನು ತರಿಸಿಕೊಂಡು ಸ್ಥಳಕ್ಕಾಗಮಿಸಿದರು. 

ಅರಿವಳಿಕೆ ಇಲ್ಲದೆ ಸಮಸ್ಯೆ
ಚಿರತೆಯ ಸೊಂಟ ಉರುಳಿಗೆ ಸಿಲುಕಿದ್ದು ಅರಿವಳಿಕೆ ತಜ್ಞರು ಲಭ್ಯರಿಲ್ಲದ ಕಾರಣ ಬಲೆ ಬೀಸಿ ಚಿರತೆಯನ್ನು ಹಿಡಿದು ಉರುಳು ಬಿಡಿಸಬೇಕಾದ ಅನಿವಾರ್ಯತೆ ಅರಣ್ಯಾಧಿಕಾರಿಗಳದ್ದು. ಅರಣ್ಯಾಧಿಕಾರಿಗಳು ಅರ್ಧ ಗಂಟೆಗೂ ಹೆಚ್ಚು ಕಾಲ ಚಿರತೆಯನ್ನು ಹಿಡಿಯುವ ಪ್ರಯತ್ನ ಮಾಡಿದರೂ ಉರುಳಿನ ಬಿಗಿತ ಹಾಗೂ ಅರಿವಳಿಕೆ ಇಲ್ಲದೆ ಚಿರತೆ ಕೊಸರಾಡುತ್ತಿದ್ದುದರಿಂದ ಸೋತು ಸ್ಥಳದಲ್ಲೇ ಸಾವನ್ನಪ್ಪಿತು. ಗುರುವಾರ ರಾತ್ರಿ ಚಿರತೆ ಉರುಳಿಗೆ ಬಿದ್ದಿರುವ ಸಾಧ್ಯತೆ ಇದ್ದು ಕೊಸರಾಡುತ್ತಿದ್ದುದರಿಂದ ಅದಕ್ಕೆ ಘಾಸಿ ಉಂಟಾಗಿರುವ ಸಾಧ್ಯತೆಯೂ ಇದೆ. 

ಅರಣ್ಯಾಧಿಕಾರಿಗಳು ಚಿರತೆಯ ಶವವನ್ನು ಕೊಂಡೊಯ್ದಿದ್ದು ಮರಣೋತ್ತರ ಪರೀಕ್ಷೆ ಬಳಿಕ ಸುಡಲಿದ್ದಾರೆ ಎಂದು ತಿಳಿದು ಬಂದಿದೆ. 

ಬೋನು ಇಡಲು ಮನವಿ ಮಾಡಿದ್ದರು
ಪರಿಸರದ ನಾಯಿಗಳು ಚಿರತೆಗೆ ಆಹಾರವಾಗುತ್ತಿರುವ ಬಗ್ಗೆ ಸ್ಥಳೀಯರು ತಿಂಗಳ ಹಿಂದೆಯೇ ಅರಣ್ಯ ಇಲಾಖೆ ಗಮನಕ್ಕೆ ತಂದು ಬೋನು ಇರಿಸಲು ಮನವಿ ಮಾಡಿದ್ದರು. ಆದರೆ ಬೋನು ಇರಿಸಿರಲಿಲ್ಲ. ಈಗ ಹಂದಿ ಹಿಡಿಯಲು ಯಾರೋ ಮಾಡಿರಬಹುದಾದ ಉರುಳಿನಲ್ಲಿ ಚಿರತೆ ಸಿಲುಕಿದ್ದು ಸಾವನ್ನಪ್ಪುವಂತಾಗಿದೆ. ಕಾಡಿನಲ್ಲಿ ಆಹಾರವಿಲ್ಲದೆ ಚಿರತೆಗಳು ಊರಿಗೆ ಬಂದು ನಾಯಿಗಳನ್ನು ತಿನ್ನುತ್ತಿರುವ ಘಟನೆಗಳು ಈ ಪರಿಸರದಲ್ಲಿ ಆಗಾಗ ನಡೆಯುತ್ತಿರುತ್ತವೆ.  

ಜಿಲ್ಲೆಯಲ್ಲಿ ಅರಿವಳಿಕೆ ತಜ್ಞರಿಲ್ಲ
ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ದಾಳಿ ನಡೆಸಿದಾಗ, ಉರುಳಿನಲ್ಲಿ ಸಿಲುಕಿದಾಗ ಅಥವಾ ಮನೆ, ಕಟ್ಟಡಗಳನ್ನು ಹೊಕ್ಕಿದಾಗ ಅವುಗಳನ್ನು ಸೆರೆ ಹಿಡಿಯುವುದಕ್ಕೆ ಅರಿವಳಿಕೆ ನೀಡಿ ಪ್ರಜ್ಞೆ ತಪ್ಪಿಸಲು ಉಡುಪಿ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ತಜ್ಞ ಪಶು ವೈದ್ಯರೇ ಇಲ್ಲ. ಅಗತ್ಯವಿದ್ದಾಗ ಮಂಗಳೂರಿನ ಪಿಲಿಕುಳ ಅಥವಾ ಶಿವಮೊಗ್ಗದಿಂದ ತಜ್ಞರನ್ನು ಕರೆಸಿಕೊಳ್ಳಬೇಕಾಗುತ್ತದೆ. ಅಲ್ಲಿಂದ ವೈದ್ಯರು ಬರುವಷ್ಟರಲ್ಲಿ ಇಲ್ಲಿ ಪರಿಸ್ಥಿತಿ ಕೈ ಮೀರಿರುತ್ತದೆ. ಜಿಲ್ಲೆಯಲ್ಲಿ ಒಬ್ಬರಾದರೂ ತಜ್ಞ ಪಶು ವೈದ್ಯರನ್ನು ಈ ನಿಟ್ಟಿನಲ್ಲಿ ತರಬೇತಿ ನೀಡಿ ನೇಲೆಸಲು ಅಧಿಕೃತರು ಸಂಪೂರ್ಣ ವಿಫ‌ಲರಾಗಿದ್ದಾರೆ. ಇದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕಿದೆ. 

ಪಿಲಿಕುಳ ಹಾಗೂ ಶಿವಮೊಗ್ಗದಲ್ಲಿ ಅರಿವಳಿಕೆ ನೀಡಲು ತಜ್ಞ ಪಶುವೈದ್ಯರನ್ನು ನಿಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಅಲ್ಲಿಂದ ವೈದ್ಯರನ್ನು ಕರೆಸಲಾಗುತ್ತದೆ. 
– ಲೋತ್‌ ಜಿ.,ಎಸಿಎಫ್,ಕುಂದಾಪುರ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.