ವಹ್ನಿಕುಲ ಕ್ಷತ್ರಿಯಕ್ಕೆ ಅಭಿವೃದ್ಧಿಗೆ ಮಂಡಳಿಗೆ ಮನವಿ


Team Udayavani, Feb 18, 2019, 7:27 AM IST

vahuikuka.jpg

ಹನೂರು: ಕಳೆದ ಬಜೆಟ್‌ನಲ್ಲಿ ಸವಿತಾ ಸಮಾಜ ಹಾಗೂ ಕ್ರೈಸ್ತರಿಗೆ ಅಭಿವೃದ್ಧಿ ಮಂಡಳಿ ರಚನೆ ಘೋಷಣೆ ಮಾಡಲಾಗಿದೆ. ಹಾಗೆಯೇ ವಹ್ನಿಕುಲ ಕ್ಷತ್ರಿಯಕ್ಕೂ ಅಭಿವೃದ್ಧಿ ಮಂಡಳಿ ರಚಿಸುವಂತೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಗೆ ಮನವಿ ಮಾಡಲಾಗುವುದು ಎಂದು ಸಂಸದ ಆರ್‌. ಧ್ರುವನಾರಾಯಣ್‌ ಹೇಳಿದರು.

ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಭಾನುವಾರ ವಹ್ನಿಕುಲ ಕ್ಷತ್ರಿಯ ಸಮುದಾಯದ ವತಿಯಿಂದ ಆಯೋಜಿಸಿದ್ಧ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಾಗಿರುವ ವಹ್ನಿಕುಲ ಕ್ಷತ್ರಿಯ ಸಮುದಾಯದ ಜನತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ.

ಆಗಾಗಿ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವುದರ ಮೂಲಕ ಸರ್ಕಾರದಿಂದ ದೊರಕುವ ಸವಲತ್ತು ಪಡೆದು ಅಭಿವೃದ್ಧಿ ಹೊಂದಬೇಕು ಎಂದರು. ಕಳೆದ ಬಜೆಟ್‌ನಲ್ಲಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಸವಿತಾ ಸಮಾಜಕ್ಕೆ ಹಾಗೂ ಕ್ರೈಸ್ತರ ಅಭಿವೃದ್ಧಿಗೆ ಮಂಡಳಿ ರಚಿಸುವುದರ ಬಗ್ಗೆ ಘೋಷಣೆ ಮಾಡಿದ್ದಾರೆ. ವಹ್ನಿಕುಲ ಕ್ಷತ್ರಿಯ ಅಭಿವೃದ್ಧಿ ಮಂಡಳಿ ರಚಿಸುವಂತೆ ಸಿಎಂ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಪಿ.ಆರ್‌.ರಮೇಶ್‌ ಸಚಿವರಾಗಬೇಕು: ವಿಧಾನ ಪರಿಷತ್‌ ಸದಸ್ಯರಾಗಿರುವ ಪಿ.ಆರ್‌.ರಮೇಶ್‌ ವಹ್ನಿಕುಲ ಕ್ಷತ್ರಿಯ ಸಮುದಾಯದ ಮುಖಂಡರಾಗಿದ್ದು, ಉತ್ತಮ ವಿಚಾರವಾದಿಯಾಗಿದ್ದಾರೆ. ಇವರು ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ. ಆದರೆ ಇವರು ರಾಜಕೀಯದಲ್ಲಿ ಅವಕಾಶ ವಂಚಿತರಾಗಿದ್ದಾರೆ. ವಹ್ನಿಕುಲ ಕ್ಷತ್ರಿಯ ಅಭಿವೃದ್ಧಿಯಾಗಬೇಕಾದರೆ ಇವರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತರಲಾಗುವುದು ಎಂದು ಹೇಳಿದರು.

ಸಿಎಂಗೆ ಮನವಿ ಮಾಡಲಾಗುವುದು: ಬಲ್ಲಾಳ ಹಾಗೂ ವಹ್ನಿಕುಲ ಕ್ಷತ್ರಿಯ ಸಮುದಾಯದಲ್ಲಿ ಸರ್ಕಾರಿ ನೌಕರಿ ಪಡೆಯುವ ಅಭ್ಯರ್ಥಿಗಳಿಗೆ ಕೆಲವು ತೊಡಕುಗಳಿಂದ ಸಿಂಧುತ್ವ ಪ್ರಮಾಣ ಪ್ರಮಾಣ ಪತ್ರ ನೀಡಲು ತೊಡಕಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ತಂದು ತದ ನಂತರ ಕೇಂದ್ರ ಸರ್ಕಾರದ ಗಮನ ಸೆಳೆಯುವುದತರ ಮೂಲಕ ಸಿಂಧುತ್ವ ಪ್ರಮಾಣ ಪತ್ರ ಕೊಡಿಸಲು ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಶಾಸಕ ಆರ್‌. ನರೇಂದ್ರ ಮಾತನಾಡಿ, ಹನೂರು ಕ್ಷೇತ್ರದಲ್ಲಿ ಹಲವು ಸಮುದಾಯದ ಜನತೆ ವಾಸವಾಗಿದ್ದು, ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಈಗಾಗಲೇ ವಹ್ನಿಕುಲ ಕ್ಷತ್ರಿಯ ಸಮುದಾಯದವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಲಾಗಿದ್ದು, ಜಿಪಂ, ತಾಪಂ ಹಾಗೂ ಗ್ರಾಪಂ ಸದಸ್ಯರಿದ್ದಾರೆ. ಅಲ್ಲದೇ ಈ ಸಮುದಾಯದ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಿದ್ದು, ಕಳೆದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ, ಕಾಂಚಳ್ಳಿ ಹಾಗೂ ಪುದುರಾಮಾಪುರದಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ ಎಂದರು.

ಹಕ್ಕುಪತ್ರ ವಿತರಣೆಗೆ ಅಗತ್ಯ ಕ್ರಮ: ಕಳೆದ 6 ದಶಕದ ಹಿಂದೆ ಗೋಪಿನಾಥಂ ಜಲಾಶಯ ಹೊಡೆದು ಹೋಗಿದ್ದ ವೇಳೆ ಇಲ್ಲಿನ 60-70 ಮನೆಗೆ ನೀರು ನುಗ್ಗಿತ್ತು. ಈ ವೇಳೆ ಕುಟುಂಬಗಳ ಜನರನ್ನು ಜಾಗೇರಿ ಗ್ರಾಮಕ್ಕೆ ಸ್ಥಳಾಂತರಿಸಲಾಗಿತ್ತು. ಗ್ರಾಮದ ಜನರು ಸೇರಿದಂತೆ ಇಲ್ಲಿನ ಜನರು 12.5 ಸಾವಿರ ಎಕರೆ ಅರಣ್ಯ ಪ್ರದೇಶದ ಭೂಮಿಯಲ್ಲಿ ಕೃಷಿ ಮಾಡುತಿದ್ದರು. ಆದರೆ ಕೃಷಿ ಭೂಮಿ ಅರಣ್ಯ ಪ್ರದೇಶಕ್ಕೆ ಒಳಪಟ್ಟಿತ್ತು. ರೈತರು ಹಕ್ಕು ಪತ್ರ ಕೊಡಿಸುವ ಬಗ್ಗೆ ಮನವಿ ಮಾಡಿದ್ದರು. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು,

12.5 ಸಾವಿರ ಎಕರೆ ಅರಣ್ಯ ಭೂಮಿಯಲ್ಲಿ 2.894 ಎಕರೆ ಕೃಷಿ ಭೀಮಿಯನ್ನು ರೈತರಿಗೆ ನೀಡವಂತೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಕುಂಭಕಳಸ ಹೊತ್ತ ಮಹಿಳೆಯರು ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಸಿದರು. ವಹ್ನಿಕುಲ ಕ್ಷತ್ರಿಯ ಸಂಘದ ರಾಜ್ಯಾಧ್ಯಕ್ಷ ಸಿ.ಜಯರಾಜ್‌, ಜಿಪಂ ಅಧ್ಯಕ್ಷೆ ಶಿವಮ್ಮ, ಸದಸ್ಯ ಬಸವರಾಜು, ತಾಪಂ ಅಧ್ಯಕ್ಷ ರಾಜೇಂದ್ರ, ಪಪಂ ಅಧ್ಯಕ್ಷೆ ಮಮತಾ ಇದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.